ಯುವಕ ಅನುಮಾನಾಸ್ಪದ ಸಾವು…ಉತ್ತಮ ಕ್ರಿಕೆಟ್ ಪ್ರದರ್ಶನ ನೀಡಿದ್ದೇ ಸಾವಿಗೆ ಕಾರಣವಾಯ್ತೇ…?

ಯುವಕ ಅನುಮಾನಾಸ್ಪದ ಸಾವು…ಉತ್ತಮ ಕ್ರಿಕೆಟ್ ಪ್ರದರ್ಶನ ನೀಡಿದ್ದೇ ಸಾವಿಗೆ ಕಾರಣವಾಯ್ತೇ…?

ಹೆಚ್.ಡಿ.ಕೋಟೆ,ಮಾ15,Tv10 ಕನ್ನಡ

ಸೋಲುವ ಮ್ಯಾಚನ್ನ ಸಿಕ್ಸರ್ ಹೊಡೆದು ಗೆಲ್ಲಿಸಿದ್ದ ಯುವಕ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ
ಹೆಚ್.ಡಿ.ಕೋಟೆ ತಾಲೂಕಿನ‌ ವಡ್ಡರಗುಡಿ ಗ್ರಾಮದಲ್ಲಿ ನಡೆದಿದೆ.
ದಿವ್ಯಾ ಕುಮಾರ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಟೆನ್ನಿಸ್ ಬಾಲ್ ಕ್ರಿಕೆಟರ್.
ಕಳೆದ ತಿಂಗಳ 24 ರಂದು ಬೀಚನಹಳ್ಳಿಯಲ್ಲಿ ಕ್ರಿಕೆಟ್ ಟೂರ್ನಮೆಂಟ್ ನಡೆದಿತ್ತು.
ನೇರಳೆ ಪ್ರೀಮಿಯರ್ ಲೀಗ್ ಹೆಸರಿನಲ್ಲಿ ಆಯೋಜನೆ ಮಾಡಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ
ಜೆಪಿ ವಾರಿಯರ್ಸ್ ತಂಡದ ಪರ ದಿವ್ಯಾ ಕುಮಾರ್ ಪ್ರತಿನಿಧಿಸಿದ್ದ.
ಡೆವಿಲ್ಸ್ ಸೂಪರ್ ಕಿಂಗ್ ತಂಡದ ವಿರುದ್ಧ ಪೈನಲ್ ಪಂದ್ಯಾವಳಿಯಲ್ಲಿ ಉತ್ತಮ‌ ಪ್ರದರ್ಶನ ನೀಡಿದ್ದ.
4 ಬಾಲ್ ಗೆ 20 ರನ್ ಹೊಡೆದು ಪಂದ್ಯ ಗೆಲ್ಲಿಸಿದ್ದ.
ಮ್ಯಾಚ್ ಗೆದ್ದ ಬಳಿಕ ಟೀಂ ಸದಸ್ಯರು ಪಾರ್ಟಿ ಮಾಡಿದ್ದರು. ಪಾರ್ಟಿ ಮುಗಿಸಿ ಬೈಕ್ ನಲ್ಲಿ ತೆರಳಿದ ಈತ ಅಪಘಾತದ ಸಂಭವಿಸಿದ ಸ್ಥಿತಿಯಲ್ಲಿ ಪೊದೆಯೊಂದರಲ್ಲಿ ಕೋಮ ಸ್ಥಿತಿಯಲ್ಲಿ ಪತ್ತೆಯಾಗಿದ್ದ. ಮೈಸೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆ ದಾಖಲು ಮಾಡಲಾಗಿತ್ತು.
ಘಟನೆ ಬಗ್ಗೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ.
ಮೊದಲಿಗೆ ಬೈಕ್ ಅಪಘಾತ ನಡೆದಿದೆ ಎಂದುಕೊಂಡಿದ್ದೆವು.
ಆದ್ರೆ ಬೈಕ್ ಅಪಘಾತ ಅನುಮಾನಾಸ್ಪದವಾಗಿ ಇತ್ತು.ಇದರಿಂದ ಕ್ರಿಕೆಟ್ ಗೆಲ್ಲಿಸಿದ್ದ ಎಂಬ ಕಾರಣಕ್ಕೆ ದ್ವೇಷದಿಂದ ಹೊಡೆದಿರುವ ಸಾಧ್ಯತೆ ಇದೆ ಎಂದು ಶಂಕಿಸಿದ್ದಾರೆ.
ದಿವ್ಯಾ ಕುಮಾರ್ ಅತ್ಯುತ್ತಮ ಟೆನಿಸ್ ಬಾಲ್ ಕ್ರಿಕೆಟ್ ಪ್ಲೇಯರ್ ಆಗಿದ್ದ.
ಸಾಕಷ್ಟು ತಂಡಗಳು ಈತನನ್ನು ಸೇರಿಸಿಕೊಂಡು ಕ್ರಿಕೆಟ್ ಆಡುತ್ತಿದ್ದರು.
ಇದರಿಂದ ಈತನನ್ನು ಕೊಲೆ ಮಾಡಿರಬಹುದು ಎಂಬ ಅನುಮಾನ ಇದೆ.
ಪೊಲೀಸರು ಸಹ ಸರಿಯಾದ ರೀತಿಯಲ್ಲಿ‌ ತನಿಖೆ ಮಾಡುತ್ತಿಲ್ಲ ಎಂದು ಕುಟುಂಬಸ್ಥರ ಆರೋಪಿಸಿದ್ದಾರೆ.
ಕಳೆದ 20 ದಿನಗಳಿಂದಲು ಆಸ್ಪತ್ರೆಯಲ್ಲಿ ಕೋಮ ಸ್ಥಿತಿಯಲ್ಲೆ ಇದ್ದ ದಿವ್ಯಾ ಕುಮಾರ್
ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾನೆ.
ಬೀಚನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *