ಉದಯಗಿರಿ ಠಾಣೆ ಮೇಲೆ ಕಲ್ಲು ಬೀಸಿದಂತೆ ಎನ್.ಆರ್.ಠಾಣೆಗೂ ಕಲ್ಲು ಹೊಡೀತೀವಿ…ದುರ್ಗಾದೇವಿ ಮೆರವಣಿಗೆಯಲ್ಲಿ ಪುಂಡರ ಆವಾಜ್…ಗಲಾಟೆ ಬಿಡಿಸಲು ಬಂದ ಮುಖ್ಯಪೇದೆ ಮೇಲೆ ಹಲ್ಲೆ…12 ಮಂದಿ ವಿರುದ್ದ FIR…

ಉದಯಗಿರಿ ಠಾಣೆ ಮೇಲೆ ಕಲ್ಲು ಬೀಸಿದಂತೆ ಎನ್.ಆರ್.ಠಾಣೆಗೂ ಕಲ್ಲು ಹೊಡೀತೀವಿ…ದುರ್ಗಾದೇವಿ ಮೆರವಣಿಗೆಯಲ್ಲಿ ಪುಂಡರ ಆವಾಜ್…ಗಲಾಟೆ ಬಿಡಿಸಲು ಬಂದ ಮುಖ್ಯಪೇದೆ ಮೇಲೆ ಹಲ್ಲೆ…12 ಮಂದಿ ವಿರುದ್ದ FIR…

ಮೈಸೂರು,ಏ3,Tv10 ಕನ್ನಡ

ದುರ್ಗಾದೇವಿ ಮೆರವಣಿಗೆ ವೇಳೆ ಎರಡು ಯುವಕರ ಗುಂಪುಗಳ ನಡುವೆ ನಡೆಯುತ್ತಿದ್ದ ಗಲಾಟೆಯನ್ನ ಬಿಡಿಸಲು ಬಂದ ಮುಖ್ಯಪೇದೆ ಮೇಲೆ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಠಾಣೆಯ ಮೇಲೆ ಕಲ್ಲು ಹೊಡೆಯುವುದಾಗಿ ಧಂಕಿ ಹಾಕಿದ ಘಟನೆ ಎನ್.ಆರ್.ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದಲ್ಲಿ ನಡೆದಿದೆ.ಘಟನೆ ಸಂಭಂಧ ಎನ್.ಆರ್.ಪೊಲೀಸ್ ಠಾಣೆಯಲ್ಲಿ 12 ಮಂದಿ ವಿರುದ್ದ ಪ್ರಕರಣ ದಾಖಲಾಗಿದೆ.ಹಲ್ಲೆಗೊಳಗಾದ ಠಾಣೆಯ ಮುಖ್ಯಪೇದೆ ಮೋಹನ್ ರವರು ಪ್ರಕರಣ ದಾಖಲಿಸಿದ್ದಾರೆ.

ಯುಗಾದಿ ಹಬ್ಬದ ದಿನದಂದು ಗಾಂಧಿನಗರದ ಶ್ರೀ ದುರ್ಗಾದೇವಿ ದೇವಸ್ಥಾನದ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು.ಮೆರವಣಿಗೆ ಜೊತೆ ಸಾಗಲು ಎನ್.ಆರ್.ಠಾಣೆ ಪೊಲೀಸರನ್ನ ನಿಯೋಜಿಸಲಾಗಿತ್ತು.ಈ ಪೈಕಿ ಮುಖ್ಯಪೇದೆ ಮೋಹನ್ ಸಹ ಒಬ್ಬರು.ಮಧ್ಯರಾತ್ರಿ ವೇಳೆ ಗಾಂಧಿನಗರದ ಶಿವಯೋಗಿ 3 ನೇ ಮುಖ್ಯರಸ್ತೆ ಬಳಿ ಬರುವಾಗ ಎರಡು ಗುಂಪಿನ ಯುವಕರು ಪರಸ್ಪರ ಗಲಾಟೆ ಮಾಡಿಕೊಳ್ಳುತ್ತಿದ್ದರು.ಈ ವೇಳೆ ಮೋಹನ್ ರವರು ಜಗಳ ಬಿಡಿಸಲು ಬಂದಾಗ ಯುವಕರು ಗುಂಪು ತಿರುಗಿ ಬಿದ್ದಿದೆ.ಅವಾಚ್ಯಶಬ್ದಗಳಿಂದ ನಿಂದಿಸಿ ಸಮವಸ್ತ್ರವನ್ನ ಹಿಡಿದು ಎಳೆದಾಡಿ ಹಲ್ಲೆ ನಡೆಸಿದ್ದಲ್ಲದೆ. ಉದಯಗಿರಿ ಠಾಣೆ ಮೇಲೆ ಕಲ್ಲು ಎಸೆದಂತೆ ಎನ್.ಆರ್.ಠಾಣೆ ಮೇಲೂ ಕಲ್ಲು ಹೊಡೆಯುತ್ತೇವೆ ಎಂದು ವಾರ್ನಿಂಗ್ ನೀಡಿ ಧಂಕಿ ಹಾಕಿದ್ದಾರೆ.ಯುವಕರ ಗಪಿನ ನಡುವೆ ಸಿಲುಕಿ ಹಲ್ಲೆಗೆ ಒಳಗಾದ ಮೋಹನ್ ಸಹದ್ಯೋಗಿಗಳು ಹಾಗೂ ಕೆಲವು ಸ್ಥಳೀಯರ ನೆರವಿನಿಂದ ರಕ್ಷಿಸಲ್ಪಟ್ಟಿದ್ದಾರೆ.

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ನಡೆಸಿ ಠಾಣೆ ಮೇಲೆ ಕಲ್ಲು ಹೊಡೆಯುವುದಾಗಿ ವಾರ್ನಿಂಗ್ ಕೊಟ್ಟ ಮಾದೇಶ್,ಗಿರೀಶ್.ಆ.ಬ್ಲೇಡ್,ರವಿಕುಮಾರ್,ಕಿರಣ್.ಆ.ಬಾತು,ರಾಘವೇಂದ್ರ,ದಾದಾ,ಕೀರ್ತಿ,ನಾಗೇಂದ್ರ ಸೇರಿದಂತೆ 12 ಮಂದಿ ವಿರುದ್ದ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಆರ್.ಟಿ.ಐ.ಮಾಹಿತಿ ಪತ್ರಿಕೆ ಅಸ್ತಿತ್ವಕ್ಕೆ…ಭಾಷ್ಯಂ ಸ್ವಾಮೀಜಿ ರವರಿಂದ ಬಿಡುಗಡೆ…

ಆರ್.ಟಿ.ಐ.ಮಾಹಿತಿ ಪತ್ರಿಕೆ ಅಸ್ತಿತ್ವಕ್ಕೆ…ಭಾಷ್ಯಂ ಸ್ವಾಮೀಜಿ ರವರಿಂದ ಬಿಡುಗಡೆ…

ಮೈಸೂರು,ಜು7,Tv10 ಕನ್ನಡ ಮೈಸೂರಿನ ಯೋಗನರಸಿಂಹ ಸ್ವಾಮಿ ದೇವಾಲಯದಲ್ಲಿ ಇಂದು ಆರ್.ಟಿ.ಐ.ಮಾಹಿತಿ ಪತ್ರಿಕೆ ಬಿಡುಗಡೆ ಮಾಡಲಾಯಿತು.ದೇವಾಲಯದ ಸಂಸ್ಥಾಪಕರಾದ ಪ್ರೊ.ಭಾಷ್ಯಂ ಸ್ವಾಮೀಜಿ ರವರು ಬಿಡುಗಡೆ ಮಾಡಿದರು.ಈ ವೇಳೆ ದೇವಸ್ಥಾನದ ಆಡಳಿತಾಧಿಕಾರಿ ಶ್ರೀನಿವಾಸ್…
ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ ಮಹಿಳೆ ಮೇಲೆ FIR…

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ…

ಮೈಸೂರು,ಜು6,Tv10 ಕನ್ನಡ ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ರಾಪಿನ್ ಕಂಪನಿಗೆ ಸೇರಿದ…
ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…

Leave a Reply

Your email address will not be published. Required fields are marked *