ಹವಾ ಕ್ರಿಯೇಟ್ ಮಾಡಲು ಮಹಿಳೆ ಮೇಲೆ ಹಲ್ಲೆ…ಭಯದ ವಾತಾವರಣ ಮೂಡಿಸಿದ ಇಬ್ಬರು ಯುವಕರ ವಿರುದ್ದ ಪ್ರಕರಣ ದಾಖಲು…

ಹವಾ ಕ್ರಿಯೇಟ್ ಮಾಡಲು ಮಹಿಳೆ ಮೇಲೆ ಹಲ್ಲೆ…ಭಯದ ವಾತಾವರಣ ಮೂಡಿಸಿದ ಇಬ್ಬರು ಯುವಕರ ವಿರುದ್ದ ಪ್ರಕರಣ ದಾಖಲು…

ಮೈಸೂರು,ಮಾ12,Tv10 ಕನ್ನಡ

ನಮಗೆ ಇಲ್ಲಿ ಯಾರೂ ಗೌರವ ಕೊಡುತ್ತಿಲ್ಲ,ನಮ್ಮನ್ನ ಕಂಡರೆ ಏರಿಯಾದಲ್ಲಿ ಯಾರಿಗೂ ಭಯವಿಲ್ಲ,ಒಂದು ಹೆಣ ಉರುಳಿಸಿದ್ರೆ ನಾವು ಏನೆಂದು ಗೊತ್ತಾಗುತ್ತೆ ಎಂದು ಹೇಳಿಕೊಂಡು ಏರಿಯಾದಲ್ಲಿ ಹವಾ ಕ್ರಿಯೇಟ್ ಮಾಡುವ ಉದ್ದೇಶದಿಂದ ಇಬ್ಬರು ಯುವಕರು ಮಹಿಳೆ ಹಾಗೂ ಓರ್ವ ವ್ಯಕ್ತಿ ಮೇಲೆ ಕಬ್ಬಿಣದ ರಾಡ್ ಹಾಗೂ ಕಲ್ಲಿನಿಂದ ಹಲ್ಲೆ ಮಾಡಿರುವ ಘಟನೆ ಮೇಟಗಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಏಕಲವ್ಯನಗರದಲ್ಲಿ ನಡೆದಿದೆ.ಯುವಕರಿಂದ ಹಲ್ಲೆಗೊಳಗಾದವರು ಪದ್ಮ ಹಾಗೂ ನಾಗೇಂದ್ರ.ಹವಾ ಕ್ರಿಯೇಟ್ ಮಾಡುವ ಭರದಲ್ಲಿ ಹಲ್ಲೆ ನಡೆಸಿದವರು ಓಂಕಾರ್ ಹಾಗೂ ಗೌರೀಶ್.

ಪದ್ಮ ರವರ ಅಳಿಯ ಶ್ರೀಧರ್ ರವರನ್ನ ನಡುರಸ್ತೆಯಲ್ಲಿ ನಿಲ್ಲಿಸಿಕೊಂಡ ಓಂಕಾರ್ ಹಾಗೂ ಗೌರೀಶ್ ನಾವು ಓಡಾಡುವಾಗ ಗೌರವ ಕೊಡುತ್ತಿಲ್ಲ.ನಮ್ಮ ಬಗ್ಗೆ ನಿಮಗೆ ಭಯವಿಲ್ಲ ಎಂದು ಹೇಳುತ್ತಾ ಹಲ್ಲೆಗೆ ಮುಂದಾಗಿದ್ದಾರೆ.ಈ ವೇಳೆ ಪದ್ಮ ಮಧ್ಯ ಪ್ರವೇಶಿಸಿ ಅಳಿಯನನ್ನ ಬಿಡಿಸಿಕೊಳ್ಳಲು ಮುಂದಾಗಿದ್ದಾರೆ.ಒಂದು ಹೆಣ ಉರುಳಿದ್ರೆ ನಾವು ಈ ಏರಿಯಾದಲ್ಲಿ ಏನೆಂದು ಗೊತ್ತಾಗುತ್ತೆ ಎಂದು ಪದ್ಮ ಮೇಲೆ ರಾಡ್ ನಿಂದ ಬೀಸಿದ್ದಾರೆ.ನಂತರ ಕಲ್ಲನ್ನ ತೆಗೆದು ಕಾಲಿನ ಮೇಲೆ ಎತ್ತಿ ಹಾಕಿದ್ದಾರೆ.ಈ ವೇಳೆ ಪದ್ಮ ರವರ ಕಡೆಯವರು ಬಂದು ಜಗಳ ಬಿಡಿಸಿದ್ದಾರೆ.ನಂತರ ಮುಂದೆ ಓಡಿದ ಓಂಕಾರ್ ಹಾಗೂ ಗೌರೀಶ್ ಟೀ ಅಂಗಡಿಯ ಬಳಿ ಕುಳಿತಿದ್ದ ನಾಗೇಂದ್ರ ಎಂಬುವರ ಮೇಲೂ ಅಟ್ಯಾಕ್ ಮಾಡಿ ಒಬ್ಬರನ್ನ ಸಾಯಿಸಿ ಹೆಸರು ಮಾಡೋಣ ಎಂದು ಕಿರುಚಾಡಿ ಓಡಿದ್ದಾರೆ.ಏರಿಯಾದಲ್ಲಿ ಹೆಸರು ಮಾಡಬೇಕೆಂಬ ಉದ್ದೇಶದಿಂದ ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಿರುವುದಾಗಿ ಆರೋಪಿಸಿ ಪದ್ಮ ರವರು ಓಂಕಾರ್ ಹಾಗೂ ಗೌರೀಶ್ ವಿರುದ್ದ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…

Leave a Reply

Your email address will not be published. Required fields are marked *