ಗಂಡ ಮಾಡಿದ ಸಾಲಕ್ಕೆ ಪತ್ನಿಗೆ ಟಾರ್ಚರ್…ಅಕ್ರಮವಾಗಿ ಬಂಧನದಲ್ಲಿಟ್ಟ ಆರೋಪ…ನಾಲ್ವರ ವಿರುದ್ದ FIR ದಾಖಲು…

ಗಂಡ ಮಾಡಿದ ಸಾಲಕ್ಕೆ ಪತ್ನಿಗೆ ಟಾರ್ಚರ್…ಅಕ್ರಮವಾಗಿ ಬಂಧನದಲ್ಲಿಟ್ಟ ಆರೋಪ…ನಾಲ್ವರ ವಿರುದ್ದ FIR ದಾಖಲು…

ಮೈಸೂರು,ಮಾ13,Tv10 ಕನ್ನಡ

ಗಂಡ ಮಾಡಿದ ಸಾಲಕ್ಕೆ ಪತ್ನಿಗೆ ಟಾರ್ಚರ್ ನೀಡಿದ ಪ್ರಕರಣವೊಂದು ಬೆಳಕಿಗೆ ಬಂದಿದೆ.ಮೈಸೂರಿನಿಂದ ಬಲವಂತವಾಗಿ ಬಾಗಲಕೋಟೆಗೆ ಕರೆದೊಯ್ದು ಎರಡು ತಿಂಗಳ ಕಾಲ ಅಕ್ರಮವಾಗಿ ಕೂಡಿಹಾಕಿ ಮೊಬೈಲ್ ಕಸಿದು ಕೆಲಸ ಮಾಡಿಸಿಕೊಂಡು ವಾಪಸ್ ಕಳಿಸಿದ್ದಾರೆ.ಬಂಧನದಿಂದ ಹೊರಬಂದ ಮಹಿಳೆ ನಾಲ್ವರ ವಿರುದ್ದ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಮಹದೇಶ್ವರ ಬಡಾವಣೆ ನಿವಾಸಿ ಮಹದೇವಿ ಟಾರ್ಚರ್ ಅನುಭವಿಸಿದವರು.ಬಾಗಲಕೋಟೆ ನಿವಾಸಿ ಆಶಾ,ನಿರ್ಮಲಾ,ಆಶಾ ರವರ ಚಿಕ್ಕಮ್ಮ ಹಾಗೂ ಆಶಾ ರವರ ತಾಯಿ ವಿರುದ್ದ ಪ್ರಕರಣ ದಾಖಲಾಗಿದೆ.

ಮಹದೇವಿ ಪತಿ ಹನುಮಂತ ಮನೆ ಮನೆಗಳಿಗೆ ತೆರಳಿ ಪಾಠ ಹೇಳಿಕೊಡುತ್ತಾನೆ.ಕೆಲಸ ಕೊಡಿಸುವುದಾಗಿ ನಂಬಿಸಿ ಹಲವರಿಂದ ಹಣ ಪಡೆದಿದ್ದಾನೆ.ಅದೇ ರೀತಿ ಆಶಾ ರವರಿಂದಲೂ ಹಣ ಪಡೆದಿದ್ದಾನೆ.ಕೆಲಸ ಕೊಡಿಸದ ಹಿನ್ನಲೆ ಹಣಕ್ಕಾಗಿ ಒತ್ತಡ ಹೆಚ್ಚಾದ ಕಾರಣ ಹನುಮಂತ ತಲೆಮರೆಸಿಕೊಂಡಿದ್ದಾನೆ.ಹಣ ಕೊಟ್ಟ ಆಶಾ ರವರು ಜನವರಿ ತಿಂಗಳಿನಲ್ಲಿ ಮೈಸೂರಿಗೆ ಬಂದು ಹನುಮಂತನ ಪತ್ನಿ ಮಹದೇವಿ ಮೇಲೆ ಹಣಕ್ಕಾಗಿ ಒತ್ತಡ ಹೇರಿದ್ದಾರೆ.ಈ ವೇಳೆ ಮಹದೇವಿ ಮೊಬೈಲ್ ಕಸಿದ ಆಶಾ ಮನೆಯವರು ಮಹಾದೇವಿ,ಈಕೆ ತಂಗಿ ಲಲಿತ,ಮಗ ವೇದಾಂತ್ ಮೂವರನ್ನ ಬಲವಂತವಾಗಿ ಬಾಗಲಕೋಟೆಗೆ ಕರೆದೊಯ್ದು 2 ತಿಂಗಳ ಕಾಲ ಬಂಧನದಲ್ಲಿ ಇಟ್ಟುಕೊಂಡು ಕೆಲಸ ಮಾಡಿಸಿಕೊಂಡು ನಂತರ ಬಿಡುಗಡೆ ಮಾಡಿ ಕಳಿಸಿದ್ದಾರೆ.ಗಂಡನ ಸಾಲಕ್ಕಾಗಿ ತನಗೆ ಕಿರುಕುಳ ನೀಡಿದ ಆಶಾ ಹಾಗೂ ಇತರರ ಮೇಲೆ ಮಹದೇವಿ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

MDA ವಿಶೇಷ ಭೂ ಸ್ವಾಧೀನ ಇಲಾಖೆ ವ್ಯವಸ್ಥಾಪಕಿ ಬಿ.ಶೃತಿ ಎತ್ತಂಗಡಿ…ಕ್ರಿಮಿನಲ್ ಪ್ರಕರಣದಲ್ಲಿ ಭಾಗಿ ಆರೋಪ ಹಿನ್ನಲೆ…ಮಾತೃ ಇಲಾಖೆಗೆ ಹಿಂದಿರುಗುವಂತೆ ಸೂಚನೆ…ಸೇವೆಯಿಂದ ಬಿಡುಗಡೆ ಮಾಡಲು ಎಂಡಿಎ ಮೀನಾಮೇಷ…

MDA ವಿಶೇಷ ಭೂ ಸ್ವಾಧೀನ ಇಲಾಖೆ ವ್ಯವಸ್ಥಾಪಕಿ ಬಿ.ಶೃತಿ ಎತ್ತಂಗಡಿ…ಕ್ರಿಮಿನಲ್ ಪ್ರಕರಣದಲ್ಲಿ…

MDA ವಿಶೇಷ ಭೂ ಸ್ವಾಧೀನ ಇಲಾಖೆ ವ್ಯವಸ್ಥಾಪಕಿ ಬಿ.ಶೃತಿ ಎತ್ತಂಗಡಿ…ಕ್ರಿಮಿನಲ್ ಪ್ರಕರಣದಲ್ಲಿ ಭಾಗಿ ಆರೋಪ ಹಿನ್ನಲೆ…ಮಾತೃ ಇಲಾಖೆಗೆ ಹಿಂದಿರುಗುವಂತೆ ಸೂಚನೆ…ಸೇವೆಯಿಂದ ಬಿಡುಗಡೆ ಮಾಡಲು ಎಂಡಿಎ ಮೀನಾಮೇಷ… ಮೈಸೂರು,ಮಾ10,Tv10 ಕನ್ನಡ…
ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…

Leave a Reply

Your email address will not be published. Required fields are marked *