ಗಂಡ ಮಾಡಿದ ಸಾಲಕ್ಕೆ ಪತ್ನಿಗೆ ಟಾರ್ಚರ್…ಅಕ್ರಮವಾಗಿ ಬಂಧನದಲ್ಲಿಟ್ಟ ಆರೋಪ…ನಾಲ್ವರ ವಿರುದ್ದ FIR ದಾಖಲು…

ಗಂಡ ಮಾಡಿದ ಸಾಲಕ್ಕೆ ಪತ್ನಿಗೆ ಟಾರ್ಚರ್…ಅಕ್ರಮವಾಗಿ ಬಂಧನದಲ್ಲಿಟ್ಟ ಆರೋಪ…ನಾಲ್ವರ ವಿರುದ್ದ FIR ದಾಖಲು…

ಮೈಸೂರು,ಮಾ13,Tv10 ಕನ್ನಡ

ಗಂಡ ಮಾಡಿದ ಸಾಲಕ್ಕೆ ಪತ್ನಿಗೆ ಟಾರ್ಚರ್ ನೀಡಿದ ಪ್ರಕರಣವೊಂದು ಬೆಳಕಿಗೆ ಬಂದಿದೆ.ಮೈಸೂರಿನಿಂದ ಬಲವಂತವಾಗಿ ಬಾಗಲಕೋಟೆಗೆ ಕರೆದೊಯ್ದು ಎರಡು ತಿಂಗಳ ಕಾಲ ಅಕ್ರಮವಾಗಿ ಕೂಡಿಹಾಕಿ ಮೊಬೈಲ್ ಕಸಿದು ಕೆಲಸ ಮಾಡಿಸಿಕೊಂಡು ವಾಪಸ್ ಕಳಿಸಿದ್ದಾರೆ.ಬಂಧನದಿಂದ ಹೊರಬಂದ ಮಹಿಳೆ ನಾಲ್ವರ ವಿರುದ್ದ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಮಹದೇಶ್ವರ ಬಡಾವಣೆ ನಿವಾಸಿ ಮಹದೇವಿ ಟಾರ್ಚರ್ ಅನುಭವಿಸಿದವರು.ಬಾಗಲಕೋಟೆ ನಿವಾಸಿ ಆಶಾ,ನಿರ್ಮಲಾ,ಆಶಾ ರವರ ಚಿಕ್ಕಮ್ಮ ಹಾಗೂ ಆಶಾ ರವರ ತಾಯಿ ವಿರುದ್ದ ಪ್ರಕರಣ ದಾಖಲಾಗಿದೆ.

ಮಹದೇವಿ ಪತಿ ಹನುಮಂತ ಮನೆ ಮನೆಗಳಿಗೆ ತೆರಳಿ ಪಾಠ ಹೇಳಿಕೊಡುತ್ತಾನೆ.ಕೆಲಸ ಕೊಡಿಸುವುದಾಗಿ ನಂಬಿಸಿ ಹಲವರಿಂದ ಹಣ ಪಡೆದಿದ್ದಾನೆ.ಅದೇ ರೀತಿ ಆಶಾ ರವರಿಂದಲೂ ಹಣ ಪಡೆದಿದ್ದಾನೆ.ಕೆಲಸ ಕೊಡಿಸದ ಹಿನ್ನಲೆ ಹಣಕ್ಕಾಗಿ ಒತ್ತಡ ಹೆಚ್ಚಾದ ಕಾರಣ ಹನುಮಂತ ತಲೆಮರೆಸಿಕೊಂಡಿದ್ದಾನೆ.ಹಣ ಕೊಟ್ಟ ಆಶಾ ರವರು ಜನವರಿ ತಿಂಗಳಿನಲ್ಲಿ ಮೈಸೂರಿಗೆ ಬಂದು ಹನುಮಂತನ ಪತ್ನಿ ಮಹದೇವಿ ಮೇಲೆ ಹಣಕ್ಕಾಗಿ ಒತ್ತಡ ಹೇರಿದ್ದಾರೆ.ಈ ವೇಳೆ ಮಹದೇವಿ ಮೊಬೈಲ್ ಕಸಿದ ಆಶಾ ಮನೆಯವರು ಮಹಾದೇವಿ,ಈಕೆ ತಂಗಿ ಲಲಿತ,ಮಗ ವೇದಾಂತ್ ಮೂವರನ್ನ ಬಲವಂತವಾಗಿ ಬಾಗಲಕೋಟೆಗೆ ಕರೆದೊಯ್ದು 2 ತಿಂಗಳ ಕಾಲ ಬಂಧನದಲ್ಲಿ ಇಟ್ಟುಕೊಂಡು ಕೆಲಸ ಮಾಡಿಸಿಕೊಂಡು ನಂತರ ಬಿಡುಗಡೆ ಮಾಡಿ ಕಳಿಸಿದ್ದಾರೆ.ಗಂಡನ ಸಾಲಕ್ಕಾಗಿ ತನಗೆ ಕಿರುಕುಳ ನೀಡಿದ ಆಶಾ ಹಾಗೂ ಇತರರ ಮೇಲೆ ಮಹದೇವಿ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ ಹೆಜ್ಜೆಯಂತ ಗರುತು ಪತ್ತೆ…ಕುಟುಂಬಸ್ಥರಲ್ಲಿ ಆತಂಕ…

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ…

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ ಹೆಜ್ಜೆಯಂತ ಗರುತು ಪತ್ತೆ…ಕುಟುಂಬಸ್ಥರಲ್ಲಿ ಆತಂಕ… ನಂಜನಗೂಡು,ಮೇ26,Tv10 ಕನ್ನಡ ಜಮೀನಿಗೆ ತೆರಳಿದ ಮಹಿಳೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಪ್ರಕರಣ…
ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ ಆಚರಣೆ…

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ…

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ ಆಚರಣೆ… ಮೈಸೂರು,ಮೇ26,Tv10 ಕನ್ನಡ ಶ್ರೀಗಣಪತಿ ಸಚ್ಚಿದಾನಂದ ಶ್ರೀಗಳ 84 ನೇ ಹುಟ್ಟುಹಬ್ಬ ಆಶ್ರಮದಲ್ಲಿ ಸಂಭ್ರಮದಿಂದ ನೆರವೇರುತ್ತಿದೆ.ವಿವಿಧ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವರಾದ ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಬೈರತಿ ಸುರೇಶ್, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಹಿರಿಯ ಕಾಂಗ್ರೆಸ್ ಮುಖಂಡರೂ ಹರಿಯಾಣ ಉಸ್ತುವಾರಿ ಬಿ.ಕೆ.ಹರಿಪ್ರಸಾದ್ ಮತ್ತು ಕಾನೂನು ಸಲಹೆಗಾರರಾದ ಪೊನ್ನಣ್ಣ ಸೇರಿ ಹಲವು ಪ್ರಮುಖರ ಜೊತೆಗೆ ದೆಹಲಿಯ ಕನ್ನಡ ಭವನದಲ್ಲಿ ಬೆಳಗಿನ ಉಪಹಾರ ಸವಿದರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವರಾದ ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಬೈರತಿ…

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವರಾದ ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಬೈರತಿ ಸುರೇಶ್, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಹಿರಿಯ ಕಾಂಗ್ರೆಸ್ ಮುಖಂಡರೂ ಹರಿಯಾಣ ಉಸ್ತುವಾರಿ ಬಿ.ಕೆ.ಹರಿಪ್ರಸಾದ್ ಮತ್ತು ಕಾನೂನು ಸಲಹೆಗಾರರಾದ…

Leave a Reply

Your email address will not be published. Required fields are marked *