ಉದಯಗಿರಿ ಠಾಣೆ ಮೇಲೆ ಕಲ್ಲು ಬೀಸಿದಂತೆ ಎನ್.ಆರ್.ಠಾಣೆಗೂ ಕಲ್ಲು ಹೊಡೀತೀವಿ…ದುರ್ಗಾದೇವಿ ಮೆರವಣಿಗೆಯಲ್ಲಿ ಪುಂಡರ ಆವಾಜ್…ಗಲಾಟೆ ಬಿಡಿಸಲು ಬಂದ ಮುಖ್ಯಪೇದೆ ಮೇಲೆ ಹಲ್ಲೆ…12 ಮಂದಿ ವಿರುದ್ದ FIR…

ಉದಯಗಿರಿ ಠಾಣೆ ಮೇಲೆ ಕಲ್ಲು ಬೀಸಿದಂತೆ ಎನ್.ಆರ್.ಠಾಣೆಗೂ ಕಲ್ಲು ಹೊಡೀತೀವಿ…ದುರ್ಗಾದೇವಿ ಮೆರವಣಿಗೆಯಲ್ಲಿ ಪುಂಡರ ಆವಾಜ್…ಗಲಾಟೆ ಬಿಡಿಸಲು ಬಂದ ಮುಖ್ಯಪೇದೆ ಮೇಲೆ ಹಲ್ಲೆ…12 ಮಂದಿ ವಿರುದ್ದ FIR…

ಮೈಸೂರು,ಏ3,Tv10 ಕನ್ನಡ

ದುರ್ಗಾದೇವಿ ಮೆರವಣಿಗೆ ವೇಳೆ ಎರಡು ಯುವಕರ ಗುಂಪುಗಳ ನಡುವೆ ನಡೆಯುತ್ತಿದ್ದ ಗಲಾಟೆಯನ್ನ ಬಿಡಿಸಲು ಬಂದ ಮುಖ್ಯಪೇದೆ ಮೇಲೆ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಠಾಣೆಯ ಮೇಲೆ ಕಲ್ಲು ಹೊಡೆಯುವುದಾಗಿ ಧಂಕಿ ಹಾಕಿದ ಘಟನೆ ಎನ್.ಆರ್.ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದಲ್ಲಿ ನಡೆದಿದೆ.ಘಟನೆ ಸಂಭಂಧ ಎನ್.ಆರ್.ಪೊಲೀಸ್ ಠಾಣೆಯಲ್ಲಿ 12 ಮಂದಿ ವಿರುದ್ದ ಪ್ರಕರಣ ದಾಖಲಾಗಿದೆ.ಹಲ್ಲೆಗೊಳಗಾದ ಠಾಣೆಯ ಮುಖ್ಯಪೇದೆ ಮೋಹನ್ ರವರು ಪ್ರಕರಣ ದಾಖಲಿಸಿದ್ದಾರೆ.

ಯುಗಾದಿ ಹಬ್ಬದ ದಿನದಂದು ಗಾಂಧಿನಗರದ ಶ್ರೀ ದುರ್ಗಾದೇವಿ ದೇವಸ್ಥಾನದ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು.ಮೆರವಣಿಗೆ ಜೊತೆ ಸಾಗಲು ಎನ್.ಆರ್.ಠಾಣೆ ಪೊಲೀಸರನ್ನ ನಿಯೋಜಿಸಲಾಗಿತ್ತು.ಈ ಪೈಕಿ ಮುಖ್ಯಪೇದೆ ಮೋಹನ್ ಸಹ ಒಬ್ಬರು.ಮಧ್ಯರಾತ್ರಿ ವೇಳೆ ಗಾಂಧಿನಗರದ ಶಿವಯೋಗಿ 3 ನೇ ಮುಖ್ಯರಸ್ತೆ ಬಳಿ ಬರುವಾಗ ಎರಡು ಗುಂಪಿನ ಯುವಕರು ಪರಸ್ಪರ ಗಲಾಟೆ ಮಾಡಿಕೊಳ್ಳುತ್ತಿದ್ದರು.ಈ ವೇಳೆ ಮೋಹನ್ ರವರು ಜಗಳ ಬಿಡಿಸಲು ಬಂದಾಗ ಯುವಕರು ಗುಂಪು ತಿರುಗಿ ಬಿದ್ದಿದೆ.ಅವಾಚ್ಯಶಬ್ದಗಳಿಂದ ನಿಂದಿಸಿ ಸಮವಸ್ತ್ರವನ್ನ ಹಿಡಿದು ಎಳೆದಾಡಿ ಹಲ್ಲೆ ನಡೆಸಿದ್ದಲ್ಲದೆ. ಉದಯಗಿರಿ ಠಾಣೆ ಮೇಲೆ ಕಲ್ಲು ಎಸೆದಂತೆ ಎನ್.ಆರ್.ಠಾಣೆ ಮೇಲೂ ಕಲ್ಲು ಹೊಡೆಯುತ್ತೇವೆ ಎಂದು ವಾರ್ನಿಂಗ್ ನೀಡಿ ಧಂಕಿ ಹಾಕಿದ್ದಾರೆ.ಯುವಕರ ಗಪಿನ ನಡುವೆ ಸಿಲುಕಿ ಹಲ್ಲೆಗೆ ಒಳಗಾದ ಮೋಹನ್ ಸಹದ್ಯೋಗಿಗಳು ಹಾಗೂ ಕೆಲವು ಸ್ಥಳೀಯರ ನೆರವಿನಿಂದ ರಕ್ಷಿಸಲ್ಪಟ್ಟಿದ್ದಾರೆ.

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ನಡೆಸಿ ಠಾಣೆ ಮೇಲೆ ಕಲ್ಲು ಹೊಡೆಯುವುದಾಗಿ ವಾರ್ನಿಂಗ್ ಕೊಟ್ಟ ಮಾದೇಶ್,ಗಿರೀಶ್.ಆ.ಬ್ಲೇಡ್,ರವಿಕುಮಾರ್,ಕಿರಣ್.ಆ.ಬಾತು,ರಾಘವೇಂದ್ರ,ದಾದಾ,ಕೀರ್ತಿ,ನಾಗೇಂದ್ರ ಸೇರಿದಂತೆ 12 ಮಂದಿ ವಿರುದ್ದ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *