ಪ್ರೀತಿ ಮಾಡೋಕ್ಕೆ ನನ್ನ ಮಗಳೇ ಬೇಕಾ…? ಪುತ್ರಿಯ ಲವರ್ ಗೆ ತಂದೆಯಿಂದ ಹಿಗ್ಗಾ ಮುಗ್ಗಾ ಹಲ್ಲೆ…ಮೂವರ ವಿರುದ್ದ FIR…

ಪ್ರೀತಿ ಮಾಡೋಕ್ಕೆ ನನ್ನ ಮಗಳೇ ಬೇಕಾ…? ಪುತ್ರಿಯ ಲವರ್ ಗೆ ತಂದೆಯಿಂದ ಹಿಗ್ಗಾ ಮುಗ್ಗಾ ಹಲ್ಲೆ…ಮೂವರ ವಿರುದ್ದ FIR…

ಮೈಸೂರು,ಮಾ26,Tv10 ಕನ್ನಡ

ಮಗಳನ್ನ ಪ್ರೀತಿಸುತ್ತಿದ್ದ ಪ್ರಿಯಕರನ ಮೇಲೆ ತಂದೆ ಹಾಗೂ ಇಬ್ಬರು ಸಂಭಂಧಿಕರು ಸಾರ್ವಜನಿಕ ರಸ್ತೆಯಲ್ಲಿ ಹಿಗ್ಗಾ ಮುಗ್ಗಾ ಥಳಿಸಿದ ಘಟನೆ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ವಾಟರ್ ಟ್ಯಾಂಕ್ ಬಳಿ ನಡೆದಿದೆ.ಪ್ರಿಯತಮೆಯ ತಂದೆ ಹಾಗೂ ಇಬ್ಬರು ಸಂಭಂಧಿಕರು ಸೇರಿದಂತೆ ಮೂವರ ವಿರುದ್ದ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಶೋಕ್(24) ಹಲ್ಲೆಗೆ ಒಳಗಾದ ಪ್ರಿಯತಮ.ಪ್ರಿಯತಮೆಯ ತಂದೆ ಕುಮಾರ್ ಹಾಗೂ ಅಕ್ಕನ ಮಕ್ಕಳಾದ ಮೋಹನ್ ಮತ್ತು ಅಭಿ ವಿರುದ್ದ ಪ್ರಕರಣ ದಾಖಲಾಗಿದೆ.

ಹೆಚ್.ಡಿ ಕೋಟೆಯ ಸೋನಳ್ಳಿ ಗ್ರಾಮದ ಕುಮಾರ್ ಮಗಳನ್ನ ಅಶೋಕ್ ಪ್ರೀತಿಸುತ್ತಿದ್ದಾರೆ.ಈ ವಿಚಾರದಲ್ಲಿ ಹುಡುಗಿ ತಂದೆ ಕುಮಾರ್ ವಿರೋಧವಿದೆ.ಸಂಭಂಧಿಕರೇ ಆಗಿದ್ರೂ ವಿರೋಧ ವ್ಯಕ್ತವಾಗಿದೆ.ಈ ಹಿನ್ನಲೆ ವಿಜಯನಗರ ವಾಟರ್ ಟ್ಯಾಂಕ್ ಬಳಿ ನಿಂತಿದ್ದ ಅಶೋಕ್ ರನ್ನ ಅಡ್ಡಗಟ್ಟಿದ ಕುಮಾರ್,ಮೋಹನ್,ಅಭಿ ರವರು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.ಪ್ರೀತಿ ಮಾಡಲು ನನ್ನ ಮಗಳೇ ಬೇಕ,ನನ್ನ ಮಗಳನ್ನ ಪ್ರೀತಿಸಲು ಎಷ್ಟು ಧೈರ್ಯ ನಿನಗೆ ಎಂದು ಆವಾಜ್ ಹಾಕಿ ದೊಣ್ಣೆಯಿಂದ ಹೊಡೆದು ಗಾಯಗೊಳಿಸಿದ್ದಾರೆ.ಗಾಯಗೊಂಡ ಅಶೋಕ್ ಚಿಕಿತ್ಸೆ ಪಡೆದು ಮೂವರ ವಿರುದ್ದ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *