ನ್ಯಾಯಾಲಯದ ಆವರಣದಲ್ಲಿ ಕೊಲೆ ಬೆದರಿಕೆ ಆರೋಪ…ದಂಪತಿ ಸೇರಿದಂತೆ ಮೂವರ ವಿರುದ್ದ ಪ್ರಕರಣ ದಾಖಲು…

ನ್ಯಾಯಾಲಯದ ಆವರಣದಲ್ಲಿ ಕೊಲೆ ಬೆದರಿಕೆ ಆರೋಪ…ದಂಪತಿ ಸೇರಿದಂತೆ ಮೂವರ ವಿರುದ್ದ ಪ್ರಕರಣ ದಾಖಲು…

ಮೈಸೂರು,ಮಾ12,Tv10 ಕನ್ನಡ

ಹಣಕಾಸಿನ ವಿಚಾರದಲ್ಲಿ ಮೈಸೂರು ನ್ಯಾಯಾಲಯ ಆವರಣದಲ್ಲಿ ವ್ಯಕ್ತಿಯೋರ್ವರಿಗೆ ಕೊಲೆ ಬೆದರಿಕೆ ಹಾಕಿರುವ ಪ್ರಕರಣ ಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ನ್ಯಾಯಾಲಯದ ಆದೇಶದಂತೆ ಮೂವರ ವಿರುದ್ದ ಪ್ರಕರಣ ದಾಖಲಾಗಿದೆ.ಬೆಂಗಳೂರು ಮೂಲದ ಸತೀಶ್, ಸಂಜಯ್ ಹಾಗೂ ಅನಿತಾ ಸಂಜಯ್ ವಿರುದ್ದ ಪ್ರಕರಣ ದಾಖಲಾಗಿದೆ.ಮೈಸೂರಿನ ಕೆ.ಜಿ.ಕೊಪ್ಪಲಿನ ನಿವಾಸಿ ದಿನೇಶ್ ಎಂಬುವರು ಪ್ರಕರಣ ದಾಖಲಿಸಿದ್ದಾರೆ.

2018 ರಲ್ಲಿ ದಿನೇಶ್ ಎಕ್ಸಲೆಂಟ್ ಸೋಲಾರ್ಸ್ ಎಂಬ ಕಂಪನಿ ಪ್ರಾರಂಭಿಸಿದ್ದರು.ಪರಿಚಯಸ್ತರ ಮೂಲಕ ದಿನೇಶ್ ರವರಿಗೆ ಸಂಜಯ್ ಹಾಗೂ ಅನಿತಾ ಸಂಜಯ್ ಪರಿಚಯವಾಗಿದ್ದಾರೆ.ಸೋಲಾರ್ ಪವರ್ ಪ್ರಾಜೆಕ್ಟ್ ಆರಂಭಿಸಲು ದಿನೇಶ್ ಗೆ ಸಲಹೆ ನೀಡಿದ್ದಾರೆ.ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದಿಂದ ಅಗತ್ಯ ಅನುಮತಿ ಕೊಡಿಸುವ ಭರವಸೆ ಕೊಟ್ಟಿದ್ದಾರೆ.ಬಂಡವಾಳ ಹಾಕುವವರಿಗೆ ಪ್ರಾಜೆಕ್ಟ್ ಹಸ್ತಾಂತರವಾಗುತ್ತದೆ ಹಾಗೂ ಲಾಭಾಂಶ ಸಿಗುತ್ತದೆ ಎಂದು ತಿಳಿಸಿ ಹಲವು ದಾಖಲೆಗಳನ್ನ ತೋರಿಸಿದ್ದಾರೆ.ದಂಪತಿ ಮಾತನ್ನ ನಂಬಿದ ದಿನೇಶ್ ಕೆಲವರಿಂದ ಹಣ ಹೂಡಿಕೆ ಮಾಡಿಸಿದ್ದಾರೆ.ಸತೀಶ್ ರವರು ಎಮ್.ಓ.ಯು ಒಪ್ಪಂದಕ್ಕೆ ಸಹಿ ಹಾಕಿಸಿಕೊಂಡಿದ್ದಾರೆ. ದಂಪತಿ ವ್ಯವಹರಿಸಿದ್ದಾರೆ.ನಂತರ ದಿನೇಶ್ ರವರಿಗೆ ಗೊತ್ತಾಗಿದೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ದಾಖಲೆಗಳು ನಕಲಿ ಎಂದು.ಈ ನಡುವೆ ಬಲವಂತವಾಗಿ ಎಮ್.ಓ.ಯು.ಮಾಡಿಸಿಕೊಂಡು ಸಹಿ ಹಾಕಿಸಿಕೊಂಡಿರುವುದಾಗಿ ಆರೋಪ ಬಂದಿದೆ.ಈ ಕುರಿತಂತೆ ಸತೀಶ್ ಮಂಗಳೂರಿನ ನ್ಯಾಯಾಲಯದಲ್ಲಿ ದಾವೆ ಹೂಡಿದ್ದಾರೆ.ಪ್ರಕರಣದ ಬಗ್ಗೆ ಮಾಹಿತಿ ಪಡೆಯಲು ದಿನೇಶ್ ರವರು ಮೈಸೂರಿನ ನ್ಯಾಯಾಲಯಕ್ಕೆ ಬಂದಾಗ ಹಣ ಹಿಂದಿರುಗಿಸುವಂತೆ ಸತೀಶ್ ಧಂಕಿ ಹಾಕಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆಂದು ಎಪ್.ಐ.ಆರ್.ನಲ್ಲಿ ಉಲ್ಲೇಖಿಸಲಾಗಿದ್ದು ಸತೀಶ್, ಸಂಜಯ್ ಹಾಗೂ ಅನಿತಾ ಸಂಜಯ್ ವಿರುದ್ದ ಕಾನೂನು ರೀತ್ಯಾ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *