ಮೈಸೂರು ಮೃಗಾಲಯದಲ್ಲಿ ಒರಾಂಗೂಟಾನ್ ಸಾವು…

ಮೈಸೂರು ಮೃಗಾಲಯದಲ್ಲಿ ಒರಾಂಗೂಟಾನ್ ಸಾವು…

ಮೈಸೂರು,ಏ4,Tv10 ಕನ್ನಡ

ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಒರಾಂಗೂಟನ್ ಮೃತಪಟ್ಟಿದೆ. ಸುಮಾರು 10 ವರ್ಷ 8 ತಿಂಗಳ ಮಿನ್ನಿ ಹೆಣ್ಣು ಸಾವನ್ನಪ್ಪಿದೆ.
ಪ್ರಾಣಿ ವಿನಿಮಯ ಕಾರ್ಯಕ್ರಮದಡಿ 2021 ರಲ್ಲಿ ಮಲೇಷಿಯಾ ಮೃಗಾಲಯದಿಂದ ಮಿನ್ನಿಯನ್ನು ಆಮದು ಮಾಡಿಕೊಂಡ ನಂತರ ಸುಮಾರು 4 ವರ್ಷಗಳ ಅವಧಿಯವರೆಗೆ ಮೈಸೂರು ಮೃಗಾಲಯದಲ್ಲಿ ಪ್ರದರ್ಶನಕ್ಕಿಡಲಾಗಿತ್ತು.
ಮಿನ್ನಿಯು ಶ್ವಾಸಕೋಶ ಸಮಸ್ಯೆ ಹಿನ್ನೆಲೆಯಲ್ಲಿ ಆಗಾಗ ಉಸಿರಾಟದ ತೊಂದರೆಯಿಂದ ಬಳಲುತಿತ್ತು. ಚಿಕಿತ್ಸೆ ಫಲಿಸದೆ ಮಿನ್ನಿ ನಿಧನ ಹೊಂದಿದೆ.ಮೈಸೂರು ಮೃಗಾಲಯದ ತಜ್ಞ ಪಶುವೈದ್ಯರಿಂದ ಮೃಗಾಲಯದ ಪರೀಕ್ಷಾ ಕೊಠಡಿಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.ಯುನೈಟೆಡ್ ಕಿಂಗ್‌ಡಮ್ ಮತ್ತು ಮಲೇಷಿಯಾ ದೇಶಗಳ ಪಶುವೈದ್ಯ ತಜ್ಞರ ಮಾರ್ಗದರ್ಶನ ಮತ್ತು ಬೆಂಬಲದೊಂದಿಗೆ ಮೈಸೂರು ಮೃಗಾಲಯದ ಪಶುವೈದ್ಯರ ತಂಡದ ನಿರಂತರ ಪ್ರಯತ್ನಗಳ ನಡುವೆಯೂ ಮಿನ್ನಿಯ ಆರೋಗ್ಯ ಗಂಭೀರವಾಗಿತ್ತು.
ಮೃಗಾಲಯವು ಮಿನ್ನಿಯ ಆರೋಗ್ಯ ಸುಧಾರಣೆಗೆ ಸಾಧ್ಯವಿರುವ ಎಲ್ಲಾ ಬಗೆಯ ಚಿಕಿತ್ಸಾ ವಿಧಾನಗಳನ್ನು ಅನುಸರಿಸಿರುವುದು ಮಾತ್ರವಲ್ಲದೆ ಮಿನ್ನಿಯ ಚೇತರಿಕೆಗೆ ತೀವ್ರ ನಿಗಾ ವಹಿಸಲಾಗಿತ್ತು ಎಂದು ಮೃಗಾಲಯದ ಪ್ರಕಟಣೆ ಸ್ಪಷ್ಟಪಡಿಸಿದೆ.ಮಿನ್ನಿಯ ಅನಾರೋಗ್ಯದ ಮೂಲ ಕಾರಣಗಳನ್ನು ಅರಿಯುವ ಉದ್ದೇಶದಿಂದ ಹೆಚ್ಚಿನ ತನಿಖೆಗಾಗಿ ಅದರ ಜೈವಿಕ ಮಾದರಿಗಳನ್ನು ಸುಧಾರಿತ ಪ್ರಯೋಗಾಲಯಗಳಿಗೆ ಪರೀಕ್ಷೆಗಾಗಿ ಕಳುಹಿಸಲಾಗಿದೆ ಹಾಗೂ ದೃಢೀಕೃತ ರೋಗ ನಿರ್ಣಯದ ವರದಿಗಾಗಿ ಕಾಯಲಾಗಿದೆ…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *