ದರ್ಮಾಪುರ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 75.44 ಲಕ್ಷ ಉಂಡೆನಾಮ…ಮಾಜಿ ಸಿಇಓ ನಾರಾಯಣ ನಾಯ್ಕ ವಿರುದ್ದ FIR…

ದರ್ಮಾಪುರ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 75.44 ಲಕ್ಷ ಉಂಡೆನಾಮ…ಮಾಜಿ ಸಿಇಓ ನಾರಾಯಣ ನಾಯ್ಕ ವಿರುದ್ದ FIR…

ಹುಣಸೂರು,ಮಾ16,Tv10 ಕನ್ನಡ

ಹುಣಸೂರು ತಸಲೂಕು ಧರ್ಮಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 75.44 ಲಕ್ಷ ಹಣ ದುರುಪಯೋಗವಾಗಿರುವುದು ಬೆಳಕಿಗೆ ಬಂದಿದೆ.ಮಾಜಿ ಕಾರ್ಯನಿರ್ವಹಣಾಧಿಕಾರಿ ನಾರಾಯಣ ನಾಯ್ಕ ವಿರುದ್ದ ಹಾಲಿ ಸಿಇಓ ಬೀರಪ್ಪ ರವರು ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಿಸಿದ್ದಾರೆ.

2022-23 ರ ಅವಧಿಯಲ್ಲಿ ಹಣ ದುರುಪಯೋಗವಾಗಿರುವುದು ಲೆಕ್ಕಪರಿಶೋಧನಾ ವೇಳೆ ತಿಳಿದುಬಂದಿದೆ.30-06-2023 ರಂದು ನಾರಾಯಣ ನಾಯ್ಕ ರವರು ನಿವೃತ್ತಿ ಹೊಂದಿದ್ದಾರೆ.ಸೂಕ್ತ ಲೆಕ್ಕಗಳನ್ನ ಪಾಲಿಸದೆ ಸಂಘಕ್ಕೆ 75,44,833/- ರೂಗಳನ್ನ ದುರುಪಯೋಗ ಮಾಡಿಕೊಂಡು ಸಂಘಕ್ಕೆ ನಷ್ಟ ಉಂಟು ಮಾಡಿದ್ದಾರೆಂದು ಆರೋಪಿಸಲಾಗಿದೆ.

ಸಾಲಗಾರರ ಲೆಡ್ಜರ್ ನಲ್ಲಿ ಹಣ ಪಾವತಿ ಆದಂತೆ ಹಾಗೂ ಮರುಪಾವತಿ ಆದಂತೆ ನಮೂದಿಸಿ ನಗದು ಪುಸ್ತಕದಲ್ಲಿ ಜಮಾ ಮಾಡದೆ ಇರುವುದು 67,95,266/- ರೂ ಇದೆ.

ಸದಸ್ಯರಿಗೆ ದಾಖಲಾತಿ ಇಲ್ಲದೆ ಸಾಲ ಮುಂಗಡ ಮಾಡಿರುವುದು 4,58,000/- ರೂ ಇದೆ

ಜಿಲ್ಲಾ ಬ್ಯಾಂಕ್ ಷೇರು ವೆತ್ಯಾಸ. 63,850/- ರೂ ಇದೆ

ಕೆಸಿಸಿ ಅಮಾನತ್ತು ಬಾಬ್ತಿಗೆ ಹೆಚ್ಚಿನ ಖರ್ಚು ತೋರಿಸಿರುವುದು 2,03,477/- ಇದೆ

ಶಿಲ್ಕು ವೆತ್ಯಾಸ 24,240/- ರೂಗಳಿವೆ

ಒಟ್ಟು ನಾರಾಯಣ ನಾಯ್ಕ ಅವಧಿಯಲ್ಲಿ 75,44,833/- ರೂಗಳ ಹಣ ದುರುಪಯೋಗವಾಗಿದೆ.ಈ ಸಂಭಂಧ ನಾರಾಯಣ ನಾಯ್ಕ ರವರನ್ನ ಪ್ರಶ್ನಿಸಿದಾಗ ಸಮಂಜಸ ಉತ್ತರ ಬಂದಿರುವುದಿಲ್ಲ.ಹೀಗಾಗಿ ಕೃಷಿಪತ್ತಿನ ಸಹಕಾರ ಸಂಘಗಳ ನಿಯಮಾನುಸಾರ ನಾರಾಯಣ ನಾಯ್ಕ ವಿರುದ್ದ FIR ದಾಖಲಿಸಲಾಗಿದೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *