ಹಾಲು ಮೊಸರು ತಲೆ ಮೇಲೆ ಹೊತ್ತು ಪ್ರತಿಭಟನೆ…ಬೆಲೆ ಏರಿಕೆ ವಿರುದ್ದ ಆಕ್ರೋಷ…

ಹಾಲು ಮೊಸರು ತಲೆ ಮೇಲೆ ಹೊತ್ತು ಪ್ರತಿಭಟನೆ…ಬೆಲೆ ಏರಿಕೆ ವಿರುದ್ದ ಆಕ್ರೋಷ…

ಮೈಸೂರು,ಮಾ28,Tv10 ಕನ್ನಡ

ಹಾಲು ಹಾಗೂ ಮೊಸರು ಬೆಲೆ ಏರಿಕೆ ಮಾಡಿದ ಸರ್ಕಾರದ ನಿಲುವನ್ನ ಖಂಡಿಸಿ ಕರ್ನಾಟಕ ಹಿತರಕ್ಷಣಾ ವೇದಿಕೆಯ ಕಾರ್ಯಕರ್ತರು ಇಂದು ವಿನೂತನ ಪ್ರತಿಭಟನೆ ನಡೆಸಿದರು.ಹಾಲು ಮೊಸರನ್ನು ತಲೆ ಮೇಲೆ
ಹೊತ್ತು ಸರ್ಕಾರದ ವಿರುದ್ದ ಆಕ್ರೋಷ ವ್ಯಕ್ತಪಡಿಸಿದರು.
ಡಿ ದೇವರಾಜ ಅರಸು ರಸ್ತೆಯಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಹಾಲು ಮತ್ತು ಮೊಸರು ದರವನ್ನು
ಮೂರು ಬಾರಿ ಹೆಚ್ಚಳ
ಮಾಡಲಾಗಿದೆ.ಇದರಿಂದ
ಸಾರ್ವಜನಿಕರಿಗೆ ಹೊರೆ ಆಗುತ್ತಿದೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಈ ಸಂದರ್ಭದಲ್ಲಿ ಮಾತನಾಡಿದ ವೇದಿಕೆ ಅಧ್ಯಕ್ಷ ವಿನಯ್ ಕುಮಾರ್
ರಾಜ್ಯ ಸರ್ಕಾರ ರೈತರ ಹೆಸರಿನಲ್ಲಿ ವರ್ಷದಲ್ಲಿ ಮೂರು ಬಾರಿ ಹಾಲಿನ ದರ ಹೆಚ್ಚಳ ಮಾಡಿ ಗ್ರಾಹಕರ ಮೇಲೆ ಬರೆ ಎಳೆಯುತ್ತಿದೆ.
ರಾಜ್ಯ ಸರ್ಕಾರ ದಿವಾಳಿಯಾಗಿದೆ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಇಂದು ಹಾಲಿನ ದರ ಹೆಚ್ಚಳ ಮಾಡಿದ್ದಾರೆ. ಒಂದು ವರ್ಷದಲ್ಲಿ ಎರಡು ಬಾರಿ ವಿದ್ಯುತ್ ಹೆಚ್ಚಳ ಮಾಡಿದ್ದಾರೆ. ದಿನೇ ದಿನೇ ವಸ್ತುಗಳ ಬೆಲೆ ಮುಗಿಲು ಮುಟ್ಟುತ್ತಿದೆ.ಏಕಾಏಕಿ ಬೆಲೆ ಏರಿಸುತ್ತಿರುವುದು ಸರಿಯಲ್ಲ.
ಬಡವರು ಹಾಗೂ ಮಧ್ಯಮ ವರ್ಗದವರಿಗೆ ಬಹಳ ತೊಂದರೆಯಾಗುತ್ತಿದ್ದು ಸರ್ಕಾರ ಈ ಕೂಡಲೇ ಇದರ ಬಗ್ಗೆ ಗಮನ ಹರಿಸಿ ಏರಿಕೆಯನ್ನು ಕೈಬಿಡಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಮಂಜುನಾಥ್ , ಎಸ್ ಎನ್ ರಾಜೇಶ್, ರವಿ, ಪ್ರಮೋದ್, ನಿತಿನ್, ಯತೀಶ್ ,ಬಾಬು, ಕಣ್ಣನ್ ,ಚಂದ್ರು, ಸಂತೋಷ್ ,ರವಿ, ಉಮೇಶ್ , ಈಶ್ವರ, ಬೆಳಕು ಮಂಜು ಹಾಗೂ ಇನ್ನಿತರರು ಭಾಗಿಯಾಗಿದ್ದರು…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *