ಎಣ್ಣೆ ಕೊಡಿಸಲು ಹಣ ಇಲ್ಲ ಎಂದ ವ್ಯಕ್ತಿ ಕಾಲಿಗೆ ಕಲ್ಲಿನಿಂದ ಹಲ್ಲೆ ನಡೆಸಿ ಎಸ್ಕೇಪ್…ಅಪರಿಚಿತನ ವಿರುದ್ದ ಪ್ರಕರಣ ದಾಖಲು…

ಎಣ್ಣೆ ಕೊಡಿಸಲು ಹಣ ಇಲ್ಲ ಎಂದ ವ್ಯಕ್ತಿ ಕಾಲಿಗೆ ಕಲ್ಲಿನಿಂದ ಹಲ್ಲೆ ನಡೆಸಿ ಎಸ್ಕೇಪ್…ಅಪರಿಚಿತನ ವಿರುದ್ದ ಪ್ರಕರಣ ದಾಖಲು…

ಮೈಸೂರು,ಮಾ11,Tv10 ಕನ್ನಡ

ಎಣ್ಣೆ ಕೊಡಿಸಲು ಹಣ ಇಲ್ಲವೆಂದ ವ್ಯಕ್ತಿ ಮೇಲೆ ಅಪರಿಚಿತನೋರ್ವ ಕಲ್ಲಿನಿಂದ ಹಲ್ಲೆ ನಡೆಸಿ ಪರಾರಿಯಾದ ಘಟನೆ ಮೈಸೂರಿನ ದೇವರಾಜ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಮಧು ಎಂಬಾತ ಗಾಯಗೊಂಡಿದ್ದಾನೆ.ಹಲ್ಲೆ ನಡೆಸಿದ ಅಪರಿಚಿತ ಪರಾರಿಯಾಗಿದ್ದಾನೆ.ಗಾರೆ ಕೆಲಸ ಮಾಡುವ ಮಧು ನಾಲ್ಕು ದಿನಗಳ ಹಿಂದೆ ಬಿ.ಕೆ.ಸ್ಟ್ರೀಟ್ ನಲ್ಲಿರುವ ಬಾರ್ ಒಂದರಲ್ಲಿ ಎಣ್ಣೆ ಹೊಡೆದು ಫುಟ್ ಪಾತ್ ನಲ್ಲಿ ಕುಳಿತಿದ್ದಾಗ ಅಪರಿಚಿತನೋರ್ವ ಪರಿಚಯ ಮಾಡಿಕೊಂಡು ಎಣ್ಣೆ ಹೊಡೆಯುವಂತೆ ಪುಸಲಾಯಿಸಿದ್ದಾನೆ.ಅಪರಿಚಿತನ ಆಹ್ವಾನ ಸ್ವೀಕರಿಸಿ ಮಧು ಎಣ್ಣೆ ಹೊಡೆದಿದ್ದಾನೆ.ಬಾಟಲ್ ಖಾಲಿ ಆದ ನಂತರ ನನಗೂ ಎಣ್ಣೆ ಹೊಡೆಸು ಎಂದು ಅಪರಿಚಿತ ಕೇಳಿದ್ದಾನೆ.ನನ್ನ ಬಳಿ ಹಣ ಇಲ್ಲವೆಂದು ಮಧು ತಿಳಿಸಿದಾಗ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾ ಹಣ ಇಲ್ಲದಿದ್ದ ಮೇಲೆ ನನ್ನ ಎಣ್ಣೆ ಯಾಕೆ ಹೊಡೆದೆ ಎಂದು ಕಿರುಚಾಡುತ್ತಾ ಕಾಲಿನ ಮೇಲೆ ಕಲ್ಲನ್ನ ಎತ್ತಿಹಾಕಿ ಪರಾರಿಯಾಗಿದ್ದಾನೆ.ಗಾಯಗೊಂಡು ನರಳುತ್ತಿದ್ದ ಮಧು ನ ಸ್ಥಳೀಯರೊಬ್ಬರು ಕೆ.ಆರ್.ಆಸ್ಪತ್ರೆಗೆ ದಾಖಲಿಸಿದ್ದಾರೆ.ಅಪರಿಚಿತನ ಆಹ್ವಾನಕ್ಕೆ ಮಣಿದು ಎಣ್ಣೆ ಹೊಡೆದ ಮಧು ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾನೆ…

Spread the love

Related post

ಮೂಕಸ್ಪಂದನೆ ಜಾಗೃತಿ ಅಭಿಯಾನಕ್ಕೆ ಕೈ ಜೋಡಿಸಿದ ಮಾಜಿ ಸಂಸದ ಪ್ರತಾಪ್ ಸಿಂಹ…

ಮೂಕಸ್ಪಂದನೆ ಜಾಗೃತಿ ಅಭಿಯಾನಕ್ಕೆ ಕೈ ಜೋಡಿಸಿದ ಮಾಜಿ ಸಂಸದ ಪ್ರತಾಪ್ ಸಿಂಹ…

ಮೈಸೂರು,ಮಾ11,Tv10 ಕನ್ನಡ ಸುಡು ಬೇಸಿಗೆಯ ಉಷ್ಣಾಂಶದಲ್ಲಿ ಜೀವಸಂಕುಲಪ್ರಾಣಿಪಕ್ಷಿಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಕೆಎಂಪಿಕೆ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿರುವ ಮೂಕಸ್ಪಂದನೆ ಎಂಬ ಜಾಗೃತಿ ಅಭಿಯಾನಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ಕೈ…
ಖಾಸಗಿ ಜಾಗಕ್ಕೆ ಅತಿಕ್ರಮ ಪ್ರವೇಶ ಆರೋಪ…ಗ್ರಾ.ಪಂ.ಉಪಾಧ್ಯಕ್ಷ ಸೇರಿದಂ ನಾಲ್ವರ ವಿರುದ್ದ FIR…ನ್ಯಾಯಾಲಯದ ಆದೇಶದಂತೆ ಕ್ರಮ…

ಖಾಸಗಿ ಜಾಗಕ್ಕೆ ಅತಿಕ್ರಮ ಪ್ರವೇಶ ಆರೋಪ…ಗ್ರಾ.ಪಂ.ಉಪಾಧ್ಯಕ್ಷ ಸೇರಿದಂ ನಾಲ್ವರ ವಿರುದ್ದ FIR…ನ್ಯಾಯಾಲಯದ…

ಮೈಸೂರು,ಮಾ11,Tv10 ಕನ್ನಡ ಖಾಸಗಿ ಜಾಗಕ್ಕೆ ಅತಿಕ್ರಮವಾಗಿ ಪ್ರವೇಶ ಮಾಡಿ ಮಾಲೀಕರಿಗೆ ನಿಂದನೆ, ಕೊಲೆ ಬೆದರಿಕೆ ಆರೋಪದ ಹಿನ್ನಲೆ ನ್ಯಾಯಾಲಯದ ಆದೇಶದಂತೆಚಾಮುಂಡಿ ಬೆಟ್ಟ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವೈ.ಎಸ್‌. ರವಿ…
ಕಾರು ಪಡೆದು ವಂಚನೆ ಆರೋಪ…ಮೈ ಟಾರ್ಪಾಲಿನ್ಸ್ ಮಾಲೀಕ ಪ್ರದೀಪ್ ಸಿಂಗ್ ವಿರುದ್ದ ಪ್ರಕರಣ ದಾಖಲು…

ಕಾರು ಪಡೆದು ವಂಚನೆ ಆರೋಪ…ಮೈ ಟಾರ್ಪಾಲಿನ್ಸ್ ಮಾಲೀಕ ಪ್ರದೀಪ್ ಸಿಂಗ್ ವಿರುದ್ದ…

ಮೈಸೂರು,ಮಾ11,Tv10 ಕನ್ನಡ ವೈಯುಕ್ತಿಕ ಉಪಯೋಗಕ್ಕಾಗಿ ವ್ಯಕ್ತಿಯೊಬ್ಬರಿಂದ ಪಡೆದ ಕಾರನ್ನ ಹಿಂದಿರುಗಿಸದ ಮೈ ಟಾರ್ಪಾಲಿನ್ ಮಾಲೀಕ ಪ್ರದೀಪ್ ಸಿಂಗ್ ವಿರುದ್ದ ದೇವರಾಜ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.ಬೆಂಗಳೂರಿನ ರಾಜಿಯಾ…

Leave a Reply

Your email address will not be published. Required fields are marked *