ನಾಲೆ ಮಣ್ಣು ಕೊಳ್ಳೆ ಹೊಡೆಯುತ್ತಿರುವ ಖಾಸಗಿ ವ್ಯಕ್ತಿಗಳು…ಕಣ್ಮುಚ್ಚಿ ಕುಳಿತ ಅಧಿಕಾರಿಗಳು…ಬೆಳಕಿಗೆ ತಂದ ಸಂಘಟಕರು…

ನಾಲೆ ಮಣ್ಣು ಕೊಳ್ಳೆ ಹೊಡೆಯುತ್ತಿರುವ ಖಾಸಗಿ ವ್ಯಕ್ತಿಗಳು…ಕಣ್ಮುಚ್ಚಿ ಕುಳಿತ ಅಧಿಕಾರಿಗಳು…ಬೆಳಕಿಗೆ ತಂದ ಸಂಘಟಕರು…

ನಂಜನಗೂಡು,ಮಾ14,Tv10 ಕನ್ನಡ

ಕಬಿನಿ ಬಲದಂಡೆ ನಾಲೆ ಮಣ್ಣನ್ನ ಖಾಸಗಿ ವ್ಯಕ್ತಿಗಳು ರಾಜಾರೋಷವಾಗಿ ಕೊಳ್ಳೆ ಹೊಡೆಯುತ್ತಿದ್ದರೂ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಜಾಣಮೌನಕ್ಕೆ ಶರಣಾಗಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.ಕರ್ನಾಟಕ ಅಂಬೇಡ್ಕರ್ ಸೇನೆಯ ಮುಖ್ಯಸ್ಥರು ಅಕ್ರಮವನ್ನ ಬಯಲಿಗೆ ಎಳೆದಿದ್ದಾರೆ.ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳ ಜೊತೆ ದಾಳಿ ನಡೆಸಿ ಅಕ್ರಮ ಸಾಗಾಣಿಕೆಗೆ ಬ್ರೇಕ್ ಹಾಕಿದ್ದಾರೆ.

ನಂಜನಗೂಡು ತಾಲೂಕಿನ ಚಿನ್ನದಗುಡಿ ಗ್ರಾಮದ ಬಳಿ ಹಾದುಹೋಗಿರುವ ಕಬಿನಿ ಬಲದಂಡೆ ನಾಲೆಯಲ್ಲಿ ನೀರಾವರಿ ಇಲಾಖೆಯಿಂದ ಅನುಮತಿ ಪಡೆಯದೆ ರಾಜಾರೋಷವಾಗಿ ಹಾಡುಹಗಲೇ ಮಣ್ಣನ್ನ ಬಗೆದು ಸಾಗಿಸುತ್ತಿದ್ದಾರೆ.ಈ ಮಾಹಿತಿ ಅರಿತ ಕರ್ನಾಟಕ ಅಂಬೇಡ್ಕರ್ ಸೇನೆ ಮುಖ್ಯಸ್ಥರಾದ ಬಸವಟ್ಟಿಗೆ ನಾಗೇಂದ್ರ ಹಾಗೂ ಮುಳ್ಳೂರು ಸ್ವಾಮಿ ರವರು ಕಾವೇರಿ ನೀರಾವರಿ ಇಲಾಖೆಗೆ ಮಾಹಿತಿ ನೀಡಿ ಅಧಿಕಾರಿಗಳ ಸಮೇತ ದಾಳಿ ನಡೆಸಿದ್ದಾರೆ.ರಸ್ತೆ ನಿರ್ಮಾಣಕ್ಕೆ ಅಕ್ರಮವಾಗಿ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ.ಮಣ್ಣು ಸಾಗಾಟಕ್ಕೆ ಬಳಸಲಾದ ವಾಹನಗಳನ್ನ ಸೀಜ್ ಮಾಡಿ ಕವಲಂದೆ ಪೊಲೀಸರ ವಶಕ್ಕೆ ನೀಡಿದ್ದಾರೆ.ಈ ಸಂಭಂಧ ಹಿರಿಯ ಅಧಿಕಾರಿಗಳು ನಂಜನಗೂಡು ವಿಭಾಗದ ಅಧಿಕಾರಿಗಳಿಗೆ ಪತ್ರ ಬರೆದು ಅಗತ್ಯ ಕ್ರಮ ಕೈಗೊಳ್ಳುವಂತೆಯೂ ಸೂಚಿಸಿದ್ದಾರೆ.ಹೀಗಿದ್ದೂ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಲು ಅಧಿಕಾರಿಗಳು ಮೀನಾಮೇಷ ಎಣಿಸುತ್ತಿರುವುದಾಗಿ ಸಂಘಟಕರು ಆರೋಪಿಸಿದ್ದಾರೆ.ಕೂಡಲೇ ದಂಧೆಕೋರರ ಅಕ್ರಮಕ್ಕೆ ಬ್ರೇಕ್ ಹಾಕದಿದ್ದಲ್ಲಿ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಬೇಕಾದೀತು ಎಂದು ಎಚ್ಚರಿಸಿದ್ದಾರೆ…

Spread the love

Related post

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ..

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ…

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ.. ಮೈಸೂರು,ಏ8,Tv10 ಕನ್ನಡ ಖ್ಯಾತ ಯೋಗ ಗುರು ಡಾಕ್ಟರ್ ರಾಘವೇಂದ್ರ ಪೈ…
ಲಯನ್ಸ್ ಅಂತರಾಷ್ಟ್ರೀಯ ಸಂಸ್ಥೆಯ ಎರಡನೇ ಉಪ ರಾಜ್ಯಪಾಲರಾಗಿ (Elect) ಲಯನ್ ಎಂ.ಸಿದ್ದೇಗೌಡ ಆಯ್ಕೆ

ಲಯನ್ಸ್ ಅಂತರಾಷ್ಟ್ರೀಯ ಸಂಸ್ಥೆಯ ಎರಡನೇ ಉಪ ರಾಜ್ಯಪಾಲರಾಗಿ (Elect) ಲಯನ್ ಎಂ.ಸಿದ್ದೇಗೌಡ…

ಲಯನ್ಸ್ ಅಂತರಾಷ್ಟ್ರೀಯ ಸಂಸ್ಥೆಯ ಎರಡನೇ ಉಪ ರಾಜ್ಯಪಾಲರಾಗಿ (Elect) ಲಯನ್ ಎಂ.ಸಿದ್ದೇಗೌಡ ಆಯ್ಕೆ ಲಯನ್ಸ್ ಅಂತರಾಷ್ಟ್ರೀಯ ಸಂಸ್ಥೆಯ ಜಿಲ್ಲಾ 317ಜಿ ವ್ಯಾಪ್ತಿಯಲ್ಲಿ ನಡೆದ ಇತ್ತೀಚಿನ ಜಿಲ್ಲಾ ಚುನಾವಣೆಯಲ್ಲಿ ಸೇವಾ…
ಪ್ರಥಮ ದರ್ಜೆ ಕಂಟ್ರಾಕ್ಟರ್ ಅನುಮಾನಾಸ್ಪದ ಸಾವು…ನಾಪತ್ತೆಯಾದವರು ನದಿಯಲ್ಲಿ ಶವವಾಗಿ ಪತ್ತೆ…

ಪ್ರಥಮ ದರ್ಜೆ ಕಂಟ್ರಾಕ್ಟರ್ ಅನುಮಾನಾಸ್ಪದ ಸಾವು…ನಾಪತ್ತೆಯಾದವರು ನದಿಯಲ್ಲಿ ಶವವಾಗಿ ಪತ್ತೆ…

ಪ್ರಥಮ ದರ್ಜೆ ಕಂಟ್ರಾಕ್ಟರ್ ಅನುಮಾನಾಸ್ಪದ ಸಾವು…ನಾಪತ್ತೆಯಾದವರು ನದಿಯಲ್ಲಿ ಶವವಾಗಿ ಪತ್ತೆ… ಮಂಡ್ಯ,ಏ8,Tv10 ಕನ್ನಡ ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಕಂಟ್ರಾಕ್ಟರ್ ನದಿಯಲ್ಲಿ ಶವವಾಗಿ ಪತ್ತೆಯಾದ ಘಟನೆ…

Leave a Reply

Your email address will not be published. Required fields are marked *