ಗಂಡ ಮಾಡಿದ ಸಾಲಕ್ಕೆ ಪತ್ನಿಗೆ ಟಾರ್ಚರ್…ಅಕ್ರಮವಾಗಿ ಬಂಧನದಲ್ಲಿಟ್ಟ ಆರೋಪ…ನಾಲ್ವರ ವಿರುದ್ದ FIR ದಾಖಲು…

ಗಂಡ ಮಾಡಿದ ಸಾಲಕ್ಕೆ ಪತ್ನಿಗೆ ಟಾರ್ಚರ್…ಅಕ್ರಮವಾಗಿ ಬಂಧನದಲ್ಲಿಟ್ಟ ಆರೋಪ…ನಾಲ್ವರ ವಿರುದ್ದ FIR ದಾಖಲು…

ಮೈಸೂರು,ಮಾ13,Tv10 ಕನ್ನಡ

ಗಂಡ ಮಾಡಿದ ಸಾಲಕ್ಕೆ ಪತ್ನಿಗೆ ಟಾರ್ಚರ್ ನೀಡಿದ ಪ್ರಕರಣವೊಂದು ಬೆಳಕಿಗೆ ಬಂದಿದೆ.ಮೈಸೂರಿನಿಂದ ಬಲವಂತವಾಗಿ ಬಾಗಲಕೋಟೆಗೆ ಕರೆದೊಯ್ದು ಎರಡು ತಿಂಗಳ ಕಾಲ ಅಕ್ರಮವಾಗಿ ಕೂಡಿಹಾಕಿ ಮೊಬೈಲ್ ಕಸಿದು ಕೆಲಸ ಮಾಡಿಸಿಕೊಂಡು ವಾಪಸ್ ಕಳಿಸಿದ್ದಾರೆ.ಬಂಧನದಿಂದ ಹೊರಬಂದ ಮಹಿಳೆ ನಾಲ್ವರ ವಿರುದ್ದ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಮಹದೇಶ್ವರ ಬಡಾವಣೆ ನಿವಾಸಿ ಮಹದೇವಿ ಟಾರ್ಚರ್ ಅನುಭವಿಸಿದವರು.ಬಾಗಲಕೋಟೆ ನಿವಾಸಿ ಆಶಾ,ನಿರ್ಮಲಾ,ಆಶಾ ರವರ ಚಿಕ್ಕಮ್ಮ ಹಾಗೂ ಆಶಾ ರವರ ತಾಯಿ ವಿರುದ್ದ ಪ್ರಕರಣ ದಾಖಲಾಗಿದೆ.

ಮಹದೇವಿ ಪತಿ ಹನುಮಂತ ಮನೆ ಮನೆಗಳಿಗೆ ತೆರಳಿ ಪಾಠ ಹೇಳಿಕೊಡುತ್ತಾನೆ.ಕೆಲಸ ಕೊಡಿಸುವುದಾಗಿ ನಂಬಿಸಿ ಹಲವರಿಂದ ಹಣ ಪಡೆದಿದ್ದಾನೆ.ಅದೇ ರೀತಿ ಆಶಾ ರವರಿಂದಲೂ ಹಣ ಪಡೆದಿದ್ದಾನೆ.ಕೆಲಸ ಕೊಡಿಸದ ಹಿನ್ನಲೆ ಹಣಕ್ಕಾಗಿ ಒತ್ತಡ ಹೆಚ್ಚಾದ ಕಾರಣ ಹನುಮಂತ ತಲೆಮರೆಸಿಕೊಂಡಿದ್ದಾನೆ.ಹಣ ಕೊಟ್ಟ ಆಶಾ ರವರು ಜನವರಿ ತಿಂಗಳಿನಲ್ಲಿ ಮೈಸೂರಿಗೆ ಬಂದು ಹನುಮಂತನ ಪತ್ನಿ ಮಹದೇವಿ ಮೇಲೆ ಹಣಕ್ಕಾಗಿ ಒತ್ತಡ ಹೇರಿದ್ದಾರೆ.ಈ ವೇಳೆ ಮಹದೇವಿ ಮೊಬೈಲ್ ಕಸಿದ ಆಶಾ ಮನೆಯವರು ಮಹಾದೇವಿ,ಈಕೆ ತಂಗಿ ಲಲಿತ,ಮಗ ವೇದಾಂತ್ ಮೂವರನ್ನ ಬಲವಂತವಾಗಿ ಬಾಗಲಕೋಟೆಗೆ ಕರೆದೊಯ್ದು 2 ತಿಂಗಳ ಕಾಲ ಬಂಧನದಲ್ಲಿ ಇಟ್ಟುಕೊಂಡು ಕೆಲಸ ಮಾಡಿಸಿಕೊಂಡು ನಂತರ ಬಿಡುಗಡೆ ಮಾಡಿ ಕಳಿಸಿದ್ದಾರೆ.ಗಂಡನ ಸಾಲಕ್ಕಾಗಿ ತನಗೆ ಕಿರುಕುಳ ನೀಡಿದ ಆಶಾ ಹಾಗೂ ಇತರರ ಮೇಲೆ ಮಹದೇವಿ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ..

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ…

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ.. ಮೈಸೂರು,ಏ8,Tv10 ಕನ್ನಡ ಖ್ಯಾತ ಯೋಗ ಗುರು ಡಾಕ್ಟರ್ ರಾಘವೇಂದ್ರ ಪೈ…
ಲಯನ್ಸ್ ಅಂತರಾಷ್ಟ್ರೀಯ ಸಂಸ್ಥೆಯ ಎರಡನೇ ಉಪ ರಾಜ್ಯಪಾಲರಾಗಿ (Elect) ಲಯನ್ ಎಂ.ಸಿದ್ದೇಗೌಡ ಆಯ್ಕೆ

ಲಯನ್ಸ್ ಅಂತರಾಷ್ಟ್ರೀಯ ಸಂಸ್ಥೆಯ ಎರಡನೇ ಉಪ ರಾಜ್ಯಪಾಲರಾಗಿ (Elect) ಲಯನ್ ಎಂ.ಸಿದ್ದೇಗೌಡ…

ಲಯನ್ಸ್ ಅಂತರಾಷ್ಟ್ರೀಯ ಸಂಸ್ಥೆಯ ಎರಡನೇ ಉಪ ರಾಜ್ಯಪಾಲರಾಗಿ (Elect) ಲಯನ್ ಎಂ.ಸಿದ್ದೇಗೌಡ ಆಯ್ಕೆ ಲಯನ್ಸ್ ಅಂತರಾಷ್ಟ್ರೀಯ ಸಂಸ್ಥೆಯ ಜಿಲ್ಲಾ 317ಜಿ ವ್ಯಾಪ್ತಿಯಲ್ಲಿ ನಡೆದ ಇತ್ತೀಚಿನ ಜಿಲ್ಲಾ ಚುನಾವಣೆಯಲ್ಲಿ ಸೇವಾ…
ಪ್ರಥಮ ದರ್ಜೆ ಕಂಟ್ರಾಕ್ಟರ್ ಅನುಮಾನಾಸ್ಪದ ಸಾವು…ನಾಪತ್ತೆಯಾದವರು ನದಿಯಲ್ಲಿ ಶವವಾಗಿ ಪತ್ತೆ…

ಪ್ರಥಮ ದರ್ಜೆ ಕಂಟ್ರಾಕ್ಟರ್ ಅನುಮಾನಾಸ್ಪದ ಸಾವು…ನಾಪತ್ತೆಯಾದವರು ನದಿಯಲ್ಲಿ ಶವವಾಗಿ ಪತ್ತೆ…

ಪ್ರಥಮ ದರ್ಜೆ ಕಂಟ್ರಾಕ್ಟರ್ ಅನುಮಾನಾಸ್ಪದ ಸಾವು…ನಾಪತ್ತೆಯಾದವರು ನದಿಯಲ್ಲಿ ಶವವಾಗಿ ಪತ್ತೆ… ಮಂಡ್ಯ,ಏ8,Tv10 ಕನ್ನಡ ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಕಂಟ್ರಾಕ್ಟರ್ ನದಿಯಲ್ಲಿ ಶವವಾಗಿ ಪತ್ತೆಯಾದ ಘಟನೆ…

Leave a Reply

Your email address will not be published. Required fields are marked *