ಮೊದಲ ಪತ್ನಿ ಇದ್ದರೂ ಎರಡನೇ ಮದುವೆ ಮಾಡಿಕೊಂಡು ವಂಚನೆ…50 ಲಕ್ಷಕ್ಕೆ ಉಂಡೆನಾಮ…ಉಂಡೂಹೋದ ಕೊಂಡೂಹೋದ…

ಮೊದಲ ಪತ್ನಿ ಇದ್ದರೂ ಎರಡನೇ ಮದುವೆ ಮಾಡಿಕೊಂಡು ವಂಚನೆ…50 ಲಕ್ಷಕ್ಕೆ ಉಂಡೆನಾಮ…ಉಂಡೂಹೋದ ಕೊಂಡೂಹೋದ…

ಮೈಸೂರು,ಏ4,Tv10 ಕನ್ನಡ

ಮೊದಲ ಪತ್ನಿ ಇದ್ದರೂ ವಿಚ್ಛೇದನ ನೀಡಿರುವುದಾಗಿ ಫೇಕ್ ಡಾಕ್ಯುಮೆಂಟ್ ಕ್ರಿಯೇಟ್ ಮಾಡಿ ಎರಡನೇ ಮದುವೆಯಾಗಿ ಪತ್ನಿಗೆ 50 ಲಕ್ಷ ರೂ ವಂಚಿಸಿದ ಭೂಪ ಪರಾರಿಯಾದ ಘಟನೆ ಕುವೆಂಪುನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ವಂಚನೆಗೆ ಒಳಗಾದ ಪತ್ನಿ ರೋಜಾ ಎಂಬುವರು ಪ್ರಕರಣ ದಾಖಲಿಸಿದ್ದಾರೆ.ವಂಚಿಸಿದ ಖದೀಮ ಶರತ್ ರಾಮ್ ಇದೀಗ ತಲೆಮರೆಸಿಕೊಂಡಿದ್ದಾನೆ.

ಕುವೆಂಪುನಗರದಲ್ಲಿ ಲೇಡೀಸ್ ಪಿಜಿ ನಡೆಸುತ್ತಿರುವ ರೋಜಾ ಮೊದಲ ಪತಿಯಿಂದ ಕಾರಣಾಂತರದಿಂದ ವಿಚ್ಛೇದನ ಪಡೆದಿದ್ದಾರೆ.ಮಗನಿಗೆ ಆಸರೆಗಾಗಿ ಎರಡನೇ ಮದುವೆ ಮಾಡಿಕೊಳ್ಳಲು ನಿರ್ಧರಿಸಿ ಡೈವೋರ್ಸ್ ಮ್ಯಾಟ್ರಿಮೋನಿ ಆಪ್ ಮೂಲಕ ಯತ್ನಿಸಿದ್ದಾರೆ.ಆಗ ಕೇರಳಾ ರಾಜ್ಯದ ತ್ರಿಶೂರ್ ನ ಶರತ್ ರಾಮ್ ಪರಿಚಯವಾಗಿ ಮದುವೆ ಮಾಡಿಕೊಳ್ಳಲು ಒಪ್ಪಿದ್ದಾನೆ.ಅದ್ದೂರಿ ಮದುವೆ ಬದಲು ರಿಜಿಸ್ಟರ್ ಮದುವೆ ಮಾಡಿಕೊಳ್ಳಲು ಇಬ್ಬರೂ ಒಪ್ಪಿದ್ದಾರೆ.ಈ ವೇಳೆ ಮೊದಲ ಪತ್ನಿಯಿಂದ ವಿಚ್ಛೇದನ ಪಡೆದಿರುವುದಾಗಿ ಶರತ್ ರಾಮ್ ನ್ಯಾಯಾಲಯದ ಆದೇಶದ ಕೊಟ್ಟಿದ್ದಾನೆ.ಇದನ್ನ ನಂಬಿದ ರೋಜಾ ಮದುವೆಗೆ ಗ್ರೀನ್ ಸಿಗ್ನಲ್ ನೀಡಿದ್ದಲ್ಲದೆ ಆತ್ನ ಜೊತೆ ದೈಹಿಕ ಸಂಪರ್ಕವನ್ನೂ ಬೆಳೆಸಿದ್ದಾರೆ.ಮದುವೆ ವಿಚಾರ ಬಂದಾಗೆಲ್ಲ ಸಬೂಬುಗಳನ್ನ ಹೇಳಿಕೊಂಡು ಮುಂದಕ್ಕೆ ಹಾಕಿದ್ದಾನೆ.2022 ರಲ್ಲಿ ಪರಿಚಯವಾದ ನಂತರ ಶರತ್ ರಾಮ್ ಹಂತಹಂತವಾಗಿ 50 ಲಕ್ಷ ಹಣ ಪಡೆದಿದ್ದಾನೆ.ನಂತರ ಪಿಜಿ ಯಿಂದ ಬಂದ ಹಣಕ್ಕೂ ಪೀಡಿಸಿದ್ದಾನೆ.ಜೊತೆಗೆ ರೋಜಾ ಹೆಸರಲ್ಲಿ ಎರಡು ಕಂಪನಿಗಳನ್ನ ಆರಂಭಿಸಿ ಸಾರ್ವಜನಿಕರಿಂದ ಹಣ ಸಂಗ್ರಹಿಸಿ ವಂಚಿಸಿದ್ದಾನೆ.ಈತನ ವರ್ತನೆಯಿಂದ ಅನುಮಾನಗೊಂಡ ರೋಜಾ ಪರಿಶೀಲನೆ ನಡೆಸಿದಾಗ ವಿಚ್ಛೇದನ ಕಾಪಿ ಫೇಕ್ ಆಗಿರುವುದು ಖಚಿತವಾಗಿದೆ.ಅಲ್ಲದೆ ಕೇರಳಾದಲ್ಲಿ ವಾಸವಿರುವ ಮೊದಲ ಪತ್ನಿ ಜೊತೆ ಇನ್ನೂ ಸಂಪರ್ಕದಲ್ಲಿರುವುದು ಸಹ ಖಚಿತವಾಗಿದೆ.ಈ ಬಗ್ಗೆ ಪ್ರಶ್ನಿಸಿದಾಗ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾನೆಂದು ರೋಜಾ ಪ್ರಕರಣದಲ್ಲಿ ದಾಖಲಿಸಿದ್ದಾರೆ.ಈಗಾಗಲೇ ಈತನ ವಿರುದ್ದ ಹಲವಾರು ವಂಚನೆ ಪ್ರಕರಣಗಳಿರುವುದು ಸಹ ಬೆಳಕಿಗೆ ಬಂದಿರುವುದಾಗಿ ರೋಜಾ ಆರೋಪಿಸಿದ್ದಾರೆ.ಶರತ್ ರಾಮ್ ವಿರುದ್ದ ಪ್ರಕರಣ ದಾಖಲಿಸಿರುವ ರೋಜಾ ಇದೀಗ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *