ಉದಯಗಿರಿ ಠಾಣೆ ಮೇಲೆ ಕಲ್ಲು ಬೀಸಿದಂತೆ ಎನ್.ಆರ್.ಠಾಣೆಗೂ ಕಲ್ಲು ಹೊಡೀತೀವಿ…ದುರ್ಗಾದೇವಿ ಮೆರವಣಿಗೆಯಲ್ಲಿ ಪುಂಡರ ಆವಾಜ್…ಗಲಾಟೆ ಬಿಡಿಸಲು ಬಂದ ಮುಖ್ಯಪೇದೆ ಮೇಲೆ ಹಲ್ಲೆ…12 ಮಂದಿ ವಿರುದ್ದ FIR…

ಉದಯಗಿರಿ ಠಾಣೆ ಮೇಲೆ ಕಲ್ಲು ಬೀಸಿದಂತೆ ಎನ್.ಆರ್.ಠಾಣೆಗೂ ಕಲ್ಲು ಹೊಡೀತೀವಿ…ದುರ್ಗಾದೇವಿ ಮೆರವಣಿಗೆಯಲ್ಲಿ ಪುಂಡರ ಆವಾಜ್…ಗಲಾಟೆ ಬಿಡಿಸಲು ಬಂದ ಮುಖ್ಯಪೇದೆ ಮೇಲೆ ಹಲ್ಲೆ…12 ಮಂದಿ ವಿರುದ್ದ FIR…

ಮೈಸೂರು,ಏ3,Tv10 ಕನ್ನಡ

ದುರ್ಗಾದೇವಿ ಮೆರವಣಿಗೆ ವೇಳೆ ಎರಡು ಯುವಕರ ಗುಂಪುಗಳ ನಡುವೆ ನಡೆಯುತ್ತಿದ್ದ ಗಲಾಟೆಯನ್ನ ಬಿಡಿಸಲು ಬಂದ ಮುಖ್ಯಪೇದೆ ಮೇಲೆ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಠಾಣೆಯ ಮೇಲೆ ಕಲ್ಲು ಹೊಡೆಯುವುದಾಗಿ ಧಂಕಿ ಹಾಕಿದ ಘಟನೆ ಎನ್.ಆರ್.ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದಲ್ಲಿ ನಡೆದಿದೆ.ಘಟನೆ ಸಂಭಂಧ ಎನ್.ಆರ್.ಪೊಲೀಸ್ ಠಾಣೆಯಲ್ಲಿ 12 ಮಂದಿ ವಿರುದ್ದ ಪ್ರಕರಣ ದಾಖಲಾಗಿದೆ.ಹಲ್ಲೆಗೊಳಗಾದ ಠಾಣೆಯ ಮುಖ್ಯಪೇದೆ ಮೋಹನ್ ರವರು ಪ್ರಕರಣ ದಾಖಲಿಸಿದ್ದಾರೆ.

ಯುಗಾದಿ ಹಬ್ಬದ ದಿನದಂದು ಗಾಂಧಿನಗರದ ಶ್ರೀ ದುರ್ಗಾದೇವಿ ದೇವಸ್ಥಾನದ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು.ಮೆರವಣಿಗೆ ಜೊತೆ ಸಾಗಲು ಎನ್.ಆರ್.ಠಾಣೆ ಪೊಲೀಸರನ್ನ ನಿಯೋಜಿಸಲಾಗಿತ್ತು.ಈ ಪೈಕಿ ಮುಖ್ಯಪೇದೆ ಮೋಹನ್ ಸಹ ಒಬ್ಬರು.ಮಧ್ಯರಾತ್ರಿ ವೇಳೆ ಗಾಂಧಿನಗರದ ಶಿವಯೋಗಿ 3 ನೇ ಮುಖ್ಯರಸ್ತೆ ಬಳಿ ಬರುವಾಗ ಎರಡು ಗುಂಪಿನ ಯುವಕರು ಪರಸ್ಪರ ಗಲಾಟೆ ಮಾಡಿಕೊಳ್ಳುತ್ತಿದ್ದರು.ಈ ವೇಳೆ ಮೋಹನ್ ರವರು ಜಗಳ ಬಿಡಿಸಲು ಬಂದಾಗ ಯುವಕರು ಗುಂಪು ತಿರುಗಿ ಬಿದ್ದಿದೆ.ಅವಾಚ್ಯಶಬ್ದಗಳಿಂದ ನಿಂದಿಸಿ ಸಮವಸ್ತ್ರವನ್ನ ಹಿಡಿದು ಎಳೆದಾಡಿ ಹಲ್ಲೆ ನಡೆಸಿದ್ದಲ್ಲದೆ. ಉದಯಗಿರಿ ಠಾಣೆ ಮೇಲೆ ಕಲ್ಲು ಎಸೆದಂತೆ ಎನ್.ಆರ್.ಠಾಣೆ ಮೇಲೂ ಕಲ್ಲು ಹೊಡೆಯುತ್ತೇವೆ ಎಂದು ವಾರ್ನಿಂಗ್ ನೀಡಿ ಧಂಕಿ ಹಾಕಿದ್ದಾರೆ.ಯುವಕರ ಗಪಿನ ನಡುವೆ ಸಿಲುಕಿ ಹಲ್ಲೆಗೆ ಒಳಗಾದ ಮೋಹನ್ ಸಹದ್ಯೋಗಿಗಳು ಹಾಗೂ ಕೆಲವು ಸ್ಥಳೀಯರ ನೆರವಿನಿಂದ ರಕ್ಷಿಸಲ್ಪಟ್ಟಿದ್ದಾರೆ.

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ನಡೆಸಿ ಠಾಣೆ ಮೇಲೆ ಕಲ್ಲು ಹೊಡೆಯುವುದಾಗಿ ವಾರ್ನಿಂಗ್ ಕೊಟ್ಟ ಮಾದೇಶ್,ಗಿರೀಶ್.ಆ.ಬ್ಲೇಡ್,ರವಿಕುಮಾರ್,ಕಿರಣ್.ಆ.ಬಾತು,ರಾಘವೇಂದ್ರ,ದಾದಾ,ಕೀರ್ತಿ,ನಾಗೇಂದ್ರ ಸೇರಿದಂತೆ 12 ಮಂದಿ ವಿರುದ್ದ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *