ನ್ಯಾಯಾಲಯದ ಆವರಣದಲ್ಲಿ ಕೊಲೆ ಬೆದರಿಕೆ ಆರೋಪ…ದಂಪತಿ ಸೇರಿದಂತೆ ಮೂವರ ವಿರುದ್ದ ಪ್ರಕರಣ ದಾಖಲು…

ನ್ಯಾಯಾಲಯದ ಆವರಣದಲ್ಲಿ ಕೊಲೆ ಬೆದರಿಕೆ ಆರೋಪ…ದಂಪತಿ ಸೇರಿದಂತೆ ಮೂವರ ವಿರುದ್ದ ಪ್ರಕರಣ ದಾಖಲು…

ಮೈಸೂರು,ಮಾ12,Tv10 ಕನ್ನಡ

ಹಣಕಾಸಿನ ವಿಚಾರದಲ್ಲಿ ಮೈಸೂರು ನ್ಯಾಯಾಲಯ ಆವರಣದಲ್ಲಿ ವ್ಯಕ್ತಿಯೋರ್ವರಿಗೆ ಕೊಲೆ ಬೆದರಿಕೆ ಹಾಕಿರುವ ಪ್ರಕರಣ ಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ನ್ಯಾಯಾಲಯದ ಆದೇಶದಂತೆ ಮೂವರ ವಿರುದ್ದ ಪ್ರಕರಣ ದಾಖಲಾಗಿದೆ.ಬೆಂಗಳೂರು ಮೂಲದ ಸತೀಶ್, ಸಂಜಯ್ ಹಾಗೂ ಅನಿತಾ ಸಂಜಯ್ ವಿರುದ್ದ ಪ್ರಕರಣ ದಾಖಲಾಗಿದೆ.ಮೈಸೂರಿನ ಕೆ.ಜಿ.ಕೊಪ್ಪಲಿನ ನಿವಾಸಿ ದಿನೇಶ್ ಎಂಬುವರು ಪ್ರಕರಣ ದಾಖಲಿಸಿದ್ದಾರೆ.

2018 ರಲ್ಲಿ ದಿನೇಶ್ ಎಕ್ಸಲೆಂಟ್ ಸೋಲಾರ್ಸ್ ಎಂಬ ಕಂಪನಿ ಪ್ರಾರಂಭಿಸಿದ್ದರು.ಪರಿಚಯಸ್ತರ ಮೂಲಕ ದಿನೇಶ್ ರವರಿಗೆ ಸಂಜಯ್ ಹಾಗೂ ಅನಿತಾ ಸಂಜಯ್ ಪರಿಚಯವಾಗಿದ್ದಾರೆ.ಸೋಲಾರ್ ಪವರ್ ಪ್ರಾಜೆಕ್ಟ್ ಆರಂಭಿಸಲು ದಿನೇಶ್ ಗೆ ಸಲಹೆ ನೀಡಿದ್ದಾರೆ.ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದಿಂದ ಅಗತ್ಯ ಅನುಮತಿ ಕೊಡಿಸುವ ಭರವಸೆ ಕೊಟ್ಟಿದ್ದಾರೆ.ಬಂಡವಾಳ ಹಾಕುವವರಿಗೆ ಪ್ರಾಜೆಕ್ಟ್ ಹಸ್ತಾಂತರವಾಗುತ್ತದೆ ಹಾಗೂ ಲಾಭಾಂಶ ಸಿಗುತ್ತದೆ ಎಂದು ತಿಳಿಸಿ ಹಲವು ದಾಖಲೆಗಳನ್ನ ತೋರಿಸಿದ್ದಾರೆ.ದಂಪತಿ ಮಾತನ್ನ ನಂಬಿದ ದಿನೇಶ್ ಕೆಲವರಿಂದ ಹಣ ಹೂಡಿಕೆ ಮಾಡಿಸಿದ್ದಾರೆ.ಸತೀಶ್ ರವರು ಎಮ್.ಓ.ಯು ಒಪ್ಪಂದಕ್ಕೆ ಸಹಿ ಹಾಕಿಸಿಕೊಂಡಿದ್ದಾರೆ. ದಂಪತಿ ವ್ಯವಹರಿಸಿದ್ದಾರೆ.ನಂತರ ದಿನೇಶ್ ರವರಿಗೆ ಗೊತ್ತಾಗಿದೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ದಾಖಲೆಗಳು ನಕಲಿ ಎಂದು.ಈ ನಡುವೆ ಬಲವಂತವಾಗಿ ಎಮ್.ಓ.ಯು.ಮಾಡಿಸಿಕೊಂಡು ಸಹಿ ಹಾಕಿಸಿಕೊಂಡಿರುವುದಾಗಿ ಆರೋಪ ಬಂದಿದೆ.ಈ ಕುರಿತಂತೆ ಸತೀಶ್ ಮಂಗಳೂರಿನ ನ್ಯಾಯಾಲಯದಲ್ಲಿ ದಾವೆ ಹೂಡಿದ್ದಾರೆ.ಪ್ರಕರಣದ ಬಗ್ಗೆ ಮಾಹಿತಿ ಪಡೆಯಲು ದಿನೇಶ್ ರವರು ಮೈಸೂರಿನ ನ್ಯಾಯಾಲಯಕ್ಕೆ ಬಂದಾಗ ಹಣ ಹಿಂದಿರುಗಿಸುವಂತೆ ಸತೀಶ್ ಧಂಕಿ ಹಾಕಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆಂದು ಎಪ್.ಐ.ಆರ್.ನಲ್ಲಿ ಉಲ್ಲೇಖಿಸಲಾಗಿದ್ದು ಸತೀಶ್, ಸಂಜಯ್ ಹಾಗೂ ಅನಿತಾ ಸಂಜಯ್ ವಿರುದ್ದ ಕಾನೂನು ರೀತ್ಯಾ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ…

Spread the love

Related post

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…

1 Comments

  • I am extremely inspired along with your writing abilities and also with the format on your blog.
    Is that this a paid theme or did you customize it your self?
    Anyway stay up the nice high quality writing, it’s rare to peer
    a great blog like this one today. Tools For Creators!

Leave a Reply

Your email address will not be published. Required fields are marked *