ವಿಧಾನಸಭಾ ಚುನಾವಣೆ ಆಕಾಂಕ್ಷಿ ವಿರುದ್ದ ಅವಹೇಳನಾಕಾರಿ ಪೋಸ್ಟ್…ನಾಲ್ವರ ವಿರುದ್ದ ಪ್ರಕರಣ ದಾಖಲು…

ವಿಧಾನಸಭಾ ಚುನಾವಣೆ ಆಕಾಂಕ್ಷಿ ವಿರುದ್ದ ಅವಹೇಳನಾಕಾರಿ ಪೋಸ್ಟ್…ನಾಲ್ವರ ವಿರುದ್ದ ಪ್ರಕರಣ ದಾಖಲು…

ಮೈಸೂರು,ಮಾ26,Tv10 ಕನ್ನಡ

2023 ರಲ್ಲಿ ನಡೆದ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಆಕಾಂಕ್ಷಿಯ ಗೌರವಕ್ಕೆ ಕುಂದು ಬರುವಂತೆ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದ ನಾಲ್ವರ ವಿರುದ್ದ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮಂಡ್ಯ ಜಿಲ್ಲೆ ಸಂತೇಬಾಚನಹಳ್ಳಿ ಗ್ರಾಮದ ರವಿ,ಚೇತನ್ ಕುಮಾರ್,ಶ್ರೀಕಾಂತ್ ಹಾಗೂ ಕುಮಾರ್ ಎಂಬುವರ ವಿರುದ್ದ ಪ್ರಕರಣ ದಾಖಲಾಗಿದೆ.ವಿಜಯನಗರ ನಿವಾಸಿ ಸುರೇಶ್ ಎಂಬುವರು ನ್ಯಾಯಾಲಯದಿಂದ ಆದೇಶ ಮಾಡಿಸಿ ನಾಲ್ವರ ವಿರುದ್ದ ಎಫ್.ಐ.ಆರ್.ದಾಖಲಿಸಿದ್ದಾರೆ.2023 ರಲ್ಲಿ ನಡೆದ ವಿಧಾನಸಭಾ ಚುನಾವಣೆಗೆ ಸುರೇಶ್ ರವರು ಅಭ್ಯರ್ಥಿ ಸ್ಥಾನಕ್ಕೆ ಆಕಾಂಕ್ಷಿಯಾಗಿದ್ದರು.ಈ ವೇಳೆ ವಿರೋಧ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ರವಿ,ಚೇತನ್ ಕುಮಾರ್,ಶ್ರೀಕಾಂತ್,ಕುಮಾರ್ ರವರು ಸುರೇಶ್ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಮಾನಹಾರಿಕರ,ಅವಹೇಳನಾಕಾರಿಯಾಗಿ ಸಾಮಾಜಿಕ ಮಾಧ್ಯಮಗಳಲ್ಲಿ,TV ಚಾನೆಲ್ ಗಳಲ್ಲಿ,ವಾಟ್ಸಾಪ್ ಗಳಲ್ಲಿ ರಾಜಕೀಯ ಪ್ರತಿಷ್ಟೆ ಕುಗ್ಗಿಸಿ ಭವಿಷ್ಯದಲ್ಲಿ ಯಾವುದೇ ಗೌರವಾನ್ವಿತ ಸ್ಥಾನ ಪಡೆಯಬಾರದೆಂಬ ಉದ್ದೇಶದಿಂದ ವೈಯುಕ್ತಿಕ ಗೌರವಕ್ಕೆ ಹಾನಿ ಮಾಡಿದ್ದಾರೆಂದು ಆರೋಪಿಸಿ ಕ್ರಮ ಕೈಗೊಳ್ಳುವಂತೆ ನ್ಯಾಯಾಲಯದ ಮೊರೆ ಹೋಗಿದ್ರು.ವಿರೋಧ ಪಕ್ಷದಿಂದ ಒಂದು ಕೋಟಿ ಪಢದು ಅವರ ಪರವಾಗಿ ಕೆಲಸ ಮಾಡುತ್ತಿದ್ದಾರೆಂದು ನಾಲ್ವರು ಏಪ್ರಿಲ್2023 ರಲ್ಲಿ ಅಪ್ ಲೋಡ್ ಮಾಡಿದ ಆರೋಪ ನಾಲ್ವರ ವಿರುದ್ದ ಮಾಡಲಾಗಿದೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *