ಗ್ರಾಮದಹಬ್ಬ ಮುಗಿಸಿ ಬಂದ ರಿಯಲ್ ಎಸ್ಟೇಟ್ ಉದ್ಯಮಿಗೆ ಶಾಕ್…ಚಿನ್ನಾಭರಣ ಸೇರಿದಂತೆ 41.67 ಲಕ್ಷ ನಗದು ಕಳುವು…

ಗ್ರಾಮದಹಬ್ಬ ಮುಗಿಸಿ ಬಂದ ರಿಯಲ್ ಎಸ್ಟೇಟ್ ಉದ್ಯಮಿಗೆ ಶಾಕ್…ಚಿನ್ನಾಭರಣ ಸೇರಿದಂತೆ 41.67 ಲಕ್ಷ ನಗದು ಕಳುವು…

ಮೈಸೂರು,ಮಾ28,Tv10 ಕನ್ನಡ

ಗ್ರಾಮದ ಹಬ್ಬ ಮುಗಿಸಿ ಹಿಂದಿರುಗಿದ ರಿಯಲ್ ಎಸ್ಟೇಟ್ ಉದ್ಯಮಿಗೆ ಕಳ್ಳರು ಶಾಕ್ ಕೊಟ್ಟಿದ್ದಾರೆ.ಮನೆಯಲ್ಲಿದ್ದ 34.67 ಲಕ್ಷ ಕ್ಯಾಶ್ 7 ಲಕ್ಷ ಮೌಲ್ಯದ 89 ಗ್ರಾಂ ಚಿನ್ನಾಭರಣ ಕಳ್ಳರ ಪಾಲಾಗಿದೆ.ಈ ಸಂಭಂಧ ರಿಯಲ್ ಎಸ್ಟೇಟ್ ಉದ್ಯಮಿ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ವಜ್ರೇಶ್ವರಿ ಡೆವಲಪರ್ಸ್ ಹೆಸರಿನಲ್ಲಿ ನಡೆಸುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿಯ ಸಹೋದರ ಶ್ರೀ ಬಸವರಾಜು ಎಂಬುವರ ಮನೆಯಲ್ಲಿ ಕಳ್ಳತನ ಆಗಿದೆ.ವಿಜಯನಗರ 3 ನೇ ಹಂತದಲ್ಲಿರುವ ಮನೆಯಲ್ಲಿ ಕಳ್ಳತನವಾಗಿದೆ.ಸಹೋದರ ದೀಪಕ್ ನಡೆಸುತ್ತಿದ್ದ ರಿಯಲ್ ಎಸ್ಟೇಟ್ ವ್ಯವಹಾರವನ್ನ ಶ್ರೀಬಸವರಾಜು ರವರು ನೋಡಿಕೊಳ್ಳುತ್ತಿದ್ದರು.ಕಳೆದ ಮೂರು ತಿಂಗಳಲ್ಲಿ ವ್ಯವಹಾರದಿಂದ ಬಂದ ಹಣವನ್ನ ದೀಪಕ್ ರವರು ಸೇಫ್ ಆಗಿರಲೆಂದು ಸಹೋದರ ಶ್ರೀ ಬಸವರಾಜು ರವರ ಮನೆಯಲ್ಲಿ ಇರಿಸಿದ್ದರು.

ಚಾಮರಾಜನಗರ ಶಿವನಸಮುದ್ರದಲ್ಲಿ ಗ್ರಾಮದ ಹಬ್ಬ ಇದ್ದ ಕಾರಣ ಶ್ರೀಬಸವರಾಜು ಸಹೋದರಿಯನ್ನ ಮನೆಯಲ್ಲಿ ಇರಿಸಿ ತೆರಳಿದ್ದರು.ಹಬ್ಬಕ್ಕೆ ಸಹೋದರಿ ಸಹ ತೆರಳಿದ್ದರು.ಹಬ್ಬ ಮುಗಿಸಿ ಮಾ27 ರಂದು ಹಿಂದಿರುಗಿದ ಶ್ರೀ ಬಸವರಾಜ್ ಗೆ ಶಾಕ್ ಆಗಿದೆ.ಮನೆ ಬಾಗಿಲು ಕಿಟಕಿ ತೆರದ ಸ್ಥಿತಿಯಲ್ಲಿದೆ.ಒಳಗೆ ಪ್ರವೇಶಿಸಿ ಪರಿಶೀಲಿಸಿದಾಗ ಕ್ಯಾಶ್ 34.67 ಲಕ್ಷ ಹಾಗೂ 7 ಲಕ್ಷ ಮೌಲ್ಯದ 89 ಗ್ರಾಂ ಚಿನ್ನಾಭರಣ ನಾಪತ್ತೆಯಾಗಿದೆ.ಈ ಸಂಭಂಧ ವಿಜಯನಗರ ಠಾಣೆಯಲ್ಲಿ ಶ್ರೀ ಬಸವರಾಜು ಪ್ರಕರಣ ದಾಖಲಿಸಿ ಕಳ್ಳರ ಪತ್ತೆಗೆ ಮನವಿ ಮಾಡಿದ್ದಾರೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *