ಕುಡಿಬೇಡ ಕೆಲಸಕ್ಕೆ ಹೋಗು ಎಂದ ಪತ್ನಿ ಮೇಲೆ ಬಿಸಿ ಸಾಂಬಾರ್ ಸುರಿದ ಪತಿ

ಕುಡಿಬೇಡ ಕೆಲಸಕ್ಕೆ ಹೋಗು ಎಂದ ಪತ್ನಿ ಮೇಲೆ ಬಿಸಿ ಸಾಂಬಾರ್ ಸುರಿದ ಪತಿ

ಮೈಸೂರು,ಮಾ24,Tv10 ಕನ್ನಡ

ಕುಡಿತದ ಚಟಕ್ಕೆ ದಾಸನಾಗಿ ಕೆಲಸಕ್ಕೆ ಹೋಗದ ಪತಿಗೆ ಬುದ್ದಿವಾದ ಹೇಳಿದ ಪತ್ನಿ ಮೇಲೆ ಬಿಸಿ ಸಾಂಬಾರ್ ಸುರಿದ ಘಟನೆ ಮೈಸೂರಿನ ಹಿನಕಲ್ ನಲ್ಲಿ ನಡೆದಿದೆ.ಗಾಯಗೊಂಡ ಪತ್ನಿಗೆ ಕೆ.ಆರ್.ಆಸ್ಪತ್ರೆಯ ಸುಟ್ಟಗಾಯ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಪತಿ ರಾಜು ವಿಕೃತಿಗೆ ಪತ್ನಿ ಗಾಯಗೊಂಡಿದ್ದಾರೆ.ಸಮೀಪದಲ್ಲೇ ಇದ್ದ ಮಗಳಿಗೂ ಸುಟ್ಟಗಾಯಗಳಾಗಿದೆ.

ಮಂಗಳಮ್ಮ ಹಾಗೂ ಮಗಳು ಸುಮತಿ ಗಾಯಗೊಂಡವರು.ಪತಿ ರಾಜು ವಿಕೃತಿ ಮೆರೆದವನು.ಮೂಲತಃ ನಂಜನಗೂಡು ನಿವಾಸಿಗಳಾದ ರಾಜು ಹಾಗೂ ಮಂಗಳಮ್ಮ ಜೀವನೋಪಾಯಕ್ಕಾಗಿ 4 ತಿಂಗಳ ಹಿಂದೆ ಮೈಸೂರಿಗೆ ಬಂದು ಹಿನಕಲ್ ನಲ್ಲಿ ನೆಲೆಸಿದ್ದರಯ.ಕುಡಿತದ ಚಟಕ್ಕೆ ದಾಸನಾಗಿದ್ದ ರಾಜು ಕೆಲಸಕ್ಕೆ ಹೋಗುತ್ತಿರಲಿಲ್ಲ.ಎರಡು ದಿನಗಳ ಹಿಂದೆ ಕೆಲಸ ಮುಗಿಸಿ ಮಂಗಳಮ್ಮ ಮನೆಗೆ ಹಿಂದಿರುಗಿದಾಗ ರಾಜು ಮನೆಯಲ್ಲೇ ಕುಡಿದು ಬಿದ್ದಿದ್ದ.ಕೆಲಸಕ್ಕೆ ಹೋಗಲಿಲ್ಲ ಅಂದ್ರೆ ಸಂಸಾರ ಹೇಗೆ ನಡೆಯುತ್ತೆ.ಕುಡಿತ ಬಿಟ್ಟು ಕೆಲಸಕ್ಕೆ ಹೋಗು ಎಂದು ಪತಿಗೆ ಬುದ್ದಿವಾದ ಹೇಳಿದ್ದಾರೆ.ಇಷ್ಟಕ್ಕೇ ಸಿಟ್ಟಿಗೆದ್ದ ರಾಜು ನೀನು ಇದ್ರೆ ತಾನೆ ಕೆಲಸಕ್ಕೆ ಹೋಗು ಅಂತೀಯ.ನನ್ನ ಸಂಪಾದನೆಯಲ್ಲಿ ನಾನು ಕುಡೀತೀನಿ ಎಂದು ಅರಚಾಡಿ ಕಿರುಚಾಡಿ ಒಲೆ ಮೇಲೆ ಕುದಿಯುತ್ತಿದ್ದ ಬಿಸಿ ಸಾಂಬಾರ್ ಎತ್ತಿ ಮಂಗಳಮ್ಮ ಮೇಲೆ ಸುರಿದಿದ್ದಾನೆ.ಈ ವೇಳೆ ಮಗಳು ಸುಮತಿ ಸಹ ಇದ್ದಳು.ಇಬ್ಬರಿಗೂ ಸುಟ್ಟಗಾಯಗಳಾಗಿವೆ.ವಿಜಯನಗರ ಪೊಲೀಸ್ ಠಾಣೆಯಲ್ಲಿ ರಾಜು ವಿರುದ್ದ ಮಂಗಳಮ್ಮ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *