ಪೋಲೀಸರನ್ನ ಕಂಡು ಓಡಿದ ಕಳ್ಳ…ಬ್ಯಾಗ್ ನಲ್ಲಿ ಸಿಕ್ಕಿದ್ದು ನಗದು ಸೇರಿ 7.20 ಲಕ್ಷ ಮೌಲ್ಯದ ಚಿನ್ನಾಭರಣ…

ಪೋಲೀಸರನ್ನ ಕಂಡು ಓಡಿದ ಕಳ್ಳ…ಬ್ಯಾಗ್ ನಲ್ಲಿ ಸಿಕ್ಕಿದ್ದು ನಗದು ಸೇರಿ 7.20 ಲಕ್ಷ ಮೌಲ್ಯದ ಚಿನ್ನಾಭರಣ…

ಮೈಸೂರು,ಮಾ26,Tv10 ಕನ್ನಡ

ಗಸ್ತಿನಲ್ಲಿದ್ದ ಪೊಲೀಸರನ್ನ ಕಂಡೊಡನೆ ಸ್ಕೂಟರ್ ಬಿಟ್ಟು ಓಡಿಹೋದ ಕಳ್ಳನ ಬ್ಯಾಗ್ ನಲ್ಲಿ ನಗದು ಸೇರಿ 7.20 ಲಕ್ಷ ಮೌಲ್ಯದ ಚಿನ್ನಾಭರಣ ದೊರೆತಿದೆ.ಮನೆ ಕಳ್ಳತನ ಮಾಡಿ ಮಾಲು ಸಮೇತ ಎಸ್ಕೇಪ್ ಆಗುತ್ತಿದ್ದ ವೇಳೆ ಪೊಲೀಸರು ದರ್ಶನವಾಗಿದ್ದಾರೆ.ಈ ವೇಳೆ ಕಳ್ಳ ತಪ್ಪಿಸಿಕೊಂಡನಾದರೂ ಕಳುವು ಮಾಡಿದ ಪದಾರ್ಥ ಪೊಲೀಸರಿಗೆ ದೊರೆತಿದೆ.

ಇಂದು ಮುಂಜಾನೆ 4.10 ವೇಳೆಯಲ್ಲಿ ಘಟನೆ ನಡೆದಿದೆ.ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹೂಟಗಳ್ಳಿ ಸಿಗ್ನಲ್ ಬಳಿ ನಡೆದಿದೆ.ವಿಜಯನಗರ ಠಾಣೆ ಸಿಬ್ಬಂದಿಯಾದ ಅನಂತ್ ರವರು ರಾತ್ರಿ ಪಾಳಿ ಗಸ್ತಿನಲ್ಲಿದ್ದರು.ಇಂದು ಮುಂಜಾನೆ ಹೂಟಗಳ್ಳಿ ಬಳಿ ಗಸ್ತಿನಲ್ಲಿದ್ದಾಗ ಅಸ್ಪಷ್ಟವಾಗಿ ಕಾಣುತ್ತಿದ್ದ ನಂಬರ್ ಪ್ಲೇಟ್ ಇದ್ದ ಸ್ಕೂಟರ್ ನಲ್ಲಿ ವ್ಯಕ್ತಿಯೊಬ್ಬ ತೆರಳುತ್ತಿದ್ದ.ಈ ವೇಳೆ ಪೊಲೀಸರು ಎದುರಾಗಿ ಅಡ್ಡಗಟ್ಟಿ ನಿಲ್ಲಿಸಿದಾಗ ವ್ಯಕ್ತಿ ಪರಾರಿಯಾದ.ಆಗ ಪೊಲೀಸರೂ ಸಹ ಬೆನ್ನಟ್ಟಿದ್ದಾರೆ.ಆದ್ರೆ ವ್ಯಕ್ತಿ ಕೈಗೆ ಸಿಕ್ಕಿಲ್ಲ.ನಂತರ ವಾಪಸ್ ಸ್ಕೂಟರ್ ಬಳಿ ಬಂದು ಪರಿಶೀಲನೆ ನಡೆಸಿದಾಗ ಬ್ಯಾಗ್ ದೊರೆತಿದೆ.ಹಿರಿಯ ಪೊಲೀಸ್ ಅಧಿಕಾರಿಗಳಿಗೆ ತಿಳಿಸಿ ನಂತರ ಸ್ಕೂಟರ್ ಹಾಗೂ ಬ್ಯಾಗ್ ಠಾಣೆಗೆ ತಂದು ತೆರೆದು ನೋಡಿದಾಗ 50 ಸಾವಿರ ನಗದು ಹಾಗೂ 90 ಗ್ರಾಂ ಚಿನ್ನಾಭರಣ ಕಂಡು ಬಂದಿದೆ.ಇದರ ಒಟ್ಟು ಮೌಲ್ಯ 7.20 ಲಕ್ಷ ಆಗಿದೆ.ಯಾವುದೋ ಸ್ಥಳದಲ್ಲಿ ಮನೆಗಳ್ಳತನ ಮಾಡಿ ಎಸ್ಕೇಪ್ ಆಗುತ್ತಿದ್ದ ವೇಳೆ ಕಳ್ಳ ಪೊಲೀಸರ ಕಣ್ಣಿಗೆ ಬಿದ್ದಿದ್ದಾನೆ.ಸಧ್ಯ ಪ್ರಕರಣ ದಾಖಲಿಸಿಕೊಂಡಿರುವ ವಿಜಯನಗರ ಠಾಣೆ ಪೊಲೀಸರು ಕಳ್ಳನ ಪತ್ತೆಗಾಗಿ ಬಲೆ ಬೀಸಿದ್ದಾರೆ…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *