ಉದಯಗಿರಿ ಠಾಣೆ ಮೇಲೆ ಕಲ್ಲು ಬೀಸಿದಂತೆ ಎನ್.ಆರ್.ಠಾಣೆಗೂ ಕಲ್ಲು ಹೊಡೀತೀವಿ…ದುರ್ಗಾದೇವಿ ಮೆರವಣಿಗೆಯಲ್ಲಿ ಪುಂಡರ ಆವಾಜ್…ಗಲಾಟೆ ಬಿಡಿಸಲು ಬಂದ ಮುಖ್ಯಪೇದೆ ಮೇಲೆ ಹಲ್ಲೆ…12 ಮಂದಿ ವಿರುದ್ದ FIR…

ಉದಯಗಿರಿ ಠಾಣೆ ಮೇಲೆ ಕಲ್ಲು ಬೀಸಿದಂತೆ ಎನ್.ಆರ್.ಠಾಣೆಗೂ ಕಲ್ಲು ಹೊಡೀತೀವಿ…ದುರ್ಗಾದೇವಿ ಮೆರವಣಿಗೆಯಲ್ಲಿ ಪುಂಡರ ಆವಾಜ್…ಗಲಾಟೆ ಬಿಡಿಸಲು ಬಂದ ಮುಖ್ಯಪೇದೆ ಮೇಲೆ ಹಲ್ಲೆ…12 ಮಂದಿ ವಿರುದ್ದ FIR…

ಮೈಸೂರು,ಏ3,Tv10 ಕನ್ನಡ

ದುರ್ಗಾದೇವಿ ಮೆರವಣಿಗೆ ವೇಳೆ ಎರಡು ಯುವಕರ ಗುಂಪುಗಳ ನಡುವೆ ನಡೆಯುತ್ತಿದ್ದ ಗಲಾಟೆಯನ್ನ ಬಿಡಿಸಲು ಬಂದ ಮುಖ್ಯಪೇದೆ ಮೇಲೆ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಠಾಣೆಯ ಮೇಲೆ ಕಲ್ಲು ಹೊಡೆಯುವುದಾಗಿ ಧಂಕಿ ಹಾಕಿದ ಘಟನೆ ಎನ್.ಆರ್.ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದಲ್ಲಿ ನಡೆದಿದೆ.ಘಟನೆ ಸಂಭಂಧ ಎನ್.ಆರ್.ಪೊಲೀಸ್ ಠಾಣೆಯಲ್ಲಿ 12 ಮಂದಿ ವಿರುದ್ದ ಪ್ರಕರಣ ದಾಖಲಾಗಿದೆ.ಹಲ್ಲೆಗೊಳಗಾದ ಠಾಣೆಯ ಮುಖ್ಯಪೇದೆ ಮೋಹನ್ ರವರು ಪ್ರಕರಣ ದಾಖಲಿಸಿದ್ದಾರೆ.

ಯುಗಾದಿ ಹಬ್ಬದ ದಿನದಂದು ಗಾಂಧಿನಗರದ ಶ್ರೀ ದುರ್ಗಾದೇವಿ ದೇವಸ್ಥಾನದ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು.ಮೆರವಣಿಗೆ ಜೊತೆ ಸಾಗಲು ಎನ್.ಆರ್.ಠಾಣೆ ಪೊಲೀಸರನ್ನ ನಿಯೋಜಿಸಲಾಗಿತ್ತು.ಈ ಪೈಕಿ ಮುಖ್ಯಪೇದೆ ಮೋಹನ್ ಸಹ ಒಬ್ಬರು.ಮಧ್ಯರಾತ್ರಿ ವೇಳೆ ಗಾಂಧಿನಗರದ ಶಿವಯೋಗಿ 3 ನೇ ಮುಖ್ಯರಸ್ತೆ ಬಳಿ ಬರುವಾಗ ಎರಡು ಗುಂಪಿನ ಯುವಕರು ಪರಸ್ಪರ ಗಲಾಟೆ ಮಾಡಿಕೊಳ್ಳುತ್ತಿದ್ದರು.ಈ ವೇಳೆ ಮೋಹನ್ ರವರು ಜಗಳ ಬಿಡಿಸಲು ಬಂದಾಗ ಯುವಕರು ಗುಂಪು ತಿರುಗಿ ಬಿದ್ದಿದೆ.ಅವಾಚ್ಯಶಬ್ದಗಳಿಂದ ನಿಂದಿಸಿ ಸಮವಸ್ತ್ರವನ್ನ ಹಿಡಿದು ಎಳೆದಾಡಿ ಹಲ್ಲೆ ನಡೆಸಿದ್ದಲ್ಲದೆ. ಉದಯಗಿರಿ ಠಾಣೆ ಮೇಲೆ ಕಲ್ಲು ಎಸೆದಂತೆ ಎನ್.ಆರ್.ಠಾಣೆ ಮೇಲೂ ಕಲ್ಲು ಹೊಡೆಯುತ್ತೇವೆ ಎಂದು ವಾರ್ನಿಂಗ್ ನೀಡಿ ಧಂಕಿ ಹಾಕಿದ್ದಾರೆ.ಯುವಕರ ಗಪಿನ ನಡುವೆ ಸಿಲುಕಿ ಹಲ್ಲೆಗೆ ಒಳಗಾದ ಮೋಹನ್ ಸಹದ್ಯೋಗಿಗಳು ಹಾಗೂ ಕೆಲವು ಸ್ಥಳೀಯರ ನೆರವಿನಿಂದ ರಕ್ಷಿಸಲ್ಪಟ್ಟಿದ್ದಾರೆ.

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ನಡೆಸಿ ಠಾಣೆ ಮೇಲೆ ಕಲ್ಲು ಹೊಡೆಯುವುದಾಗಿ ವಾರ್ನಿಂಗ್ ಕೊಟ್ಟ ಮಾದೇಶ್,ಗಿರೀಶ್.ಆ.ಬ್ಲೇಡ್,ರವಿಕುಮಾರ್,ಕಿರಣ್.ಆ.ಬಾತು,ರಾಘವೇಂದ್ರ,ದಾದಾ,ಕೀರ್ತಿ,ನಾಗೇಂದ್ರ ಸೇರಿದಂತೆ 12 ಮಂದಿ ವಿರುದ್ದ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *