ಗಂಡ ಮಾಡಿದ ಸಾಲಕ್ಕೆ ಪತ್ನಿಗೆ ಟಾರ್ಚರ್…ಅಕ್ರಮವಾಗಿ ಬಂಧನದಲ್ಲಿಟ್ಟ ಆರೋಪ…ನಾಲ್ವರ ವಿರುದ್ದ FIR ದಾಖಲು…

ಗಂಡ ಮಾಡಿದ ಸಾಲಕ್ಕೆ ಪತ್ನಿಗೆ ಟಾರ್ಚರ್…ಅಕ್ರಮವಾಗಿ ಬಂಧನದಲ್ಲಿಟ್ಟ ಆರೋಪ…ನಾಲ್ವರ ವಿರುದ್ದ FIR ದಾಖಲು…

ಮೈಸೂರು,ಮಾ13,Tv10 ಕನ್ನಡ

ಗಂಡ ಮಾಡಿದ ಸಾಲಕ್ಕೆ ಪತ್ನಿಗೆ ಟಾರ್ಚರ್ ನೀಡಿದ ಪ್ರಕರಣವೊಂದು ಬೆಳಕಿಗೆ ಬಂದಿದೆ.ಮೈಸೂರಿನಿಂದ ಬಲವಂತವಾಗಿ ಬಾಗಲಕೋಟೆಗೆ ಕರೆದೊಯ್ದು ಎರಡು ತಿಂಗಳ ಕಾಲ ಅಕ್ರಮವಾಗಿ ಕೂಡಿಹಾಕಿ ಮೊಬೈಲ್ ಕಸಿದು ಕೆಲಸ ಮಾಡಿಸಿಕೊಂಡು ವಾಪಸ್ ಕಳಿಸಿದ್ದಾರೆ.ಬಂಧನದಿಂದ ಹೊರಬಂದ ಮಹಿಳೆ ನಾಲ್ವರ ವಿರುದ್ದ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಮಹದೇಶ್ವರ ಬಡಾವಣೆ ನಿವಾಸಿ ಮಹದೇವಿ ಟಾರ್ಚರ್ ಅನುಭವಿಸಿದವರು.ಬಾಗಲಕೋಟೆ ನಿವಾಸಿ ಆಶಾ,ನಿರ್ಮಲಾ,ಆಶಾ ರವರ ಚಿಕ್ಕಮ್ಮ ಹಾಗೂ ಆಶಾ ರವರ ತಾಯಿ ವಿರುದ್ದ ಪ್ರಕರಣ ದಾಖಲಾಗಿದೆ.

ಮಹದೇವಿ ಪತಿ ಹನುಮಂತ ಮನೆ ಮನೆಗಳಿಗೆ ತೆರಳಿ ಪಾಠ ಹೇಳಿಕೊಡುತ್ತಾನೆ.ಕೆಲಸ ಕೊಡಿಸುವುದಾಗಿ ನಂಬಿಸಿ ಹಲವರಿಂದ ಹಣ ಪಡೆದಿದ್ದಾನೆ.ಅದೇ ರೀತಿ ಆಶಾ ರವರಿಂದಲೂ ಹಣ ಪಡೆದಿದ್ದಾನೆ.ಕೆಲಸ ಕೊಡಿಸದ ಹಿನ್ನಲೆ ಹಣಕ್ಕಾಗಿ ಒತ್ತಡ ಹೆಚ್ಚಾದ ಕಾರಣ ಹನುಮಂತ ತಲೆಮರೆಸಿಕೊಂಡಿದ್ದಾನೆ.ಹಣ ಕೊಟ್ಟ ಆಶಾ ರವರು ಜನವರಿ ತಿಂಗಳಿನಲ್ಲಿ ಮೈಸೂರಿಗೆ ಬಂದು ಹನುಮಂತನ ಪತ್ನಿ ಮಹದೇವಿ ಮೇಲೆ ಹಣಕ್ಕಾಗಿ ಒತ್ತಡ ಹೇರಿದ್ದಾರೆ.ಈ ವೇಳೆ ಮಹದೇವಿ ಮೊಬೈಲ್ ಕಸಿದ ಆಶಾ ಮನೆಯವರು ಮಹಾದೇವಿ,ಈಕೆ ತಂಗಿ ಲಲಿತ,ಮಗ ವೇದಾಂತ್ ಮೂವರನ್ನ ಬಲವಂತವಾಗಿ ಬಾಗಲಕೋಟೆಗೆ ಕರೆದೊಯ್ದು 2 ತಿಂಗಳ ಕಾಲ ಬಂಧನದಲ್ಲಿ ಇಟ್ಟುಕೊಂಡು ಕೆಲಸ ಮಾಡಿಸಿಕೊಂಡು ನಂತರ ಬಿಡುಗಡೆ ಮಾಡಿ ಕಳಿಸಿದ್ದಾರೆ.ಗಂಡನ ಸಾಲಕ್ಕಾಗಿ ತನಗೆ ಕಿರುಕುಳ ನೀಡಿದ ಆಶಾ ಹಾಗೂ ಇತರರ ಮೇಲೆ ಮಹದೇವಿ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಯುವಕನ ಮೇಲೆ ಹಲ್ಲೆ…ನಾಲ್ವರಿಂದ ಕೃತ್ಯ…ಪ್ರಕರಣ ದಾಖಲು…

ಯುವಕನ ಮೇಲೆ ಹಲ್ಲೆ…ನಾಲ್ವರಿಂದ ಕೃತ್ಯ…ಪ್ರಕರಣ ದಾಖಲು…

ಪಿರಿಯಾಪಟ್ಟಣ,ಮಾ18,Tv10 ಕನ್ನಡ ಯುವಕನನ್ನು ಕರೆದುಕೊಂಡು ಹೋಗಿ ಹಲ್ಲೆ ನಡೆಸಿರುವ ಘಟನೆ ಪಿರಿಯಾಪಟ್ಟಣ ತಾಲೂಕು ಬೆಟ್ಟದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಜ್ವಲ್ (21) ಹಲ್ಲೆಗೊಳಗಾದ ಯುವಕ. ಪಿರಿಯಾಪಟ್ಟಣ ತಾಲ್ಲೂಕು…
ಶ್ರೀರಾಮ ಗೆಳೆಯರ ಬಳಗದಿಂದ ಪುನೀತ್ ರಾಜ್ ಕುಮಾರ್ ಜನ್ಮದಿನೋತ್ಸವ ಆಚರಣೆ…ಮಜ್ಜಿಗೆ,ಸಿಹಿ ವಿತರಣೆ…

ಶ್ರೀರಾಮ ಗೆಳೆಯರ ಬಳಗದಿಂದ ಪುನೀತ್ ರಾಜ್ ಕುಮಾರ್ ಜನ್ಮದಿನೋತ್ಸವ ಆಚರಣೆ…ಮಜ್ಜಿಗೆ,ಸಿಹಿ ವಿತರಣೆ…

ಮೈಸೂರು,ಮಾ17,Tv10 ಕನ್ನಡ ಕನ್ನಡ ಚಿತ್ರರಂಗದ ಮರೆಯಲಾಗದ ಮಾಣಿಕ್ಯ ಪವರ್ ಸ್ಟಾರ್ ಯುವರತ್ನ ಪುನೀತ್ ರಾಜಕುಮಾರ್ ರವರ ಜನ್ಮದಿನೋತ್ಸವದ ನೆನಪಿಗಾಗಿ ‘ಶ್ರೀರಾಮ ಗೆಳಯರ ಬಳಗದ’ ವತಿಯಿಂದ ಚಾಮುಂಡಿಪುರಂ ವೃತ್ತದಲ್ಲಿ ಸಾರ್ವಜನಿಕರಿಗೆ…
ಕಳೆದುಹೋಗಿದ್ದ ಮೊಬೈಲ್ ವಾರಸುದಾರರಿಗೆ…ಮಾಲೀಕರನ್ನ ತಲುಪಿದ 37 ಮೊಬೈಲ್…

ಕಳೆದುಹೋಗಿದ್ದ ಮೊಬೈಲ್ ವಾರಸುದಾರರಿಗೆ…ಮಾಲೀಕರನ್ನ ತಲುಪಿದ 37 ಮೊಬೈಲ್…

ಮೈಸೂರು,ಮಾ17,Tv10 ಕನ್ನಡ ಕಳೆದುಹೋಗಿದ್ದ 37 ಮೊಬೈಲ್ ಫೋನ್ ಗಳನ್ನು ದೇವರಾಜ ಠಾಣೆ ಪೊಲೀಸರು ಇಂದು ವಾರಸುದಾರರಿಗೆ ಮರಳಿಸಿದರು. ದೇವರಾಜ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ರಘು.ಕೆ.ಆರ್. ಉಪ ನಿರೀಕ್ಷಕರಾದ…

Leave a Reply

Your email address will not be published. Required fields are marked *