ಮೊದಲ ಪತ್ನಿ ಇದ್ದರೂ ಎರಡನೇ ಮದುವೆ ಮಾಡಿಕೊಂಡು ವಂಚನೆ…50 ಲಕ್ಷಕ್ಕೆ ಉಂಡೆನಾಮ…ಉಂಡೂಹೋದ ಕೊಂಡೂಹೋದ…

ಮೊದಲ ಪತ್ನಿ ಇದ್ದರೂ ಎರಡನೇ ಮದುವೆ ಮಾಡಿಕೊಂಡು ವಂಚನೆ…50 ಲಕ್ಷಕ್ಕೆ ಉಂಡೆನಾಮ…ಉಂಡೂಹೋದ ಕೊಂಡೂಹೋದ…

ಮೈಸೂರು,ಏ4,Tv10 ಕನ್ನಡ

ಮೊದಲ ಪತ್ನಿ ಇದ್ದರೂ ವಿಚ್ಛೇದನ ನೀಡಿರುವುದಾಗಿ ಫೇಕ್ ಡಾಕ್ಯುಮೆಂಟ್ ಕ್ರಿಯೇಟ್ ಮಾಡಿ ಎರಡನೇ ಮದುವೆಯಾಗಿ ಪತ್ನಿಗೆ 50 ಲಕ್ಷ ರೂ ವಂಚಿಸಿದ ಭೂಪ ಪರಾರಿಯಾದ ಘಟನೆ ಕುವೆಂಪುನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ವಂಚನೆಗೆ ಒಳಗಾದ ಪತ್ನಿ ರೋಜಾ ಎಂಬುವರು ಪ್ರಕರಣ ದಾಖಲಿಸಿದ್ದಾರೆ.ವಂಚಿಸಿದ ಖದೀಮ ಶರತ್ ರಾಮ್ ಇದೀಗ ತಲೆಮರೆಸಿಕೊಂಡಿದ್ದಾನೆ.

ಕುವೆಂಪುನಗರದಲ್ಲಿ ಲೇಡೀಸ್ ಪಿಜಿ ನಡೆಸುತ್ತಿರುವ ರೋಜಾ ಮೊದಲ ಪತಿಯಿಂದ ಕಾರಣಾಂತರದಿಂದ ವಿಚ್ಛೇದನ ಪಡೆದಿದ್ದಾರೆ.ಮಗನಿಗೆ ಆಸರೆಗಾಗಿ ಎರಡನೇ ಮದುವೆ ಮಾಡಿಕೊಳ್ಳಲು ನಿರ್ಧರಿಸಿ ಡೈವೋರ್ಸ್ ಮ್ಯಾಟ್ರಿಮೋನಿ ಆಪ್ ಮೂಲಕ ಯತ್ನಿಸಿದ್ದಾರೆ.ಆಗ ಕೇರಳಾ ರಾಜ್ಯದ ತ್ರಿಶೂರ್ ನ ಶರತ್ ರಾಮ್ ಪರಿಚಯವಾಗಿ ಮದುವೆ ಮಾಡಿಕೊಳ್ಳಲು ಒಪ್ಪಿದ್ದಾನೆ.ಅದ್ದೂರಿ ಮದುವೆ ಬದಲು ರಿಜಿಸ್ಟರ್ ಮದುವೆ ಮಾಡಿಕೊಳ್ಳಲು ಇಬ್ಬರೂ ಒಪ್ಪಿದ್ದಾರೆ.ಈ ವೇಳೆ ಮೊದಲ ಪತ್ನಿಯಿಂದ ವಿಚ್ಛೇದನ ಪಡೆದಿರುವುದಾಗಿ ಶರತ್ ರಾಮ್ ನ್ಯಾಯಾಲಯದ ಆದೇಶದ ಕೊಟ್ಟಿದ್ದಾನೆ.ಇದನ್ನ ನಂಬಿದ ರೋಜಾ ಮದುವೆಗೆ ಗ್ರೀನ್ ಸಿಗ್ನಲ್ ನೀಡಿದ್ದಲ್ಲದೆ ಆತ್ನ ಜೊತೆ ದೈಹಿಕ ಸಂಪರ್ಕವನ್ನೂ ಬೆಳೆಸಿದ್ದಾರೆ.ಮದುವೆ ವಿಚಾರ ಬಂದಾಗೆಲ್ಲ ಸಬೂಬುಗಳನ್ನ ಹೇಳಿಕೊಂಡು ಮುಂದಕ್ಕೆ ಹಾಕಿದ್ದಾನೆ.2022 ರಲ್ಲಿ ಪರಿಚಯವಾದ ನಂತರ ಶರತ್ ರಾಮ್ ಹಂತಹಂತವಾಗಿ 50 ಲಕ್ಷ ಹಣ ಪಡೆದಿದ್ದಾನೆ.ನಂತರ ಪಿಜಿ ಯಿಂದ ಬಂದ ಹಣಕ್ಕೂ ಪೀಡಿಸಿದ್ದಾನೆ.ಜೊತೆಗೆ ರೋಜಾ ಹೆಸರಲ್ಲಿ ಎರಡು ಕಂಪನಿಗಳನ್ನ ಆರಂಭಿಸಿ ಸಾರ್ವಜನಿಕರಿಂದ ಹಣ ಸಂಗ್ರಹಿಸಿ ವಂಚಿಸಿದ್ದಾನೆ.ಈತನ ವರ್ತನೆಯಿಂದ ಅನುಮಾನಗೊಂಡ ರೋಜಾ ಪರಿಶೀಲನೆ ನಡೆಸಿದಾಗ ವಿಚ್ಛೇದನ ಕಾಪಿ ಫೇಕ್ ಆಗಿರುವುದು ಖಚಿತವಾಗಿದೆ.ಅಲ್ಲದೆ ಕೇರಳಾದಲ್ಲಿ ವಾಸವಿರುವ ಮೊದಲ ಪತ್ನಿ ಜೊತೆ ಇನ್ನೂ ಸಂಪರ್ಕದಲ್ಲಿರುವುದು ಸಹ ಖಚಿತವಾಗಿದೆ.ಈ ಬಗ್ಗೆ ಪ್ರಶ್ನಿಸಿದಾಗ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾನೆಂದು ರೋಜಾ ಪ್ರಕರಣದಲ್ಲಿ ದಾಖಲಿಸಿದ್ದಾರೆ.ಈಗಾಗಲೇ ಈತನ ವಿರುದ್ದ ಹಲವಾರು ವಂಚನೆ ಪ್ರಕರಣಗಳಿರುವುದು ಸಹ ಬೆಳಕಿಗೆ ಬಂದಿರುವುದಾಗಿ ರೋಜಾ ಆರೋಪಿಸಿದ್ದಾರೆ.ಶರತ್ ರಾಮ್ ವಿರುದ್ದ ಪ್ರಕರಣ ದಾಖಲಿಸಿರುವ ರೋಜಾ ಇದೀಗ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ…

Spread the love

Related post

ಆರ್.ಟಿ.ಐ.ಮಾಹಿತಿ ಪತ್ರಿಕೆ ಅಸ್ತಿತ್ವಕ್ಕೆ…ಭಾಷ್ಯಂ ಸ್ವಾಮೀಜಿ ರವರಿಂದ ಬಿಡುಗಡೆ…

ಆರ್.ಟಿ.ಐ.ಮಾಹಿತಿ ಪತ್ರಿಕೆ ಅಸ್ತಿತ್ವಕ್ಕೆ…ಭಾಷ್ಯಂ ಸ್ವಾಮೀಜಿ ರವರಿಂದ ಬಿಡುಗಡೆ…

ಮೈಸೂರು,ಜು7,Tv10 ಕನ್ನಡ ಮೈಸೂರಿನ ಯೋಗನರಸಿಂಹ ಸ್ವಾಮಿ ದೇವಾಲಯದಲ್ಲಿ ಇಂದು ಆರ್.ಟಿ.ಐ.ಮಾಹಿತಿ ಪತ್ರಿಕೆ ಬಿಡುಗಡೆ ಮಾಡಲಾಯಿತು.ದೇವಾಲಯದ ಸಂಸ್ಥಾಪಕರಾದ ಪ್ರೊ.ಭಾಷ್ಯಂ ಸ್ವಾಮೀಜಿ ರವರು ಬಿಡುಗಡೆ ಮಾಡಿದರು.ಈ ವೇಳೆ ದೇವಸ್ಥಾನದ ಆಡಳಿತಾಧಿಕಾರಿ ಶ್ರೀನಿವಾಸ್…
ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ ಮಹಿಳೆ ಮೇಲೆ FIR…

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ…

ಮೈಸೂರು,ಜು6,Tv10 ಕನ್ನಡ ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ರಾಪಿನ್ ಕಂಪನಿಗೆ ಸೇರಿದ…
ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…

Leave a Reply

Your email address will not be published. Required fields are marked *