ಮೈಸೂರು ಮೃಗಾಲಯದಲ್ಲಿ ಒರಾಂಗೂಟಾನ್ ಸಾವು…

ಮೈಸೂರು ಮೃಗಾಲಯದಲ್ಲಿ ಒರಾಂಗೂಟಾನ್ ಸಾವು…

ಮೈಸೂರು,ಏ4,Tv10 ಕನ್ನಡ

ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಒರಾಂಗೂಟನ್ ಮೃತಪಟ್ಟಿದೆ. ಸುಮಾರು 10 ವರ್ಷ 8 ತಿಂಗಳ ಮಿನ್ನಿ ಹೆಣ್ಣು ಸಾವನ್ನಪ್ಪಿದೆ.
ಪ್ರಾಣಿ ವಿನಿಮಯ ಕಾರ್ಯಕ್ರಮದಡಿ 2021 ರಲ್ಲಿ ಮಲೇಷಿಯಾ ಮೃಗಾಲಯದಿಂದ ಮಿನ್ನಿಯನ್ನು ಆಮದು ಮಾಡಿಕೊಂಡ ನಂತರ ಸುಮಾರು 4 ವರ್ಷಗಳ ಅವಧಿಯವರೆಗೆ ಮೈಸೂರು ಮೃಗಾಲಯದಲ್ಲಿ ಪ್ರದರ್ಶನಕ್ಕಿಡಲಾಗಿತ್ತು.
ಮಿನ್ನಿಯು ಶ್ವಾಸಕೋಶ ಸಮಸ್ಯೆ ಹಿನ್ನೆಲೆಯಲ್ಲಿ ಆಗಾಗ ಉಸಿರಾಟದ ತೊಂದರೆಯಿಂದ ಬಳಲುತಿತ್ತು. ಚಿಕಿತ್ಸೆ ಫಲಿಸದೆ ಮಿನ್ನಿ ನಿಧನ ಹೊಂದಿದೆ.ಮೈಸೂರು ಮೃಗಾಲಯದ ತಜ್ಞ ಪಶುವೈದ್ಯರಿಂದ ಮೃಗಾಲಯದ ಪರೀಕ್ಷಾ ಕೊಠಡಿಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.ಯುನೈಟೆಡ್ ಕಿಂಗ್‌ಡಮ್ ಮತ್ತು ಮಲೇಷಿಯಾ ದೇಶಗಳ ಪಶುವೈದ್ಯ ತಜ್ಞರ ಮಾರ್ಗದರ್ಶನ ಮತ್ತು ಬೆಂಬಲದೊಂದಿಗೆ ಮೈಸೂರು ಮೃಗಾಲಯದ ಪಶುವೈದ್ಯರ ತಂಡದ ನಿರಂತರ ಪ್ರಯತ್ನಗಳ ನಡುವೆಯೂ ಮಿನ್ನಿಯ ಆರೋಗ್ಯ ಗಂಭೀರವಾಗಿತ್ತು.
ಮೃಗಾಲಯವು ಮಿನ್ನಿಯ ಆರೋಗ್ಯ ಸುಧಾರಣೆಗೆ ಸಾಧ್ಯವಿರುವ ಎಲ್ಲಾ ಬಗೆಯ ಚಿಕಿತ್ಸಾ ವಿಧಾನಗಳನ್ನು ಅನುಸರಿಸಿರುವುದು ಮಾತ್ರವಲ್ಲದೆ ಮಿನ್ನಿಯ ಚೇತರಿಕೆಗೆ ತೀವ್ರ ನಿಗಾ ವಹಿಸಲಾಗಿತ್ತು ಎಂದು ಮೃಗಾಲಯದ ಪ್ರಕಟಣೆ ಸ್ಪಷ್ಟಪಡಿಸಿದೆ.ಮಿನ್ನಿಯ ಅನಾರೋಗ್ಯದ ಮೂಲ ಕಾರಣಗಳನ್ನು ಅರಿಯುವ ಉದ್ದೇಶದಿಂದ ಹೆಚ್ಚಿನ ತನಿಖೆಗಾಗಿ ಅದರ ಜೈವಿಕ ಮಾದರಿಗಳನ್ನು ಸುಧಾರಿತ ಪ್ರಯೋಗಾಲಯಗಳಿಗೆ ಪರೀಕ್ಷೆಗಾಗಿ ಕಳುಹಿಸಲಾಗಿದೆ ಹಾಗೂ ದೃಢೀಕೃತ ರೋಗ ನಿರ್ಣಯದ ವರದಿಗಾಗಿ ಕಾಯಲಾಗಿದೆ…

Spread the love

Related post

ಆರ್.ಟಿ.ಐ.ಮಾಹಿತಿ ಪತ್ರಿಕೆ ಅಸ್ತಿತ್ವಕ್ಕೆ…ಭಾಷ್ಯಂ ಸ್ವಾಮೀಜಿ ರವರಿಂದ ಬಿಡುಗಡೆ…

ಆರ್.ಟಿ.ಐ.ಮಾಹಿತಿ ಪತ್ರಿಕೆ ಅಸ್ತಿತ್ವಕ್ಕೆ…ಭಾಷ್ಯಂ ಸ್ವಾಮೀಜಿ ರವರಿಂದ ಬಿಡುಗಡೆ…

ಮೈಸೂರು,ಜು7,Tv10 ಕನ್ನಡ ಮೈಸೂರಿನ ಯೋಗನರಸಿಂಹ ಸ್ವಾಮಿ ದೇವಾಲಯದಲ್ಲಿ ಇಂದು ಆರ್.ಟಿ.ಐ.ಮಾಹಿತಿ ಪತ್ರಿಕೆ ಬಿಡುಗಡೆ ಮಾಡಲಾಯಿತು.ದೇವಾಲಯದ ಸಂಸ್ಥಾಪಕರಾದ ಪ್ರೊ.ಭಾಷ್ಯಂ ಸ್ವಾಮೀಜಿ ರವರು ಬಿಡುಗಡೆ ಮಾಡಿದರು.ಈ ವೇಳೆ ದೇವಸ್ಥಾನದ ಆಡಳಿತಾಧಿಕಾರಿ ಶ್ರೀನಿವಾಸ್…
ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ ಮಹಿಳೆ ಮೇಲೆ FIR…

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ…

ಮೈಸೂರು,ಜು6,Tv10 ಕನ್ನಡ ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ರಾಪಿನ್ ಕಂಪನಿಗೆ ಸೇರಿದ…
ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…

Leave a Reply

Your email address will not be published. Required fields are marked *