ಸೆಲ್ಫೀ ವಿಡಿಯೋ ಮಾಡಿ ವ್ಯಕ್ತಿ ಸಾವು…ಜಗಳ ಆಡಿದವರ ವಿರುದ್ದ ಪ್ರಕರಣ ದಾಖಲು…

ಸೆಲ್ಫೀ ವಿಡಿಯೋ ಮಾಡಿ ವ್ಯಕ್ತಿ ಸಾವು…ಜಗಳ ಆಡಿದವರ ವಿರುದ್ದ ಪ್ರಕರಣ ದಾಖಲು…

ಮೈಸೂರು,ಮಾ10,Tv10 ಕನ್ನಡ

ಪಾರ್ಶ್ವವಾಯು ಪೀಡಿತ ವ್ಯಕ್ತಿ ಅನುಮಾನಸ್ಪದವಾಗಿ ಮೃತಪಟ್ಟ ಘಟನೆ ಮೈಸೂರಿನ ಲಕ್ಷ್ಮಿಕಾಂತ ನಗರದಲ್ಲಿ ನಡೆದಿದೆ.ನನ್ನ ಸಾವಿಗೆ ಕೆಳಗಡೆ ಮನೆಯವರಾದ ಶ್ರೀನಿವಾಸ್ ಹಾಗೂ ಮಂಜುಳ ಕಾರಣ ಎಂದು ಸೆಲ್ಫೀ ವಿಡಿಯೋ ಮಾಡಿರುವ ಹಿನ್ನಲೆ ಮೃತರ ಪತ್ನಿ ತೆನಿಖೆ ನಡೆಸುವಂತೆ ಹೆಬ್ಬಾಳ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ರಾಜು ಅನುಮಾನಾಸ್ಪದವಾಗಿ ಮೃತಪಟ್ಟವರು.ಕೆಲವು ವರ್ಷಗಳ ಹಿಂದೆ ಪೆರಾಲಿಸಿಸ್ ಆದ ಕಾರಣ ರಾಜು ಮನೆಯಲ್ಲೇ ಉಳಿದುಕೊಂಡಿದ್ದಾರೆ.ಪತ್ನಿ ಜಯಪ್ರದ ಇನ್ಫೋಸಿಸ್ ನಲ್ಲಿ ಸೆಕ್ಯೂರಿಟಿ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದಾರೆ.ನಾಲ್ಕು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ರಾಜು ಸೆಲ್ಫೀ ವಿಡಿಯೋ ಮಾಡಿದ್ದಾರೆ.ಪತ್ನಿ ಹಾಗೂ ಮಕ್ಕಳಿಗೆ ತಿಳಿದು ಧೈರ್ಯ ತುಂಬಿ ಪ್ರಯತ್ನವನ್ನ ತಡೆಹಿಡಿದಿದ್ದಾರೆ.ಮರುದಿನವೇ ತಾನು ವಿಷ ಕುಡಿದಿರುವುದಾಗಿ ಪರಿಚಯಸ್ತರ ಬಳಿ ಹೇಳಿದ್ದಾರೆ.ಈ ಮಾಹಿತಿ ಜಯಪ್ರದಾ ರವರಿಗೆ ಗೊತ್ತಾಗಿ ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ.ಚಿಕಿತ್ಸೆ ಫಲಕಾರಿಯಾಗದೆ ರಾಜು ಮೃತಪಟ್ಟಿದ್ದಾರೆ.ಸೆಲ್ಪೀ ವಿಡಿಯೋ ಪ್ರಕಾರ ಕೆಳಗಡೆ ಮನೆಯವರು ಆಗಾಗ ಜಗಳ ಮಾಡುತ್ತಿದ್ದರು.ನನ್ನ ಸಾವಿಗೆ ಶ್ರೀನಿವಾಸ್ ಹಾಗೂ ಮಂಜುಳಾ ಕಾರಣ ಎಂದು ವಿಡಿಯೋದಲ್ಲಿ ತಿಳಿಸಿರುವ ಹಿನ್ನಲೆ ಪತಿಯ ಸಾವಿನ ಬಗ್ಗೆ ಅನುಮಾನವಿದೆ ತೆನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಕೆಳಗಡೆ ಮನೆಯವರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…
ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…

Leave a Reply

Your email address will not be published. Required fields are marked *