ನಾಲೆ ಮಣ್ಣು ಕೊಳ್ಳೆ ಹೊಡೆಯುತ್ತಿರುವ ಖಾಸಗಿ ವ್ಯಕ್ತಿಗಳು…ಕಣ್ಮುಚ್ಚಿ ಕುಳಿತ ಅಧಿಕಾರಿಗಳು…ಬೆಳಕಿಗೆ ತಂದ ಸಂಘಟಕರು…

ನಾಲೆ ಮಣ್ಣು ಕೊಳ್ಳೆ ಹೊಡೆಯುತ್ತಿರುವ ಖಾಸಗಿ ವ್ಯಕ್ತಿಗಳು…ಕಣ್ಮುಚ್ಚಿ ಕುಳಿತ ಅಧಿಕಾರಿಗಳು…ಬೆಳಕಿಗೆ ತಂದ ಸಂಘಟಕರು…

ನಂಜನಗೂಡು,ಮಾ14,Tv10 ಕನ್ನಡ

ಕಬಿನಿ ಬಲದಂಡೆ ನಾಲೆ ಮಣ್ಣನ್ನ ಖಾಸಗಿ ವ್ಯಕ್ತಿಗಳು ರಾಜಾರೋಷವಾಗಿ ಕೊಳ್ಳೆ ಹೊಡೆಯುತ್ತಿದ್ದರೂ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಜಾಣಮೌನಕ್ಕೆ ಶರಣಾಗಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.ಕರ್ನಾಟಕ ಅಂಬೇಡ್ಕರ್ ಸೇನೆಯ ಮುಖ್ಯಸ್ಥರು ಅಕ್ರಮವನ್ನ ಬಯಲಿಗೆ ಎಳೆದಿದ್ದಾರೆ.ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳ ಜೊತೆ ದಾಳಿ ನಡೆಸಿ ಅಕ್ರಮ ಸಾಗಾಣಿಕೆಗೆ ಬ್ರೇಕ್ ಹಾಕಿದ್ದಾರೆ.

ನಂಜನಗೂಡು ತಾಲೂಕಿನ ಚಿನ್ನದಗುಡಿ ಗ್ರಾಮದ ಬಳಿ ಹಾದುಹೋಗಿರುವ ಕಬಿನಿ ಬಲದಂಡೆ ನಾಲೆಯಲ್ಲಿ ನೀರಾವರಿ ಇಲಾಖೆಯಿಂದ ಅನುಮತಿ ಪಡೆಯದೆ ರಾಜಾರೋಷವಾಗಿ ಹಾಡುಹಗಲೇ ಮಣ್ಣನ್ನ ಬಗೆದು ಸಾಗಿಸುತ್ತಿದ್ದಾರೆ.ಈ ಮಾಹಿತಿ ಅರಿತ ಕರ್ನಾಟಕ ಅಂಬೇಡ್ಕರ್ ಸೇನೆ ಮುಖ್ಯಸ್ಥರಾದ ಬಸವಟ್ಟಿಗೆ ನಾಗೇಂದ್ರ ಹಾಗೂ ಮುಳ್ಳೂರು ಸ್ವಾಮಿ ರವರು ಕಾವೇರಿ ನೀರಾವರಿ ಇಲಾಖೆಗೆ ಮಾಹಿತಿ ನೀಡಿ ಅಧಿಕಾರಿಗಳ ಸಮೇತ ದಾಳಿ ನಡೆಸಿದ್ದಾರೆ.ರಸ್ತೆ ನಿರ್ಮಾಣಕ್ಕೆ ಅಕ್ರಮವಾಗಿ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ.ಮಣ್ಣು ಸಾಗಾಟಕ್ಕೆ ಬಳಸಲಾದ ವಾಹನಗಳನ್ನ ಸೀಜ್ ಮಾಡಿ ಕವಲಂದೆ ಪೊಲೀಸರ ವಶಕ್ಕೆ ನೀಡಿದ್ದಾರೆ.ಈ ಸಂಭಂಧ ಹಿರಿಯ ಅಧಿಕಾರಿಗಳು ನಂಜನಗೂಡು ವಿಭಾಗದ ಅಧಿಕಾರಿಗಳಿಗೆ ಪತ್ರ ಬರೆದು ಅಗತ್ಯ ಕ್ರಮ ಕೈಗೊಳ್ಳುವಂತೆಯೂ ಸೂಚಿಸಿದ್ದಾರೆ.ಹೀಗಿದ್ದೂ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಲು ಅಧಿಕಾರಿಗಳು ಮೀನಾಮೇಷ ಎಣಿಸುತ್ತಿರುವುದಾಗಿ ಸಂಘಟಕರು ಆರೋಪಿಸಿದ್ದಾರೆ.ಕೂಡಲೇ ದಂಧೆಕೋರರ ಅಕ್ರಮಕ್ಕೆ ಬ್ರೇಕ್ ಹಾಕದಿದ್ದಲ್ಲಿ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಬೇಕಾದೀತು ಎಂದು ಎಚ್ಚರಿಸಿದ್ದಾರೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *