ದರ್ಮಾಪುರ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 75.44 ಲಕ್ಷ ಉಂಡೆನಾಮ…ಮಾಜಿ ಸಿಇಓ ನಾರಾಯಣ ನಾಯ್ಕ ವಿರುದ್ದ FIR…

ದರ್ಮಾಪುರ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 75.44 ಲಕ್ಷ ಉಂಡೆನಾಮ…ಮಾಜಿ ಸಿಇಓ ನಾರಾಯಣ ನಾಯ್ಕ ವಿರುದ್ದ FIR…

ಹುಣಸೂರು,ಮಾ16,Tv10 ಕನ್ನಡ

ಹುಣಸೂರು ತಸಲೂಕು ಧರ್ಮಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 75.44 ಲಕ್ಷ ಹಣ ದುರುಪಯೋಗವಾಗಿರುವುದು ಬೆಳಕಿಗೆ ಬಂದಿದೆ.ಮಾಜಿ ಕಾರ್ಯನಿರ್ವಹಣಾಧಿಕಾರಿ ನಾರಾಯಣ ನಾಯ್ಕ ವಿರುದ್ದ ಹಾಲಿ ಸಿಇಓ ಬೀರಪ್ಪ ರವರು ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಿಸಿದ್ದಾರೆ.

2022-23 ರ ಅವಧಿಯಲ್ಲಿ ಹಣ ದುರುಪಯೋಗವಾಗಿರುವುದು ಲೆಕ್ಕಪರಿಶೋಧನಾ ವೇಳೆ ತಿಳಿದುಬಂದಿದೆ.30-06-2023 ರಂದು ನಾರಾಯಣ ನಾಯ್ಕ ರವರು ನಿವೃತ್ತಿ ಹೊಂದಿದ್ದಾರೆ.ಸೂಕ್ತ ಲೆಕ್ಕಗಳನ್ನ ಪಾಲಿಸದೆ ಸಂಘಕ್ಕೆ 75,44,833/- ರೂಗಳನ್ನ ದುರುಪಯೋಗ ಮಾಡಿಕೊಂಡು ಸಂಘಕ್ಕೆ ನಷ್ಟ ಉಂಟು ಮಾಡಿದ್ದಾರೆಂದು ಆರೋಪಿಸಲಾಗಿದೆ.

ಸಾಲಗಾರರ ಲೆಡ್ಜರ್ ನಲ್ಲಿ ಹಣ ಪಾವತಿ ಆದಂತೆ ಹಾಗೂ ಮರುಪಾವತಿ ಆದಂತೆ ನಮೂದಿಸಿ ನಗದು ಪುಸ್ತಕದಲ್ಲಿ ಜಮಾ ಮಾಡದೆ ಇರುವುದು 67,95,266/- ರೂ ಇದೆ.

ಸದಸ್ಯರಿಗೆ ದಾಖಲಾತಿ ಇಲ್ಲದೆ ಸಾಲ ಮುಂಗಡ ಮಾಡಿರುವುದು 4,58,000/- ರೂ ಇದೆ

ಜಿಲ್ಲಾ ಬ್ಯಾಂಕ್ ಷೇರು ವೆತ್ಯಾಸ. 63,850/- ರೂ ಇದೆ

ಕೆಸಿಸಿ ಅಮಾನತ್ತು ಬಾಬ್ತಿಗೆ ಹೆಚ್ಚಿನ ಖರ್ಚು ತೋರಿಸಿರುವುದು 2,03,477/- ಇದೆ

ಶಿಲ್ಕು ವೆತ್ಯಾಸ 24,240/- ರೂಗಳಿವೆ

ಒಟ್ಟು ನಾರಾಯಣ ನಾಯ್ಕ ಅವಧಿಯಲ್ಲಿ 75,44,833/- ರೂಗಳ ಹಣ ದುರುಪಯೋಗವಾಗಿದೆ.ಈ ಸಂಭಂಧ ನಾರಾಯಣ ನಾಯ್ಕ ರವರನ್ನ ಪ್ರಶ್ನಿಸಿದಾಗ ಸಮಂಜಸ ಉತ್ತರ ಬಂದಿರುವುದಿಲ್ಲ.ಹೀಗಾಗಿ ಕೃಷಿಪತ್ತಿನ ಸಹಕಾರ ಸಂಘಗಳ ನಿಯಮಾನುಸಾರ ನಾರಾಯಣ ನಾಯ್ಕ ವಿರುದ್ದ FIR ದಾಖಲಿಸಲಾಗಿದೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *