ದರ್ಮಾಪುರ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 75.44 ಲಕ್ಷ ಉಂಡೆನಾಮ…ಮಾಜಿ ಸಿಇಓ ನಾರಾಯಣ ನಾಯ್ಕ ವಿರುದ್ದ FIR…

ದರ್ಮಾಪುರ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 75.44 ಲಕ್ಷ ಉಂಡೆನಾಮ…ಮಾಜಿ ಸಿಇಓ ನಾರಾಯಣ ನಾಯ್ಕ ವಿರುದ್ದ FIR…

ಹುಣಸೂರು,ಮಾ16,Tv10 ಕನ್ನಡ

ಹುಣಸೂರು ತಸಲೂಕು ಧರ್ಮಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 75.44 ಲಕ್ಷ ಹಣ ದುರುಪಯೋಗವಾಗಿರುವುದು ಬೆಳಕಿಗೆ ಬಂದಿದೆ.ಮಾಜಿ ಕಾರ್ಯನಿರ್ವಹಣಾಧಿಕಾರಿ ನಾರಾಯಣ ನಾಯ್ಕ ವಿರುದ್ದ ಹಾಲಿ ಸಿಇಓ ಬೀರಪ್ಪ ರವರು ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಿಸಿದ್ದಾರೆ.

2022-23 ರ ಅವಧಿಯಲ್ಲಿ ಹಣ ದುರುಪಯೋಗವಾಗಿರುವುದು ಲೆಕ್ಕಪರಿಶೋಧನಾ ವೇಳೆ ತಿಳಿದುಬಂದಿದೆ.30-06-2023 ರಂದು ನಾರಾಯಣ ನಾಯ್ಕ ರವರು ನಿವೃತ್ತಿ ಹೊಂದಿದ್ದಾರೆ.ಸೂಕ್ತ ಲೆಕ್ಕಗಳನ್ನ ಪಾಲಿಸದೆ ಸಂಘಕ್ಕೆ 75,44,833/- ರೂಗಳನ್ನ ದುರುಪಯೋಗ ಮಾಡಿಕೊಂಡು ಸಂಘಕ್ಕೆ ನಷ್ಟ ಉಂಟು ಮಾಡಿದ್ದಾರೆಂದು ಆರೋಪಿಸಲಾಗಿದೆ.

ಸಾಲಗಾರರ ಲೆಡ್ಜರ್ ನಲ್ಲಿ ಹಣ ಪಾವತಿ ಆದಂತೆ ಹಾಗೂ ಮರುಪಾವತಿ ಆದಂತೆ ನಮೂದಿಸಿ ನಗದು ಪುಸ್ತಕದಲ್ಲಿ ಜಮಾ ಮಾಡದೆ ಇರುವುದು 67,95,266/- ರೂ ಇದೆ.

ಸದಸ್ಯರಿಗೆ ದಾಖಲಾತಿ ಇಲ್ಲದೆ ಸಾಲ ಮುಂಗಡ ಮಾಡಿರುವುದು 4,58,000/- ರೂ ಇದೆ

ಜಿಲ್ಲಾ ಬ್ಯಾಂಕ್ ಷೇರು ವೆತ್ಯಾಸ. 63,850/- ರೂ ಇದೆ

ಕೆಸಿಸಿ ಅಮಾನತ್ತು ಬಾಬ್ತಿಗೆ ಹೆಚ್ಚಿನ ಖರ್ಚು ತೋರಿಸಿರುವುದು 2,03,477/- ಇದೆ

ಶಿಲ್ಕು ವೆತ್ಯಾಸ 24,240/- ರೂಗಳಿವೆ

ಒಟ್ಟು ನಾರಾಯಣ ನಾಯ್ಕ ಅವಧಿಯಲ್ಲಿ 75,44,833/- ರೂಗಳ ಹಣ ದುರುಪಯೋಗವಾಗಿದೆ.ಈ ಸಂಭಂಧ ನಾರಾಯಣ ನಾಯ್ಕ ರವರನ್ನ ಪ್ರಶ್ನಿಸಿದಾಗ ಸಮಂಜಸ ಉತ್ತರ ಬಂದಿರುವುದಿಲ್ಲ.ಹೀಗಾಗಿ ಕೃಷಿಪತ್ತಿನ ಸಹಕಾರ ಸಂಘಗಳ ನಿಯಮಾನುಸಾರ ನಾರಾಯಣ ನಾಯ್ಕ ವಿರುದ್ದ FIR ದಾಖಲಿಸಲಾಗಿದೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *