ಪೋಲೀಸರನ್ನ ಕಂಡು ಓಡಿದ ಕಳ್ಳ…ಬ್ಯಾಗ್ ನಲ್ಲಿ ಸಿಕ್ಕಿದ್ದು ನಗದು ಸೇರಿ 7.20 ಲಕ್ಷ ಮೌಲ್ಯದ ಚಿನ್ನಾಭರಣ…

ಪೋಲೀಸರನ್ನ ಕಂಡು ಓಡಿದ ಕಳ್ಳ…ಬ್ಯಾಗ್ ನಲ್ಲಿ ಸಿಕ್ಕಿದ್ದು ನಗದು ಸೇರಿ 7.20 ಲಕ್ಷ ಮೌಲ್ಯದ ಚಿನ್ನಾಭರಣ…

ಮೈಸೂರು,ಮಾ26,Tv10 ಕನ್ನಡ

ಗಸ್ತಿನಲ್ಲಿದ್ದ ಪೊಲೀಸರನ್ನ ಕಂಡೊಡನೆ ಸ್ಕೂಟರ್ ಬಿಟ್ಟು ಓಡಿಹೋದ ಕಳ್ಳನ ಬ್ಯಾಗ್ ನಲ್ಲಿ ನಗದು ಸೇರಿ 7.20 ಲಕ್ಷ ಮೌಲ್ಯದ ಚಿನ್ನಾಭರಣ ದೊರೆತಿದೆ.ಮನೆ ಕಳ್ಳತನ ಮಾಡಿ ಮಾಲು ಸಮೇತ ಎಸ್ಕೇಪ್ ಆಗುತ್ತಿದ್ದ ವೇಳೆ ಪೊಲೀಸರು ದರ್ಶನವಾಗಿದ್ದಾರೆ.ಈ ವೇಳೆ ಕಳ್ಳ ತಪ್ಪಿಸಿಕೊಂಡನಾದರೂ ಕಳುವು ಮಾಡಿದ ಪದಾರ್ಥ ಪೊಲೀಸರಿಗೆ ದೊರೆತಿದೆ.

ಇಂದು ಮುಂಜಾನೆ 4.10 ವೇಳೆಯಲ್ಲಿ ಘಟನೆ ನಡೆದಿದೆ.ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹೂಟಗಳ್ಳಿ ಸಿಗ್ನಲ್ ಬಳಿ ನಡೆದಿದೆ.ವಿಜಯನಗರ ಠಾಣೆ ಸಿಬ್ಬಂದಿಯಾದ ಅನಂತ್ ರವರು ರಾತ್ರಿ ಪಾಳಿ ಗಸ್ತಿನಲ್ಲಿದ್ದರು.ಇಂದು ಮುಂಜಾನೆ ಹೂಟಗಳ್ಳಿ ಬಳಿ ಗಸ್ತಿನಲ್ಲಿದ್ದಾಗ ಅಸ್ಪಷ್ಟವಾಗಿ ಕಾಣುತ್ತಿದ್ದ ನಂಬರ್ ಪ್ಲೇಟ್ ಇದ್ದ ಸ್ಕೂಟರ್ ನಲ್ಲಿ ವ್ಯಕ್ತಿಯೊಬ್ಬ ತೆರಳುತ್ತಿದ್ದ.ಈ ವೇಳೆ ಪೊಲೀಸರು ಎದುರಾಗಿ ಅಡ್ಡಗಟ್ಟಿ ನಿಲ್ಲಿಸಿದಾಗ ವ್ಯಕ್ತಿ ಪರಾರಿಯಾದ.ಆಗ ಪೊಲೀಸರೂ ಸಹ ಬೆನ್ನಟ್ಟಿದ್ದಾರೆ.ಆದ್ರೆ ವ್ಯಕ್ತಿ ಕೈಗೆ ಸಿಕ್ಕಿಲ್ಲ.ನಂತರ ವಾಪಸ್ ಸ್ಕೂಟರ್ ಬಳಿ ಬಂದು ಪರಿಶೀಲನೆ ನಡೆಸಿದಾಗ ಬ್ಯಾಗ್ ದೊರೆತಿದೆ.ಹಿರಿಯ ಪೊಲೀಸ್ ಅಧಿಕಾರಿಗಳಿಗೆ ತಿಳಿಸಿ ನಂತರ ಸ್ಕೂಟರ್ ಹಾಗೂ ಬ್ಯಾಗ್ ಠಾಣೆಗೆ ತಂದು ತೆರೆದು ನೋಡಿದಾಗ 50 ಸಾವಿರ ನಗದು ಹಾಗೂ 90 ಗ್ರಾಂ ಚಿನ್ನಾಭರಣ ಕಂಡು ಬಂದಿದೆ.ಇದರ ಒಟ್ಟು ಮೌಲ್ಯ 7.20 ಲಕ್ಷ ಆಗಿದೆ.ಯಾವುದೋ ಸ್ಥಳದಲ್ಲಿ ಮನೆಗಳ್ಳತನ ಮಾಡಿ ಎಸ್ಕೇಪ್ ಆಗುತ್ತಿದ್ದ ವೇಳೆ ಕಳ್ಳ ಪೊಲೀಸರ ಕಣ್ಣಿಗೆ ಬಿದ್ದಿದ್ದಾನೆ.ಸಧ್ಯ ಪ್ರಕರಣ ದಾಖಲಿಸಿಕೊಂಡಿರುವ ವಿಜಯನಗರ ಠಾಣೆ ಪೊಲೀಸರು ಕಳ್ಳನ ಪತ್ತೆಗಾಗಿ ಬಲೆ ಬೀಸಿದ್ದಾರೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *