ಮೈಸೂರು ಮೃಗಾಲಯದಲ್ಲಿ ಒರಾಂಗೂಟಾನ್ ಸಾವು…

ಮೈಸೂರು ಮೃಗಾಲಯದಲ್ಲಿ ಒರಾಂಗೂಟಾನ್ ಸಾವು…

ಮೈಸೂರು,ಏ4,Tv10 ಕನ್ನಡ

ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಒರಾಂಗೂಟನ್ ಮೃತಪಟ್ಟಿದೆ. ಸುಮಾರು 10 ವರ್ಷ 8 ತಿಂಗಳ ಮಿನ್ನಿ ಹೆಣ್ಣು ಸಾವನ್ನಪ್ಪಿದೆ.
ಪ್ರಾಣಿ ವಿನಿಮಯ ಕಾರ್ಯಕ್ರಮದಡಿ 2021 ರಲ್ಲಿ ಮಲೇಷಿಯಾ ಮೃಗಾಲಯದಿಂದ ಮಿನ್ನಿಯನ್ನು ಆಮದು ಮಾಡಿಕೊಂಡ ನಂತರ ಸುಮಾರು 4 ವರ್ಷಗಳ ಅವಧಿಯವರೆಗೆ ಮೈಸೂರು ಮೃಗಾಲಯದಲ್ಲಿ ಪ್ರದರ್ಶನಕ್ಕಿಡಲಾಗಿತ್ತು.
ಮಿನ್ನಿಯು ಶ್ವಾಸಕೋಶ ಸಮಸ್ಯೆ ಹಿನ್ನೆಲೆಯಲ್ಲಿ ಆಗಾಗ ಉಸಿರಾಟದ ತೊಂದರೆಯಿಂದ ಬಳಲುತಿತ್ತು. ಚಿಕಿತ್ಸೆ ಫಲಿಸದೆ ಮಿನ್ನಿ ನಿಧನ ಹೊಂದಿದೆ.ಮೈಸೂರು ಮೃಗಾಲಯದ ತಜ್ಞ ಪಶುವೈದ್ಯರಿಂದ ಮೃಗಾಲಯದ ಪರೀಕ್ಷಾ ಕೊಠಡಿಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.ಯುನೈಟೆಡ್ ಕಿಂಗ್‌ಡಮ್ ಮತ್ತು ಮಲೇಷಿಯಾ ದೇಶಗಳ ಪಶುವೈದ್ಯ ತಜ್ಞರ ಮಾರ್ಗದರ್ಶನ ಮತ್ತು ಬೆಂಬಲದೊಂದಿಗೆ ಮೈಸೂರು ಮೃಗಾಲಯದ ಪಶುವೈದ್ಯರ ತಂಡದ ನಿರಂತರ ಪ್ರಯತ್ನಗಳ ನಡುವೆಯೂ ಮಿನ್ನಿಯ ಆರೋಗ್ಯ ಗಂಭೀರವಾಗಿತ್ತು.
ಮೃಗಾಲಯವು ಮಿನ್ನಿಯ ಆರೋಗ್ಯ ಸುಧಾರಣೆಗೆ ಸಾಧ್ಯವಿರುವ ಎಲ್ಲಾ ಬಗೆಯ ಚಿಕಿತ್ಸಾ ವಿಧಾನಗಳನ್ನು ಅನುಸರಿಸಿರುವುದು ಮಾತ್ರವಲ್ಲದೆ ಮಿನ್ನಿಯ ಚೇತರಿಕೆಗೆ ತೀವ್ರ ನಿಗಾ ವಹಿಸಲಾಗಿತ್ತು ಎಂದು ಮೃಗಾಲಯದ ಪ್ರಕಟಣೆ ಸ್ಪಷ್ಟಪಡಿಸಿದೆ.ಮಿನ್ನಿಯ ಅನಾರೋಗ್ಯದ ಮೂಲ ಕಾರಣಗಳನ್ನು ಅರಿಯುವ ಉದ್ದೇಶದಿಂದ ಹೆಚ್ಚಿನ ತನಿಖೆಗಾಗಿ ಅದರ ಜೈವಿಕ ಮಾದರಿಗಳನ್ನು ಸುಧಾರಿತ ಪ್ರಯೋಗಾಲಯಗಳಿಗೆ ಪರೀಕ್ಷೆಗಾಗಿ ಕಳುಹಿಸಲಾಗಿದೆ ಹಾಗೂ ದೃಢೀಕೃತ ರೋಗ ನಿರ್ಣಯದ ವರದಿಗಾಗಿ ಕಾಯಲಾಗಿದೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *