ಮೈಸೂರು ಮೃಗಾಲಯದಲ್ಲಿ ಒರಾಂಗೂಟಾನ್ ಸಾವು…

ಮೈಸೂರು ಮೃಗಾಲಯದಲ್ಲಿ ಒರಾಂಗೂಟಾನ್ ಸಾವು…

ಮೈಸೂರು,ಏ4,Tv10 ಕನ್ನಡ

ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಒರಾಂಗೂಟನ್ ಮೃತಪಟ್ಟಿದೆ. ಸುಮಾರು 10 ವರ್ಷ 8 ತಿಂಗಳ ಮಿನ್ನಿ ಹೆಣ್ಣು ಸಾವನ್ನಪ್ಪಿದೆ.
ಪ್ರಾಣಿ ವಿನಿಮಯ ಕಾರ್ಯಕ್ರಮದಡಿ 2021 ರಲ್ಲಿ ಮಲೇಷಿಯಾ ಮೃಗಾಲಯದಿಂದ ಮಿನ್ನಿಯನ್ನು ಆಮದು ಮಾಡಿಕೊಂಡ ನಂತರ ಸುಮಾರು 4 ವರ್ಷಗಳ ಅವಧಿಯವರೆಗೆ ಮೈಸೂರು ಮೃಗಾಲಯದಲ್ಲಿ ಪ್ರದರ್ಶನಕ್ಕಿಡಲಾಗಿತ್ತು.
ಮಿನ್ನಿಯು ಶ್ವಾಸಕೋಶ ಸಮಸ್ಯೆ ಹಿನ್ನೆಲೆಯಲ್ಲಿ ಆಗಾಗ ಉಸಿರಾಟದ ತೊಂದರೆಯಿಂದ ಬಳಲುತಿತ್ತು. ಚಿಕಿತ್ಸೆ ಫಲಿಸದೆ ಮಿನ್ನಿ ನಿಧನ ಹೊಂದಿದೆ.ಮೈಸೂರು ಮೃಗಾಲಯದ ತಜ್ಞ ಪಶುವೈದ್ಯರಿಂದ ಮೃಗಾಲಯದ ಪರೀಕ್ಷಾ ಕೊಠಡಿಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.ಯುನೈಟೆಡ್ ಕಿಂಗ್‌ಡಮ್ ಮತ್ತು ಮಲೇಷಿಯಾ ದೇಶಗಳ ಪಶುವೈದ್ಯ ತಜ್ಞರ ಮಾರ್ಗದರ್ಶನ ಮತ್ತು ಬೆಂಬಲದೊಂದಿಗೆ ಮೈಸೂರು ಮೃಗಾಲಯದ ಪಶುವೈದ್ಯರ ತಂಡದ ನಿರಂತರ ಪ್ರಯತ್ನಗಳ ನಡುವೆಯೂ ಮಿನ್ನಿಯ ಆರೋಗ್ಯ ಗಂಭೀರವಾಗಿತ್ತು.
ಮೃಗಾಲಯವು ಮಿನ್ನಿಯ ಆರೋಗ್ಯ ಸುಧಾರಣೆಗೆ ಸಾಧ್ಯವಿರುವ ಎಲ್ಲಾ ಬಗೆಯ ಚಿಕಿತ್ಸಾ ವಿಧಾನಗಳನ್ನು ಅನುಸರಿಸಿರುವುದು ಮಾತ್ರವಲ್ಲದೆ ಮಿನ್ನಿಯ ಚೇತರಿಕೆಗೆ ತೀವ್ರ ನಿಗಾ ವಹಿಸಲಾಗಿತ್ತು ಎಂದು ಮೃಗಾಲಯದ ಪ್ರಕಟಣೆ ಸ್ಪಷ್ಟಪಡಿಸಿದೆ.ಮಿನ್ನಿಯ ಅನಾರೋಗ್ಯದ ಮೂಲ ಕಾರಣಗಳನ್ನು ಅರಿಯುವ ಉದ್ದೇಶದಿಂದ ಹೆಚ್ಚಿನ ತನಿಖೆಗಾಗಿ ಅದರ ಜೈವಿಕ ಮಾದರಿಗಳನ್ನು ಸುಧಾರಿತ ಪ್ರಯೋಗಾಲಯಗಳಿಗೆ ಪರೀಕ್ಷೆಗಾಗಿ ಕಳುಹಿಸಲಾಗಿದೆ ಹಾಗೂ ದೃಢೀಕೃತ ರೋಗ ನಿರ್ಣಯದ ವರದಿಗಾಗಿ ಕಾಯಲಾಗಿದೆ…

Spread the love

Related post

ಸಿಸಿಬಿ ಪೊಲೀಸರ ಕಾರ್ಯಾಚರಣೆ…ನಾಲ್ವರ ಬಂಧನ…10.40 ಲಕ್ಷ ಮೌಲ್ಯದ ಎಂಡಿಎಂಎ ಒಂದು ಕಾರ್ ವಶ…

ಸಿಸಿಬಿ ಪೊಲೀಸರ ಕಾರ್ಯಾಚರಣೆ…ನಾಲ್ವರ ಬಂಧನ…10.40 ಲಕ್ಷ ಮೌಲ್ಯದ ಎಂಡಿಎಂಎ ಒಂದು ಕಾರ್…

ಸಿಸಿಬಿ ಪೊಲೀಸರ ಕಾರ್ಯಾಚರಣೆ…ನಾಲ್ವರ ಬಂಧನ…10.40 ಲಕ್ಷ ಮೌಲ್ಯದ ಎಂಡಿಎಂಎ ಒಂದು ಕಾರ್ ವಶ… ಮೈಸೂರು,ಫೆ23,Tv10 ಕನ್ನಡ ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆಯಲ್ಲಿ ನಾಲ್ವರು ಆರೋಪಿಗಳನ್ನ ವಶಕ್ಕೆ ಪಡೆಯಲಾಗಿದ್ದು ಬಂಧಿತರಿಂದ…
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ! ಆಲ್ಫಾ ಅಂದರೇನೇ ಡಾಮಿನೇಶನ್. ಈ ವಾರ ತೆರೆಕಂಡ ಆಲ್ಫಾ‌ ಚಿತ್ರದಲ್ಲಿ ಡಾಮಿನೇಟ್ ಮಾಡುತ್ತಿರುವವರೇ ಚಿತ್ರದ ನಾಯಕ ಹೇಮಂತ್ ಕುಮಾರ್. ಹೇಮಂತ್…
ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ…

Leave a Reply

Your email address will not be published. Required fields are marked *