ಶ್ರೀ ದತ್ತ ವಿಜಯಾನಂದ ಸ್ವಾಮೀಜಿ ಯವರಿಂದ ಪಾದಯಾತ್ರೆ…ಉತ್ತಮ ಆರೋಗ್ಯಕ್ಕಾಗಿ ನಡಿಗೆ…

ಶ್ರೀ ದತ್ತ ವಿಜಯಾನಂದ ಸ್ವಾಮೀಜಿ ಯವರಿಂದ ಪಾದಯಾತ್ರೆ…ಉತ್ತಮ ಆರೋಗ್ಯಕ್ಕಾಗಿ ನಡಿಗೆ…

ಮೈಸೂರು,ಮಾ17,Tv10 ಕನ್ನಡ

ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಿಂದ ಶ್ರೀಕಂಠೇಶ್ವರ ಸ್ವಾಮಿ ಸನ್ನಿಧಿಗೆ ಇಂದು ಕಿರಿಯ ಸ್ವಾಮೀಜಿಗಳಾ ಶ್ರೀ ದತ್ತವಿಜಯಾನಂದ ಸ್ವಾಮೀಜಿಯವರು ಪಾದಯಾತ್ರೆ ಕೈಗೊಂಡರು.
ವಿಶ್ವ ಶಾಂತಿ ಹಾಗೂ ನಮ್ಮ ನಡಿಗೆ ಆರೋಗ್ಯವಂತ ವಿಶ್ವದೆಡೆಗೆ ಎಂಬ ಘೋಷವಾಖ್ಯದಡಿ
ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಿಂದ
ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿ ಸನ್ನಿಧಿಗೆ ಇಂದು ಪಾದಯಾತ್ರೆ ಹಮ್ಮಿಕೊಂಡರು.
ಇಂದು ಬೆಳಿಗ್ಗೆ 5.30ಕ್ಕೆ‌ ದತ್ತಪೀಠಾಧಿಪತಿ ಪೂಜ್ಯ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ ಆಶೀರ್ವಾದದೊಂದಿಗೆ ಕಿರಿಯ ಶ್ರೀಗಳಾದ ಶ್ರೀ ದತ್ತವಿಜಯಾನಂದ ತೀರ್ಥ ಸ್ವಾಮೀಜಿಯವರ ನೇತೃತ್ವದಲ್ಲಿ ಶ್ರೀಕಂಠೇಶ್ವರ ಸ್ವಾಮಿ ಸನ್ನಿಧಿಗೆ ಈ ಪಾದಯಾತ್ರೆ ಸಾಗಿತು.
ಮನುಷ್ಯನ ಉತ್ತಮ ಆರೋಗ್ಯಕ್ಕೆ ಕಾಲ್ನಡಿಗೆ ಅತ್ಯುತ್ತಮ ವ್ಯಾಯಾಮ ಎಂಬ ಕುರಿತು ಜನ ಜಾಗೃತಿ ಮೂಡಿಸಲು ಹಮ್ಮಿಕೊಂಡಿದ್ದ ಈ ವಿಶೇಷ ಕಾರ್ಯಕ್ರಮದಲ್ಲಿ ಸುಮಾರು 100ಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *