ಆಟೋ ಮಾರಾಟ ವಿಚಾರದಲ್ಲಿ ಕಿರಿಕ್…ಜಗಳ ಬಿಡಿಸಲು ಬಂದ ವ್ಯಕ್ತಿಗೆ ಡ್ರಾಗರ್ ನಿಂದ ಇರಿತ…ಯುಗಾದಿ ಹಬ್ಬದ ದಿನ ಘಟನೆ…

ಆಟೋ ಮಾರಾಟ ವಿಚಾರದಲ್ಲಿ ಕಿರಿಕ್…ಜಗಳ ಬಿಡಿಸಲು ಬಂದ ವ್ಯಕ್ತಿಗೆ ಡ್ರಾಗರ್ ನಿಂದ ಇರಿತ…ಯುಗಾದಿ ಹಬ್ಬದ ದಿನ ಘಟನೆ…

ಮೈಸೂರು,ಏ1,Tv10 ಕನ್ನಡ

ಹಣಕಾಸಿನ ವಿಚಾರದಲ್ಲಿ ಇಬ್ಬರ ನಡುವೆ ನಡೆಯುತ್ತಿದ್ದ ಗಲಾಟೆ ಬಿಡಿಸಲು ಹೋದ ವ್ಯಕ್ತಿ ಮೇಲೆ ಡ್ರಾಗರ್ ನಿಂದ ಇರಿದ ಘಟನೆ ಸರಸ್ವತಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಉಮೇಶ್ ಎಂಬುವರು ಡ್ರಾಗರ್ ನಿಂದ ಇರಿತಕ್ಕೆ ಒಳಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಘಟನೆಗೆ ಸಂಭಂಧಿಸಿದಂತೆ ಅರ್ಜುನ್ ಎಂಬಾತನನ್ನ ಪೊಲೀಸರು ಬಂಧಿಸಿದ್ದಾರೆ.ಇನ್ನೂ ಇಬ್ಬರು ಆರೋಪಿಗಳ ಸೆರೆಗೆ ಜಾಲ ಬೀಸಿದ್ದಾರೆ.

ಯುಗಾದಿ ಹಬ್ಬದ ದಿನದಂದು ಸರಸ್ವತಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸ್ವಾಗತ್ ಬಾರ್ ಬಳಿ ಜೂಜಾಟ ಆರಂಭಿಸಲು ಸಿದ್ದತೆ ಆಗಿತ್ತು.ಈ ವೇಳೆ ಎರಡು ಯುವಕರ ನಡುವೆ ಆಟೋ ಮಾರಾಟದಿಂದ ಬಂದ ಹಣದ ಬಗ್ಗೆ ಕಿರೀಕ್ ಶುರುವಾಗಿ ಜಗಳ ನಡೆಯುತ್ತಿತ್ತು.ಈ ವೇಳೆ ಅಲ್ಲಿಗೆ ಬಂದ ಉಮೇಶ್ ಜಗಳ ಬಿಡಿಸಲು ಉತ್ನಿಸಿದಾಗ ಯುವಕರು ಡ್ರಾಗರ್ ನಿಂದ ಉಮೇಶ್ ಕುತ್ತಿಗೆಗೆ ಇರಿದಿದ್ದಾರೆ.ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಉಮೇಶ್ ರನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನೆಗೆ ಸಂಭಂಧಿಸಿದಂತೆ ರವಿ,ಗರೀಶ್ ಸೇರಿದಂತೆ ಇತರರ ಮೇಲೆ ಪ್ರಕರಣ ದಾಖಲಾಗಿತ್ತು.ಇದೀಗ ಪೊಲೀಸರು ಅರ್ಜುನ್ ಎಂಬಾತನನ್ನ ಬಂಧಿಸಿದ್ದಾರೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *