ಗಂಡ ಮಾಡಿದ ಸಾಲಕ್ಕೆ ಪತ್ನಿಗೆ ಟಾರ್ಚರ್…ಅಕ್ರಮವಾಗಿ ಬಂಧನದಲ್ಲಿಟ್ಟ ಆರೋಪ…ನಾಲ್ವರ ವಿರುದ್ದ FIR ದಾಖಲು…

ಗಂಡ ಮಾಡಿದ ಸಾಲಕ್ಕೆ ಪತ್ನಿಗೆ ಟಾರ್ಚರ್…ಅಕ್ರಮವಾಗಿ ಬಂಧನದಲ್ಲಿಟ್ಟ ಆರೋಪ…ನಾಲ್ವರ ವಿರುದ್ದ FIR ದಾಖಲು…

ಮೈಸೂರು,ಮಾ13,Tv10 ಕನ್ನಡ

ಗಂಡ ಮಾಡಿದ ಸಾಲಕ್ಕೆ ಪತ್ನಿಗೆ ಟಾರ್ಚರ್ ನೀಡಿದ ಪ್ರಕರಣವೊಂದು ಬೆಳಕಿಗೆ ಬಂದಿದೆ.ಮೈಸೂರಿನಿಂದ ಬಲವಂತವಾಗಿ ಬಾಗಲಕೋಟೆಗೆ ಕರೆದೊಯ್ದು ಎರಡು ತಿಂಗಳ ಕಾಲ ಅಕ್ರಮವಾಗಿ ಕೂಡಿಹಾಕಿ ಮೊಬೈಲ್ ಕಸಿದು ಕೆಲಸ ಮಾಡಿಸಿಕೊಂಡು ವಾಪಸ್ ಕಳಿಸಿದ್ದಾರೆ.ಬಂಧನದಿಂದ ಹೊರಬಂದ ಮಹಿಳೆ ನಾಲ್ವರ ವಿರುದ್ದ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಮಹದೇಶ್ವರ ಬಡಾವಣೆ ನಿವಾಸಿ ಮಹದೇವಿ ಟಾರ್ಚರ್ ಅನುಭವಿಸಿದವರು.ಬಾಗಲಕೋಟೆ ನಿವಾಸಿ ಆಶಾ,ನಿರ್ಮಲಾ,ಆಶಾ ರವರ ಚಿಕ್ಕಮ್ಮ ಹಾಗೂ ಆಶಾ ರವರ ತಾಯಿ ವಿರುದ್ದ ಪ್ರಕರಣ ದಾಖಲಾಗಿದೆ.

ಮಹದೇವಿ ಪತಿ ಹನುಮಂತ ಮನೆ ಮನೆಗಳಿಗೆ ತೆರಳಿ ಪಾಠ ಹೇಳಿಕೊಡುತ್ತಾನೆ.ಕೆಲಸ ಕೊಡಿಸುವುದಾಗಿ ನಂಬಿಸಿ ಹಲವರಿಂದ ಹಣ ಪಡೆದಿದ್ದಾನೆ.ಅದೇ ರೀತಿ ಆಶಾ ರವರಿಂದಲೂ ಹಣ ಪಡೆದಿದ್ದಾನೆ.ಕೆಲಸ ಕೊಡಿಸದ ಹಿನ್ನಲೆ ಹಣಕ್ಕಾಗಿ ಒತ್ತಡ ಹೆಚ್ಚಾದ ಕಾರಣ ಹನುಮಂತ ತಲೆಮರೆಸಿಕೊಂಡಿದ್ದಾನೆ.ಹಣ ಕೊಟ್ಟ ಆಶಾ ರವರು ಜನವರಿ ತಿಂಗಳಿನಲ್ಲಿ ಮೈಸೂರಿಗೆ ಬಂದು ಹನುಮಂತನ ಪತ್ನಿ ಮಹದೇವಿ ಮೇಲೆ ಹಣಕ್ಕಾಗಿ ಒತ್ತಡ ಹೇರಿದ್ದಾರೆ.ಈ ವೇಳೆ ಮಹದೇವಿ ಮೊಬೈಲ್ ಕಸಿದ ಆಶಾ ಮನೆಯವರು ಮಹಾದೇವಿ,ಈಕೆ ತಂಗಿ ಲಲಿತ,ಮಗ ವೇದಾಂತ್ ಮೂವರನ್ನ ಬಲವಂತವಾಗಿ ಬಾಗಲಕೋಟೆಗೆ ಕರೆದೊಯ್ದು 2 ತಿಂಗಳ ಕಾಲ ಬಂಧನದಲ್ಲಿ ಇಟ್ಟುಕೊಂಡು ಕೆಲಸ ಮಾಡಿಸಿಕೊಂಡು ನಂತರ ಬಿಡುಗಡೆ ಮಾಡಿ ಕಳಿಸಿದ್ದಾರೆ.ಗಂಡನ ಸಾಲಕ್ಕಾಗಿ ತನಗೆ ಕಿರುಕುಳ ನೀಡಿದ ಆಶಾ ಹಾಗೂ ಇತರರ ಮೇಲೆ ಮಹದೇವಿ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ! ಆಲ್ಫಾ ಅಂದರೇನೇ ಡಾಮಿನೇಶನ್. ಈ ವಾರ ತೆರೆಕಂಡ ಆಲ್ಫಾ‌ ಚಿತ್ರದಲ್ಲಿ ಡಾಮಿನೇಟ್ ಮಾಡುತ್ತಿರುವವರೇ ಚಿತ್ರದ ನಾಯಕ ಹೇಮಂತ್ ಕುಮಾರ್. ಹೇಮಂತ್…
ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ…
ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ… ನಂಜನಗೂಡು,ಫೆ16,Tv10 ಕನ್ನಡ ಜಾತ್ರೆ ವೇಳೆ ನಡೆಯುತ್ತಿದ್ದ ಜಗಳ ಬಿಡಿಸಿದ ತಪ್ಪಿಗೆ ಹೋಂಗಾರ್ಡ್ ಮೇಲೆ…

Leave a Reply

Your email address will not be published. Required fields are marked *