ಕುಡಿಬೇಡ ಕೆಲಸಕ್ಕೆ ಹೋಗು ಎಂದ ಪತ್ನಿ ಮೇಲೆ ಬಿಸಿ ಸಾಂಬಾರ್ ಸುರಿದ ಪತಿ

ಕುಡಿಬೇಡ ಕೆಲಸಕ್ಕೆ ಹೋಗು ಎಂದ ಪತ್ನಿ ಮೇಲೆ ಬಿಸಿ ಸಾಂಬಾರ್ ಸುರಿದ ಪತಿ

ಮೈಸೂರು,ಮಾ24,Tv10 ಕನ್ನಡ

ಕುಡಿತದ ಚಟಕ್ಕೆ ದಾಸನಾಗಿ ಕೆಲಸಕ್ಕೆ ಹೋಗದ ಪತಿಗೆ ಬುದ್ದಿವಾದ ಹೇಳಿದ ಪತ್ನಿ ಮೇಲೆ ಬಿಸಿ ಸಾಂಬಾರ್ ಸುರಿದ ಘಟನೆ ಮೈಸೂರಿನ ಹಿನಕಲ್ ನಲ್ಲಿ ನಡೆದಿದೆ.ಗಾಯಗೊಂಡ ಪತ್ನಿಗೆ ಕೆ.ಆರ್.ಆಸ್ಪತ್ರೆಯ ಸುಟ್ಟಗಾಯ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಪತಿ ರಾಜು ವಿಕೃತಿಗೆ ಪತ್ನಿ ಗಾಯಗೊಂಡಿದ್ದಾರೆ.ಸಮೀಪದಲ್ಲೇ ಇದ್ದ ಮಗಳಿಗೂ ಸುಟ್ಟಗಾಯಗಳಾಗಿದೆ.

ಮಂಗಳಮ್ಮ ಹಾಗೂ ಮಗಳು ಸುಮತಿ ಗಾಯಗೊಂಡವರು.ಪತಿ ರಾಜು ವಿಕೃತಿ ಮೆರೆದವನು.ಮೂಲತಃ ನಂಜನಗೂಡು ನಿವಾಸಿಗಳಾದ ರಾಜು ಹಾಗೂ ಮಂಗಳಮ್ಮ ಜೀವನೋಪಾಯಕ್ಕಾಗಿ 4 ತಿಂಗಳ ಹಿಂದೆ ಮೈಸೂರಿಗೆ ಬಂದು ಹಿನಕಲ್ ನಲ್ಲಿ ನೆಲೆಸಿದ್ದರಯ.ಕುಡಿತದ ಚಟಕ್ಕೆ ದಾಸನಾಗಿದ್ದ ರಾಜು ಕೆಲಸಕ್ಕೆ ಹೋಗುತ್ತಿರಲಿಲ್ಲ.ಎರಡು ದಿನಗಳ ಹಿಂದೆ ಕೆಲಸ ಮುಗಿಸಿ ಮಂಗಳಮ್ಮ ಮನೆಗೆ ಹಿಂದಿರುಗಿದಾಗ ರಾಜು ಮನೆಯಲ್ಲೇ ಕುಡಿದು ಬಿದ್ದಿದ್ದ.ಕೆಲಸಕ್ಕೆ ಹೋಗಲಿಲ್ಲ ಅಂದ್ರೆ ಸಂಸಾರ ಹೇಗೆ ನಡೆಯುತ್ತೆ.ಕುಡಿತ ಬಿಟ್ಟು ಕೆಲಸಕ್ಕೆ ಹೋಗು ಎಂದು ಪತಿಗೆ ಬುದ್ದಿವಾದ ಹೇಳಿದ್ದಾರೆ.ಇಷ್ಟಕ್ಕೇ ಸಿಟ್ಟಿಗೆದ್ದ ರಾಜು ನೀನು ಇದ್ರೆ ತಾನೆ ಕೆಲಸಕ್ಕೆ ಹೋಗು ಅಂತೀಯ.ನನ್ನ ಸಂಪಾದನೆಯಲ್ಲಿ ನಾನು ಕುಡೀತೀನಿ ಎಂದು ಅರಚಾಡಿ ಕಿರುಚಾಡಿ ಒಲೆ ಮೇಲೆ ಕುದಿಯುತ್ತಿದ್ದ ಬಿಸಿ ಸಾಂಬಾರ್ ಎತ್ತಿ ಮಂಗಳಮ್ಮ ಮೇಲೆ ಸುರಿದಿದ್ದಾನೆ.ಈ ವೇಳೆ ಮಗಳು ಸುಮತಿ ಸಹ ಇದ್ದಳು.ಇಬ್ಬರಿಗೂ ಸುಟ್ಟಗಾಯಗಳಾಗಿವೆ.ವಿಜಯನಗರ ಪೊಲೀಸ್ ಠಾಣೆಯಲ್ಲಿ ರಾಜು ವಿರುದ್ದ ಮಂಗಳಮ್ಮ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *