ದರ್ಮಾಪುರ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 75.44 ಲಕ್ಷ ಉಂಡೆನಾಮ…ಮಾಜಿ ಸಿಇಓ ನಾರಾಯಣ ನಾಯ್ಕ ವಿರುದ್ದ FIR…

ದರ್ಮಾಪುರ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 75.44 ಲಕ್ಷ ಉಂಡೆನಾಮ…ಮಾಜಿ ಸಿಇಓ ನಾರಾಯಣ ನಾಯ್ಕ ವಿರುದ್ದ FIR…

ಹುಣಸೂರು,ಮಾ16,Tv10 ಕನ್ನಡ

ಹುಣಸೂರು ತಸಲೂಕು ಧರ್ಮಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 75.44 ಲಕ್ಷ ಹಣ ದುರುಪಯೋಗವಾಗಿರುವುದು ಬೆಳಕಿಗೆ ಬಂದಿದೆ.ಮಾಜಿ ಕಾರ್ಯನಿರ್ವಹಣಾಧಿಕಾರಿ ನಾರಾಯಣ ನಾಯ್ಕ ವಿರುದ್ದ ಹಾಲಿ ಸಿಇಓ ಬೀರಪ್ಪ ರವರು ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಿಸಿದ್ದಾರೆ.

2022-23 ರ ಅವಧಿಯಲ್ಲಿ ಹಣ ದುರುಪಯೋಗವಾಗಿರುವುದು ಲೆಕ್ಕಪರಿಶೋಧನಾ ವೇಳೆ ತಿಳಿದುಬಂದಿದೆ.30-06-2023 ರಂದು ನಾರಾಯಣ ನಾಯ್ಕ ರವರು ನಿವೃತ್ತಿ ಹೊಂದಿದ್ದಾರೆ.ಸೂಕ್ತ ಲೆಕ್ಕಗಳನ್ನ ಪಾಲಿಸದೆ ಸಂಘಕ್ಕೆ 75,44,833/- ರೂಗಳನ್ನ ದುರುಪಯೋಗ ಮಾಡಿಕೊಂಡು ಸಂಘಕ್ಕೆ ನಷ್ಟ ಉಂಟು ಮಾಡಿದ್ದಾರೆಂದು ಆರೋಪಿಸಲಾಗಿದೆ.

ಸಾಲಗಾರರ ಲೆಡ್ಜರ್ ನಲ್ಲಿ ಹಣ ಪಾವತಿ ಆದಂತೆ ಹಾಗೂ ಮರುಪಾವತಿ ಆದಂತೆ ನಮೂದಿಸಿ ನಗದು ಪುಸ್ತಕದಲ್ಲಿ ಜಮಾ ಮಾಡದೆ ಇರುವುದು 67,95,266/- ರೂ ಇದೆ.

ಸದಸ್ಯರಿಗೆ ದಾಖಲಾತಿ ಇಲ್ಲದೆ ಸಾಲ ಮುಂಗಡ ಮಾಡಿರುವುದು 4,58,000/- ರೂ ಇದೆ

ಜಿಲ್ಲಾ ಬ್ಯಾಂಕ್ ಷೇರು ವೆತ್ಯಾಸ. 63,850/- ರೂ ಇದೆ

ಕೆಸಿಸಿ ಅಮಾನತ್ತು ಬಾಬ್ತಿಗೆ ಹೆಚ್ಚಿನ ಖರ್ಚು ತೋರಿಸಿರುವುದು 2,03,477/- ಇದೆ

ಶಿಲ್ಕು ವೆತ್ಯಾಸ 24,240/- ರೂಗಳಿವೆ

ಒಟ್ಟು ನಾರಾಯಣ ನಾಯ್ಕ ಅವಧಿಯಲ್ಲಿ 75,44,833/- ರೂಗಳ ಹಣ ದುರುಪಯೋಗವಾಗಿದೆ.ಈ ಸಂಭಂಧ ನಾರಾಯಣ ನಾಯ್ಕ ರವರನ್ನ ಪ್ರಶ್ನಿಸಿದಾಗ ಸಮಂಜಸ ಉತ್ತರ ಬಂದಿರುವುದಿಲ್ಲ.ಹೀಗಾಗಿ ಕೃಷಿಪತ್ತಿನ ಸಹಕಾರ ಸಂಘಗಳ ನಿಯಮಾನುಸಾರ ನಾರಾಯಣ ನಾಯ್ಕ ವಿರುದ್ದ FIR ದಾಖಲಿಸಲಾಗಿದೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *