ದರ್ಮಾಪುರ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 75.44 ಲಕ್ಷ ಉಂಡೆನಾಮ…ಮಾಜಿ ಸಿಇಓ ನಾರಾಯಣ ನಾಯ್ಕ ವಿರುದ್ದ FIR…

ದರ್ಮಾಪುರ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 75.44 ಲಕ್ಷ ಉಂಡೆನಾಮ…ಮಾಜಿ ಸಿಇಓ ನಾರಾಯಣ ನಾಯ್ಕ ವಿರುದ್ದ FIR…

ಹುಣಸೂರು,ಮಾ16,Tv10 ಕನ್ನಡ

ಹುಣಸೂರು ತಸಲೂಕು ಧರ್ಮಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 75.44 ಲಕ್ಷ ಹಣ ದುರುಪಯೋಗವಾಗಿರುವುದು ಬೆಳಕಿಗೆ ಬಂದಿದೆ.ಮಾಜಿ ಕಾರ್ಯನಿರ್ವಹಣಾಧಿಕಾರಿ ನಾರಾಯಣ ನಾಯ್ಕ ವಿರುದ್ದ ಹಾಲಿ ಸಿಇಓ ಬೀರಪ್ಪ ರವರು ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಿಸಿದ್ದಾರೆ.

2022-23 ರ ಅವಧಿಯಲ್ಲಿ ಹಣ ದುರುಪಯೋಗವಾಗಿರುವುದು ಲೆಕ್ಕಪರಿಶೋಧನಾ ವೇಳೆ ತಿಳಿದುಬಂದಿದೆ.30-06-2023 ರಂದು ನಾರಾಯಣ ನಾಯ್ಕ ರವರು ನಿವೃತ್ತಿ ಹೊಂದಿದ್ದಾರೆ.ಸೂಕ್ತ ಲೆಕ್ಕಗಳನ್ನ ಪಾಲಿಸದೆ ಸಂಘಕ್ಕೆ 75,44,833/- ರೂಗಳನ್ನ ದುರುಪಯೋಗ ಮಾಡಿಕೊಂಡು ಸಂಘಕ್ಕೆ ನಷ್ಟ ಉಂಟು ಮಾಡಿದ್ದಾರೆಂದು ಆರೋಪಿಸಲಾಗಿದೆ.

ಸಾಲಗಾರರ ಲೆಡ್ಜರ್ ನಲ್ಲಿ ಹಣ ಪಾವತಿ ಆದಂತೆ ಹಾಗೂ ಮರುಪಾವತಿ ಆದಂತೆ ನಮೂದಿಸಿ ನಗದು ಪುಸ್ತಕದಲ್ಲಿ ಜಮಾ ಮಾಡದೆ ಇರುವುದು 67,95,266/- ರೂ ಇದೆ.

ಸದಸ್ಯರಿಗೆ ದಾಖಲಾತಿ ಇಲ್ಲದೆ ಸಾಲ ಮುಂಗಡ ಮಾಡಿರುವುದು 4,58,000/- ರೂ ಇದೆ

ಜಿಲ್ಲಾ ಬ್ಯಾಂಕ್ ಷೇರು ವೆತ್ಯಾಸ. 63,850/- ರೂ ಇದೆ

ಕೆಸಿಸಿ ಅಮಾನತ್ತು ಬಾಬ್ತಿಗೆ ಹೆಚ್ಚಿನ ಖರ್ಚು ತೋರಿಸಿರುವುದು 2,03,477/- ಇದೆ

ಶಿಲ್ಕು ವೆತ್ಯಾಸ 24,240/- ರೂಗಳಿವೆ

ಒಟ್ಟು ನಾರಾಯಣ ನಾಯ್ಕ ಅವಧಿಯಲ್ಲಿ 75,44,833/- ರೂಗಳ ಹಣ ದುರುಪಯೋಗವಾಗಿದೆ.ಈ ಸಂಭಂಧ ನಾರಾಯಣ ನಾಯ್ಕ ರವರನ್ನ ಪ್ರಶ್ನಿಸಿದಾಗ ಸಮಂಜಸ ಉತ್ತರ ಬಂದಿರುವುದಿಲ್ಲ.ಹೀಗಾಗಿ ಕೃಷಿಪತ್ತಿನ ಸಹಕಾರ ಸಂಘಗಳ ನಿಯಮಾನುಸಾರ ನಾರಾಯಣ ನಾಯ್ಕ ವಿರುದ್ದ FIR ದಾಖಲಿಸಲಾಗಿದೆ…

Spread the love

Related post

ಸಿಸಿಬಿ ಪೊಲೀಸರ ಕಾರ್ಯಾಚರಣೆ…ನಾಲ್ವರ ಬಂಧನ…10.40 ಲಕ್ಷ ಮೌಲ್ಯದ ಎಂಡಿಎಂಎ ಒಂದು ಕಾರ್ ವಶ…

ಸಿಸಿಬಿ ಪೊಲೀಸರ ಕಾರ್ಯಾಚರಣೆ…ನಾಲ್ವರ ಬಂಧನ…10.40 ಲಕ್ಷ ಮೌಲ್ಯದ ಎಂಡಿಎಂಎ ಒಂದು ಕಾರ್…

ಸಿಸಿಬಿ ಪೊಲೀಸರ ಕಾರ್ಯಾಚರಣೆ…ನಾಲ್ವರ ಬಂಧನ…10.40 ಲಕ್ಷ ಮೌಲ್ಯದ ಎಂಡಿಎಂಎ ಒಂದು ಕಾರ್ ವಶ… ಮೈಸೂರು,ಫೆ23,Tv10 ಕನ್ನಡ ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆಯಲ್ಲಿ ನಾಲ್ವರು ಆರೋಪಿಗಳನ್ನ ವಶಕ್ಕೆ ಪಡೆಯಲಾಗಿದ್ದು ಬಂಧಿತರಿಂದ…
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ! ಆಲ್ಫಾ ಅಂದರೇನೇ ಡಾಮಿನೇಶನ್. ಈ ವಾರ ತೆರೆಕಂಡ ಆಲ್ಫಾ‌ ಚಿತ್ರದಲ್ಲಿ ಡಾಮಿನೇಟ್ ಮಾಡುತ್ತಿರುವವರೇ ಚಿತ್ರದ ನಾಯಕ ಹೇಮಂತ್ ಕುಮಾರ್. ಹೇಮಂತ್…
ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ…

Leave a Reply

Your email address will not be published. Required fields are marked *