ನಡುರಸ್ತೆಯಲ್ಲಿ ಪತ್ನಿಯನ್ನ ಅರೆನಗ್ನಗೊಳಿಸಿ ಹಲ್ಲೆ…ಪತಿ,ಮಾವ ಸೇರಿದಂತೆ ಮೂವರ ವಿರುದ್ದ FIR…

ನಡುರಸ್ತೆಯಲ್ಲಿ ಪತ್ನಿಯನ್ನ ಅರೆನಗ್ನಗೊಳಿಸಿ ಹಲ್ಲೆ…ಪತಿ,ಮಾವ ಸೇರಿದಂತೆ ಮೂವರ ವಿರುದ್ದ FIR…

ಮೈಸೂರು,ಮಾ16,Tv10 ಕನ್ನಡ

ಪೊಲೀಸ್ ಠಾಣೆ ಹಾಗೂ ಕೌಟುಂಬಿಕ ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನ ಹಿಂದಕ್ಕೆ ಪಡೆಯದ ಪತ್ನಿಯನ್ನ ಬಲವಂತವಾಗಿ ಕೂಡಿ ಹಾಕಿ,ನಡುರಸ್ತೆಯಲ್ಲಿ ಅರೆನಗ್ನಗೊಳಿಸಿ ಹಲ್ಲೆ ನಡೆಸಿ ಕಿರುಕುಳ ನೀಡಿದ ಪತಿ ಹಾಗೂ ಮಾವ ಮತ್ತು ಪತಿಯ ಅಣ್ಣನ ವಿರುದ್ದ ಪತ್ನಿ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಪಲ್ಲವಿ (24) ಎಂಬುವರೇ ಕಿರುಕುಳಕ್ಕೆ ಒಳಗಾದ ಗೃಹಿಣಿ.ಪತಿ ಮಹೇಶ್,ಮಾವ ಮಲ್ಲಯ್ಯ ಹಾಗೂ ಪತಿ ಅಣ್ಣ ಶಿವು ವಿರುದ್ದ FIR ದಾಖಲಾಗಿದೆ.

ಮಹೇಶ್ ವಿರುದ್ದ ಪಲ್ಲವಿ ಪೊಲೀಸ್ ಠಾಣೆಯಲ್ಲಿ,ಕೌಟುಂಬಿಕ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದು ವಿಚಾರಣೆ ಹಂತದಲ್ಲಿದೆ.ಕೆಲವು ದಿನಗಳ ಹಿಂದೆ ಪತ್ನಿಯನ್ನ ಭೇಟಿ ಮಾಡಿ ಅನ್ಯೋನ್ಯವಾಗಿರೋಣವೆಂದು ನಂಬಿಸಿ ಪಲ್ಲವಿಯನ್ನ ಕರೆತಂದು ಪ್ರತ್ಯೇಕವಾಗಿ ಬಾಡಿಗೆ ಮನೆಯಲ್ಲಿ ಇರಿಸಿದ್ದಾನೆ.ಎರಡು ದಿನ ಸರಿ ಇದ್ದ ಮಹೇಶ್ ಮತ್ತೆ ಕ್ಯಾತೆ ತೆಗೆದು ಪತ್ನಿ ಮೇಲೆ ದರ್ಪ ತೋರಿಸಿದ್ದಾನೆ.ಪ್ರಕರಣಗಳನ್ನ ಹಿಂದಕ್ಕೆ ಪಡೆಯುವಂತೆ ಒತ್ತಾಯಿಸಿದ್ದಾನೆ.ಹಿಗ್ಗಾಮುಗ್ಗ ಥಳಿಸಿ ಪ್ರೈವೇಟ್ ಪಾರ್ಟ್ ಗೆ ಒದ್ದು ಹಲ್ಲೆ ನಡೆಸಿದ್ದಾನೆ.ಇದನ್ನ ಪ್ರಶ್ನಿಸಲು ಮಾವ ಮಲ್ಲಯ್ಯನ ಬಳಿ ಬಂದಾಗ ಪತಿ ಹಾಗೂ ಅಣ್ಣ ಶಿವು ಸೇರಿದಂತೆ ಮೂವರು ನಡುರಸ್ತೆಯಲ್ಲಿ ಅರೆನಗ್ನಗೊಳಿಸಿ ಹಲ್ಲೆ ನಡೆಸಿದ್ದಾರೆಂದು ಪಲ್ಲವಿ ದೂರಿನಲ್ಲಿ ತಿಳಿಸಿದ್ದಾರೆ.ಕೊಲೆ ಮಾಡುವ ಉದ್ದೇಶದಿಂದ ಹಲ್ಲೆ ನಡೆಸಿದ್ದಾರೆಂದು ಪಲ್ಲವಿ ವಿಜಯನಗರ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು… ಹುಣಸೂರು,ಜೂ18,Tv10 ಕನ್ನಡ ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಹುಣಸೂರು…
ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…

Leave a Reply

Your email address will not be published. Required fields are marked *