ದರ್ಮಾಪುರ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 75.44 ಲಕ್ಷ ಉಂಡೆನಾಮ…ಮಾಜಿ ಸಿಇಓ ನಾರಾಯಣ ನಾಯ್ಕ ವಿರುದ್ದ FIR…

ದರ್ಮಾಪುರ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 75.44 ಲಕ್ಷ ಉಂಡೆನಾಮ…ಮಾಜಿ ಸಿಇಓ ನಾರಾಯಣ ನಾಯ್ಕ ವಿರುದ್ದ FIR…

ಹುಣಸೂರು,ಮಾ16,Tv10 ಕನ್ನಡ

ಹುಣಸೂರು ತಸಲೂಕು ಧರ್ಮಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 75.44 ಲಕ್ಷ ಹಣ ದುರುಪಯೋಗವಾಗಿರುವುದು ಬೆಳಕಿಗೆ ಬಂದಿದೆ.ಮಾಜಿ ಕಾರ್ಯನಿರ್ವಹಣಾಧಿಕಾರಿ ನಾರಾಯಣ ನಾಯ್ಕ ವಿರುದ್ದ ಹಾಲಿ ಸಿಇಓ ಬೀರಪ್ಪ ರವರು ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಿಸಿದ್ದಾರೆ.

2022-23 ರ ಅವಧಿಯಲ್ಲಿ ಹಣ ದುರುಪಯೋಗವಾಗಿರುವುದು ಲೆಕ್ಕಪರಿಶೋಧನಾ ವೇಳೆ ತಿಳಿದುಬಂದಿದೆ.30-06-2023 ರಂದು ನಾರಾಯಣ ನಾಯ್ಕ ರವರು ನಿವೃತ್ತಿ ಹೊಂದಿದ್ದಾರೆ.ಸೂಕ್ತ ಲೆಕ್ಕಗಳನ್ನ ಪಾಲಿಸದೆ ಸಂಘಕ್ಕೆ 75,44,833/- ರೂಗಳನ್ನ ದುರುಪಯೋಗ ಮಾಡಿಕೊಂಡು ಸಂಘಕ್ಕೆ ನಷ್ಟ ಉಂಟು ಮಾಡಿದ್ದಾರೆಂದು ಆರೋಪಿಸಲಾಗಿದೆ.

ಸಾಲಗಾರರ ಲೆಡ್ಜರ್ ನಲ್ಲಿ ಹಣ ಪಾವತಿ ಆದಂತೆ ಹಾಗೂ ಮರುಪಾವತಿ ಆದಂತೆ ನಮೂದಿಸಿ ನಗದು ಪುಸ್ತಕದಲ್ಲಿ ಜಮಾ ಮಾಡದೆ ಇರುವುದು 67,95,266/- ರೂ ಇದೆ.

ಸದಸ್ಯರಿಗೆ ದಾಖಲಾತಿ ಇಲ್ಲದೆ ಸಾಲ ಮುಂಗಡ ಮಾಡಿರುವುದು 4,58,000/- ರೂ ಇದೆ

ಜಿಲ್ಲಾ ಬ್ಯಾಂಕ್ ಷೇರು ವೆತ್ಯಾಸ. 63,850/- ರೂ ಇದೆ

ಕೆಸಿಸಿ ಅಮಾನತ್ತು ಬಾಬ್ತಿಗೆ ಹೆಚ್ಚಿನ ಖರ್ಚು ತೋರಿಸಿರುವುದು 2,03,477/- ಇದೆ

ಶಿಲ್ಕು ವೆತ್ಯಾಸ 24,240/- ರೂಗಳಿವೆ

ಒಟ್ಟು ನಾರಾಯಣ ನಾಯ್ಕ ಅವಧಿಯಲ್ಲಿ 75,44,833/- ರೂಗಳ ಹಣ ದುರುಪಯೋಗವಾಗಿದೆ.ಈ ಸಂಭಂಧ ನಾರಾಯಣ ನಾಯ್ಕ ರವರನ್ನ ಪ್ರಶ್ನಿಸಿದಾಗ ಸಮಂಜಸ ಉತ್ತರ ಬಂದಿರುವುದಿಲ್ಲ.ಹೀಗಾಗಿ ಕೃಷಿಪತ್ತಿನ ಸಹಕಾರ ಸಂಘಗಳ ನಿಯಮಾನುಸಾರ ನಾರಾಯಣ ನಾಯ್ಕ ವಿರುದ್ದ FIR ದಾಖಲಿಸಲಾಗಿದೆ…

Spread the love

Related post

ಸಿಟಿ ಲೈಟ್ಸ್ ತಂಡದಿಂದ ಪುನೀತ್ ರಾಜ್ ಕುಮಾರ್ ಹುಟ್ಟು ಹಬ್ಬ ಆಚರಣೆ…

ಸಿಟಿ ಲೈಟ್ಸ್ ತಂಡದಿಂದ ಪುನೀತ್ ರಾಜ್ ಕುಮಾರ್ ಹುಟ್ಟು ಹಬ್ಬ ಆಚರಣೆ…

ಬೆಂಗಳೂರು,ಮಾ17,Tv10 ಕನ್ನಡ ಬೆಂಗಳೂರಿನ ಗುಬ್ಬಿ ವೀರಣ್ಣ ಕಲಾ ಮಂಟಪದಲ್ಲಿ ಸಿಟಿ ಲೈಟ್ಸ್ ಚಿತ್ರೀಕರಣ ನಡೆಯುವ ಸಂಧರ್ಭದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ರವರ ಹುಟ್ಟು ಹಬ್ಬವನ್ನ ಆಚರಿಸಲಾಯಿತು. ಕೇಕ್…
ಶ್ರೀ ದತ್ತ ವಿಜಯಾನಂದ ಸ್ವಾಮೀಜಿ ಯವರಿಂದ ಪಾದಯಾತ್ರೆ…ಉತ್ತಮ ಆರೋಗ್ಯಕ್ಕಾಗಿ ನಡಿಗೆ…

ಶ್ರೀ ದತ್ತ ವಿಜಯಾನಂದ ಸ್ವಾಮೀಜಿ ಯವರಿಂದ ಪಾದಯಾತ್ರೆ…ಉತ್ತಮ ಆರೋಗ್ಯಕ್ಕಾಗಿ ನಡಿಗೆ…

ಮೈಸೂರು,ಮಾ17,Tv10 ಕನ್ನಡ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಿಂದ ಶ್ರೀಕಂಠೇಶ್ವರ ಸ್ವಾಮಿ ಸನ್ನಿಧಿಗೆ ಇಂದು ಕಿರಿಯ ಸ್ವಾಮೀಜಿಗಳಾ ಶ್ರೀ ದತ್ತವಿಜಯಾನಂದ ಸ್ವಾಮೀಜಿಯವರು ಪಾದಯಾತ್ರೆ ಕೈಗೊಂಡರು.ವಿಶ್ವ ಶಾಂತಿ ಹಾಗೂ ನಮ್ಮ ನಡಿಗೆ…
ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿಯವರಿಂದ ಪಾದಯಾತ್ರೆ…ಗಣಪತಿ ಸಚ್ಚಿದಾನಂದ ಆಶ್ರಮದಿಂದ… ಶ್ರೀಕಂಠೇಶ್ವರ ಸ್ವಾಮಿ ಸನ್ನಿಧಿಗೆ…ವಿಶ್ವಶಾಂತಿಗಾಗಿ ನಡಿಗೆ ಮೂಲಕ ಜಾಗೃತಿ…

ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿಯವರಿಂದ ಪಾದಯಾತ್ರೆ…ಗಣಪತಿ ಸಚ್ಚಿದಾನಂದ ಆಶ್ರಮದಿಂದ… ಶ್ರೀಕಂಠೇಶ್ವರ…

ಮೈಸೂರು,ಮಾ16,Tv10 ಕನ್ನಡ ವಿಶ್ವ ಶಾಂತಿ ಹಾಗೂ ನಮ್ಮ ನಡಿಗೆ ಆರೋಗ್ಯವಂತ ವಿಶ್ವದೆಡೆಗೆ ಎಂಬ ಘೋಷವಾಖ್ಯದಡಿಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಿಂದನಂಜನಗೂಡು ಶ್ರೀಕಂಠೇಶ್ವರ ಸ್ವಾಮಿ ಸನ್ನಿಧಿಗೆ ನಾಳೆ(ಮಾ.17) ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ‌.ಬೆಳಿಗ್ಗೆ 5.30ಕ್ಕೆ‌ದತ್ತಪೀಠಾಧಿಪತಿ…

Leave a Reply

Your email address will not be published. Required fields are marked *