ಪೋಲೀಸರನ್ನ ಕಂಡು ಓಡಿದ ಕಳ್ಳ…ಬ್ಯಾಗ್ ನಲ್ಲಿ ಸಿಕ್ಕಿದ್ದು ನಗದು ಸೇರಿ 7.20 ಲಕ್ಷ ಮೌಲ್ಯದ ಚಿನ್ನಾಭರಣ…

ಪೋಲೀಸರನ್ನ ಕಂಡು ಓಡಿದ ಕಳ್ಳ…ಬ್ಯಾಗ್ ನಲ್ಲಿ ಸಿಕ್ಕಿದ್ದು ನಗದು ಸೇರಿ 7.20 ಲಕ್ಷ ಮೌಲ್ಯದ ಚಿನ್ನಾಭರಣ…

ಮೈಸೂರು,ಮಾ26,Tv10 ಕನ್ನಡ

ಗಸ್ತಿನಲ್ಲಿದ್ದ ಪೊಲೀಸರನ್ನ ಕಂಡೊಡನೆ ಸ್ಕೂಟರ್ ಬಿಟ್ಟು ಓಡಿಹೋದ ಕಳ್ಳನ ಬ್ಯಾಗ್ ನಲ್ಲಿ ನಗದು ಸೇರಿ 7.20 ಲಕ್ಷ ಮೌಲ್ಯದ ಚಿನ್ನಾಭರಣ ದೊರೆತಿದೆ.ಮನೆ ಕಳ್ಳತನ ಮಾಡಿ ಮಾಲು ಸಮೇತ ಎಸ್ಕೇಪ್ ಆಗುತ್ತಿದ್ದ ವೇಳೆ ಪೊಲೀಸರು ದರ್ಶನವಾಗಿದ್ದಾರೆ.ಈ ವೇಳೆ ಕಳ್ಳ ತಪ್ಪಿಸಿಕೊಂಡನಾದರೂ ಕಳುವು ಮಾಡಿದ ಪದಾರ್ಥ ಪೊಲೀಸರಿಗೆ ದೊರೆತಿದೆ.

ಇಂದು ಮುಂಜಾನೆ 4.10 ವೇಳೆಯಲ್ಲಿ ಘಟನೆ ನಡೆದಿದೆ.ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹೂಟಗಳ್ಳಿ ಸಿಗ್ನಲ್ ಬಳಿ ನಡೆದಿದೆ.ವಿಜಯನಗರ ಠಾಣೆ ಸಿಬ್ಬಂದಿಯಾದ ಅನಂತ್ ರವರು ರಾತ್ರಿ ಪಾಳಿ ಗಸ್ತಿನಲ್ಲಿದ್ದರು.ಇಂದು ಮುಂಜಾನೆ ಹೂಟಗಳ್ಳಿ ಬಳಿ ಗಸ್ತಿನಲ್ಲಿದ್ದಾಗ ಅಸ್ಪಷ್ಟವಾಗಿ ಕಾಣುತ್ತಿದ್ದ ನಂಬರ್ ಪ್ಲೇಟ್ ಇದ್ದ ಸ್ಕೂಟರ್ ನಲ್ಲಿ ವ್ಯಕ್ತಿಯೊಬ್ಬ ತೆರಳುತ್ತಿದ್ದ.ಈ ವೇಳೆ ಪೊಲೀಸರು ಎದುರಾಗಿ ಅಡ್ಡಗಟ್ಟಿ ನಿಲ್ಲಿಸಿದಾಗ ವ್ಯಕ್ತಿ ಪರಾರಿಯಾದ.ಆಗ ಪೊಲೀಸರೂ ಸಹ ಬೆನ್ನಟ್ಟಿದ್ದಾರೆ.ಆದ್ರೆ ವ್ಯಕ್ತಿ ಕೈಗೆ ಸಿಕ್ಕಿಲ್ಲ.ನಂತರ ವಾಪಸ್ ಸ್ಕೂಟರ್ ಬಳಿ ಬಂದು ಪರಿಶೀಲನೆ ನಡೆಸಿದಾಗ ಬ್ಯಾಗ್ ದೊರೆತಿದೆ.ಹಿರಿಯ ಪೊಲೀಸ್ ಅಧಿಕಾರಿಗಳಿಗೆ ತಿಳಿಸಿ ನಂತರ ಸ್ಕೂಟರ್ ಹಾಗೂ ಬ್ಯಾಗ್ ಠಾಣೆಗೆ ತಂದು ತೆರೆದು ನೋಡಿದಾಗ 50 ಸಾವಿರ ನಗದು ಹಾಗೂ 90 ಗ್ರಾಂ ಚಿನ್ನಾಭರಣ ಕಂಡು ಬಂದಿದೆ.ಇದರ ಒಟ್ಟು ಮೌಲ್ಯ 7.20 ಲಕ್ಷ ಆಗಿದೆ.ಯಾವುದೋ ಸ್ಥಳದಲ್ಲಿ ಮನೆಗಳ್ಳತನ ಮಾಡಿ ಎಸ್ಕೇಪ್ ಆಗುತ್ತಿದ್ದ ವೇಳೆ ಕಳ್ಳ ಪೊಲೀಸರ ಕಣ್ಣಿಗೆ ಬಿದ್ದಿದ್ದಾನೆ.ಸಧ್ಯ ಪ್ರಕರಣ ದಾಖಲಿಸಿಕೊಂಡಿರುವ ವಿಜಯನಗರ ಠಾಣೆ ಪೊಲೀಸರು ಕಳ್ಳನ ಪತ್ತೆಗಾಗಿ ಬಲೆ ಬೀಸಿದ್ದಾರೆ…

Spread the love

Related post

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…
ಮೈಸೂರು ಪೊಲೀಸ್ ಅಲರ್ಟ್…ರೌಡಿ ಪ್ರತಿಬಂಧಕ ದಳದಿಂದ ವಿಶೇಷ ಕಾರ್ಯಾಚರಣೆ…ಕಾನೂನು ಬಾಹಿರ ಚಟುವಟಿಕೆಗೆ ಬ್ರೇಕ್…400 ಕ್ಕೂ ಹೆಚ್ಚು ಪ್ರಕರಣ ದಾಖಲು…

ಮೈಸೂರು ಪೊಲೀಸ್ ಅಲರ್ಟ್…ರೌಡಿ ಪ್ರತಿಬಂಧಕ ದಳದಿಂದ ವಿಶೇಷ ಕಾರ್ಯಾಚರಣೆ…ಕಾನೂನು ಬಾಹಿರ ಚಟುವಟಿಕೆಗೆ…

ಮೈಸೂರು,ಅ12,Tv10 ಕನ್ನಡ ಇತ್ತೀಚೆಗೆ ನಡೆದ ಭೀಕರ ಕೊಲೆ ರೇಪ್ ಅಂಡ್ ಮರ್ಡರ್ ಮೈಸೂರು ಪೊಲೀಸರ ಕಾರ್ಯಚಟುವಟಿಕೆಯನ್ನ ಪ್ರಶ್ನಿಸುವಂತೆ ಮಾಡಿದೆ.ಕಾನೂನು ಬಾಹಿರ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಪೊಲೀಸ್ ಪಡೆ ಸನ್ನದ್ದಾಗಿ…

Leave a Reply

Your email address will not be published. Required fields are marked *