ಗಂಡ ಮಾಡಿದ ಸಾಲಕ್ಕೆ ಪತ್ನಿಗೆ ಟಾರ್ಚರ್…ಅಕ್ರಮವಾಗಿ ಬಂಧನದಲ್ಲಿಟ್ಟ ಆರೋಪ…ನಾಲ್ವರ ವಿರುದ್ದ FIR ದಾಖಲು…

ಗಂಡ ಮಾಡಿದ ಸಾಲಕ್ಕೆ ಪತ್ನಿಗೆ ಟಾರ್ಚರ್…ಅಕ್ರಮವಾಗಿ ಬಂಧನದಲ್ಲಿಟ್ಟ ಆರೋಪ…ನಾಲ್ವರ ವಿರುದ್ದ FIR ದಾಖಲು…

ಮೈಸೂರು,ಮಾ13,Tv10 ಕನ್ನಡ

ಗಂಡ ಮಾಡಿದ ಸಾಲಕ್ಕೆ ಪತ್ನಿಗೆ ಟಾರ್ಚರ್ ನೀಡಿದ ಪ್ರಕರಣವೊಂದು ಬೆಳಕಿಗೆ ಬಂದಿದೆ.ಮೈಸೂರಿನಿಂದ ಬಲವಂತವಾಗಿ ಬಾಗಲಕೋಟೆಗೆ ಕರೆದೊಯ್ದು ಎರಡು ತಿಂಗಳ ಕಾಲ ಅಕ್ರಮವಾಗಿ ಕೂಡಿಹಾಕಿ ಮೊಬೈಲ್ ಕಸಿದು ಕೆಲಸ ಮಾಡಿಸಿಕೊಂಡು ವಾಪಸ್ ಕಳಿಸಿದ್ದಾರೆ.ಬಂಧನದಿಂದ ಹೊರಬಂದ ಮಹಿಳೆ ನಾಲ್ವರ ವಿರುದ್ದ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಮಹದೇಶ್ವರ ಬಡಾವಣೆ ನಿವಾಸಿ ಮಹದೇವಿ ಟಾರ್ಚರ್ ಅನುಭವಿಸಿದವರು.ಬಾಗಲಕೋಟೆ ನಿವಾಸಿ ಆಶಾ,ನಿರ್ಮಲಾ,ಆಶಾ ರವರ ಚಿಕ್ಕಮ್ಮ ಹಾಗೂ ಆಶಾ ರವರ ತಾಯಿ ವಿರುದ್ದ ಪ್ರಕರಣ ದಾಖಲಾಗಿದೆ.

ಮಹದೇವಿ ಪತಿ ಹನುಮಂತ ಮನೆ ಮನೆಗಳಿಗೆ ತೆರಳಿ ಪಾಠ ಹೇಳಿಕೊಡುತ್ತಾನೆ.ಕೆಲಸ ಕೊಡಿಸುವುದಾಗಿ ನಂಬಿಸಿ ಹಲವರಿಂದ ಹಣ ಪಡೆದಿದ್ದಾನೆ.ಅದೇ ರೀತಿ ಆಶಾ ರವರಿಂದಲೂ ಹಣ ಪಡೆದಿದ್ದಾನೆ.ಕೆಲಸ ಕೊಡಿಸದ ಹಿನ್ನಲೆ ಹಣಕ್ಕಾಗಿ ಒತ್ತಡ ಹೆಚ್ಚಾದ ಕಾರಣ ಹನುಮಂತ ತಲೆಮರೆಸಿಕೊಂಡಿದ್ದಾನೆ.ಹಣ ಕೊಟ್ಟ ಆಶಾ ರವರು ಜನವರಿ ತಿಂಗಳಿನಲ್ಲಿ ಮೈಸೂರಿಗೆ ಬಂದು ಹನುಮಂತನ ಪತ್ನಿ ಮಹದೇವಿ ಮೇಲೆ ಹಣಕ್ಕಾಗಿ ಒತ್ತಡ ಹೇರಿದ್ದಾರೆ.ಈ ವೇಳೆ ಮಹದೇವಿ ಮೊಬೈಲ್ ಕಸಿದ ಆಶಾ ಮನೆಯವರು ಮಹಾದೇವಿ,ಈಕೆ ತಂಗಿ ಲಲಿತ,ಮಗ ವೇದಾಂತ್ ಮೂವರನ್ನ ಬಲವಂತವಾಗಿ ಬಾಗಲಕೋಟೆಗೆ ಕರೆದೊಯ್ದು 2 ತಿಂಗಳ ಕಾಲ ಬಂಧನದಲ್ಲಿ ಇಟ್ಟುಕೊಂಡು ಕೆಲಸ ಮಾಡಿಸಿಕೊಂಡು ನಂತರ ಬಿಡುಗಡೆ ಮಾಡಿ ಕಳಿಸಿದ್ದಾರೆ.ಗಂಡನ ಸಾಲಕ್ಕಾಗಿ ತನಗೆ ಕಿರುಕುಳ ನೀಡಿದ ಆಶಾ ಹಾಗೂ ಇತರರ ಮೇಲೆ ಮಹದೇವಿ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *