
ಕುಡಿಬೇಡ ಕೆಲಸಕ್ಕೆ ಹೋಗು ಎಂದ ಪತ್ನಿ ಮೇಲೆ ಬಿಸಿ ಸಾಂಬಾರ್ ಸುರಿದ ಪತಿ
- TV10 Kannada Exclusive
- March 24, 2025
- No Comment
- 204
ಮೈಸೂರು,ಮಾ24,Tv10 ಕನ್ನಡ
ಕುಡಿತದ ಚಟಕ್ಕೆ ದಾಸನಾಗಿ ಕೆಲಸಕ್ಕೆ ಹೋಗದ ಪತಿಗೆ ಬುದ್ದಿವಾದ ಹೇಳಿದ ಪತ್ನಿ ಮೇಲೆ ಬಿಸಿ ಸಾಂಬಾರ್ ಸುರಿದ ಘಟನೆ ಮೈಸೂರಿನ ಹಿನಕಲ್ ನಲ್ಲಿ ನಡೆದಿದೆ.ಗಾಯಗೊಂಡ ಪತ್ನಿಗೆ ಕೆ.ಆರ್.ಆಸ್ಪತ್ರೆಯ ಸುಟ್ಟಗಾಯ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಪತಿ ರಾಜು ವಿಕೃತಿಗೆ ಪತ್ನಿ ಗಾಯಗೊಂಡಿದ್ದಾರೆ.ಸಮೀಪದಲ್ಲೇ ಇದ್ದ ಮಗಳಿಗೂ ಸುಟ್ಟಗಾಯಗಳಾಗಿದೆ.
ಮಂಗಳಮ್ಮ ಹಾಗೂ ಮಗಳು ಸುಮತಿ ಗಾಯಗೊಂಡವರು.ಪತಿ ರಾಜು ವಿಕೃತಿ ಮೆರೆದವನು.ಮೂಲತಃ ನಂಜನಗೂಡು ನಿವಾಸಿಗಳಾದ ರಾಜು ಹಾಗೂ ಮಂಗಳಮ್ಮ ಜೀವನೋಪಾಯಕ್ಕಾಗಿ 4 ತಿಂಗಳ ಹಿಂದೆ ಮೈಸೂರಿಗೆ ಬಂದು ಹಿನಕಲ್ ನಲ್ಲಿ ನೆಲೆಸಿದ್ದರಯ.ಕುಡಿತದ ಚಟಕ್ಕೆ ದಾಸನಾಗಿದ್ದ ರಾಜು ಕೆಲಸಕ್ಕೆ ಹೋಗುತ್ತಿರಲಿಲ್ಲ.ಎರಡು ದಿನಗಳ ಹಿಂದೆ ಕೆಲಸ ಮುಗಿಸಿ ಮಂಗಳಮ್ಮ ಮನೆಗೆ ಹಿಂದಿರುಗಿದಾಗ ರಾಜು ಮನೆಯಲ್ಲೇ ಕುಡಿದು ಬಿದ್ದಿದ್ದ.ಕೆಲಸಕ್ಕೆ ಹೋಗಲಿಲ್ಲ ಅಂದ್ರೆ ಸಂಸಾರ ಹೇಗೆ ನಡೆಯುತ್ತೆ.ಕುಡಿತ ಬಿಟ್ಟು ಕೆಲಸಕ್ಕೆ ಹೋಗು ಎಂದು ಪತಿಗೆ ಬುದ್ದಿವಾದ ಹೇಳಿದ್ದಾರೆ.ಇಷ್ಟಕ್ಕೇ ಸಿಟ್ಟಿಗೆದ್ದ ರಾಜು ನೀನು ಇದ್ರೆ ತಾನೆ ಕೆಲಸಕ್ಕೆ ಹೋಗು ಅಂತೀಯ.ನನ್ನ ಸಂಪಾದನೆಯಲ್ಲಿ ನಾನು ಕುಡೀತೀನಿ ಎಂದು ಅರಚಾಡಿ ಕಿರುಚಾಡಿ ಒಲೆ ಮೇಲೆ ಕುದಿಯುತ್ತಿದ್ದ ಬಿಸಿ ಸಾಂಬಾರ್ ಎತ್ತಿ ಮಂಗಳಮ್ಮ ಮೇಲೆ ಸುರಿದಿದ್ದಾನೆ.ಈ ವೇಳೆ ಮಗಳು ಸುಮತಿ ಸಹ ಇದ್ದಳು.ಇಬ್ಬರಿಗೂ ಸುಟ್ಟಗಾಯಗಳಾಗಿವೆ.ವಿಜಯನಗರ ಪೊಲೀಸ್ ಠಾಣೆಯಲ್ಲಿ ರಾಜು ವಿರುದ್ದ ಮಂಗಳಮ್ಮ ಪ್ರಕರಣ ದಾಖಲಿಸಿದ್ದಾರೆ…