ಉಘೇ ಮಾದೇಗೌಡ್ರು ಪ್ರಚಾರ ವಾಹನಕ್ಕೆ ಚಾಲನೆ…ಮೈಸೂರು ಮಿತ್ರ ಪತ್ರಿಕೆ ಸಂಸ್ಥಾಪಕ ಕೆ.ಬಿ.ಗಣಪತಿ ರಿಂದ ಹಸಿರು ನಿಶಾನೆ…

ಉಘೇ ಮಾದೇಗೌಡ್ರು ಪ್ರಚಾರ ವಾಹನಕ್ಕೆ ಚಾಲನೆ…ಮೈಸೂರು ಮಿತ್ರ ಪತ್ರಿಕೆ ಸಂಸ್ಥಾಪಕ ಕೆ.ಬಿ.ಗಣಪತಿ ರಿಂದ ಹಸಿರು ನಿಶಾನೆ…

ಮೈಸೂರು,ಏ8,Tv10 ಕನ್ನಡ

CITB ಮಾಜಿ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಡಿ.ಮಾದೇಗೌಡರವರಿಗೆ ಹಮ್ಮಿಕೊಳ್ಳಲಾದ ಅಭಿನಂದನಾ ಕಾರ್ಯಕ್ರಮದ ಪ್ರಚಾರ ವಾಹನಕ್ಕೆ ಮೈಸೂರು ಮಿತ್ರ ದಿನಪತ್ರಿಕೆ ಸಂಸ್ಥಾಪಕರಾದ ಕೆ.ಬಿ.ಗಣಪತಿ ರವರು ಚಾಲನೆ ನೀಡಿದರು.ವಿಜಯನಗರದಲ್ಲಿರುವ ಶ್ರೀ ಯೋಗಾನರಸಿಂಹ ಸ್ವಾಮಿ ದೇವಾಲಯದ ಸನ್ನಿಧಿಯಲ್ಲಿ ಶ್ರೀ ಭಾಷ್ಯಂ ಸ್ವಾಮೀಜಿ ರವರ ಸಾನಿಧ್ಯದಲ್ಲಿ ಹಸಿರು ನಿಶಾನೆ ತೋರಿದರು.ಡಿ.ಮಾದೇಗೌಡರ ಅಭಿನಂದನಾ ಸಮಿತಿಯು ಕಲಾಮಂದಿರದಲ್ಲಿ ಏಪ್ರಿಲ್ 13 ರಂದು ಕಾರ್ಯಕ್ರಮ ಹಮ್ಮಿಕೊಂಡಿದೆ.ಮೈಸೂರು ನಗರದ ಅಭಿವೃದ್ದಿಗಾಗಿ ಶ್ರಮಿಸಿದ ಮಾದೇಗೌಡರ ಕಾರ್ಯ ಪ್ರಶಂಸಿಸಿ ಉಘೇ ಮಾದೇಗೌಡ್ರು ಎಂಬ ಘೋಷ ವಾಕ್ಯದಡಿ ಸಮಾರಂಭ ಹಮ್ಮಿಕೊಳ್ಳಲಾಗಿದೆ.ಅರ್ಹ ಫಲಾನುಭವಿಗಳಿಗೆ ಮನೆಗಳನ್ನ ಮಂಜೂರು ಮಾಡಿ ಸಾಕಷ್ಟು ಜನಮನ್ನಣೆ ಗಳಿಸಿದ ಹಿನ್ನಲೆ CITB ವತಿಯಿಂದ ನಿರ್ಮಾಣವಾದ ಆಶ್ರಯ ಮನೆಗಳ ಮಾದರಿಯಂತೆ ಪ್ರಚಾರ ವಾಹನವನ್ನ ವಿಶೇಷವಾಗಿ ಸಿದ್ದಪಡಿಸಲಾಗಿದೆ.

ನಂತರ ಮಾತನಾಡಿದ ಕೆಬಿಜ ರವರು ಡಿ.ಮಾದೇಗೌಡ್ರು ತಮ್ಮ ಆದರ್ಶ ಜೀವನದ ಮೂಲಕ ಮೈಸೂರಿನ ಆದರ್ಶ ವ್ಯಕ್ತಿಯಾಗಿದ್ದಾರೆ. ಈ ಹಿಂದೆ ಮುಖ್ಯಮಂತ್ರಿ ರಾಮಕೃಷ್ಣ ಹೆಗ್ಗಡೆಯವರು ರಾಜಕಾರಣಿಗಳು ಮೌಲ್ಯ ಆಧಾರಿತ ರಾಜಕೀಯ ಮಾಡಬೇಕು ಎಂದು ಹೇಳಿದಂತೆ ಮಾದೇಗೌಡರು ಜೀವನ ಮಾಡುತ್ತಿದ್ದಾರೆ ಎಂದರು.
ಸಿಐಟಿಬಿಯ ಸದಸ್ಯರಾಗಿದ್ದ ಕೆಂಪೇಗೌಡರು ವಿಶ್ವಮಾನವ ಜೋಡಿ ರಸ್ತೆ ನಿರ್ಮಾಣ ಮಾಡಿದರೆ, ಬಿ.ಎನ್.ಕೆಂಗೇಗೌಡರು ದೇವರಾಜ ಅರಸು ರಸ್ತೆ, ಸರಸ್ವತಿಪುರಂ ನಿರ್ಮಾಣ ಮಾಡಿದ್ದಾರೆ. ಆದರೆ ಮಾದೇಗೌಡರು, ವಿಜಯನಗರ, ರಾಮಕೃಷ್ಣನಗರ, ವಿವೇಕಾನಂದ ನಗರ, ಹೆಬ್ಬಾಳ್ ಬಡಾವಣೆಯನ್ನು ನಿರ್ಮಾಣ ಮಾಡುವ ಮೂಲಕ ಎಲ್ಲರಿಗಿಂತಲೂ ಹೆಚ್ಚು ಕೆಲಸ ಮಾಡಿದ್ದಾರೆ. ಹಾಗೇ ರಾಮಕೃಷ್ಣನಗರದ ಪರಮಹಂಸ ವೃತ್ತ ನಿರ್ಮಾಣವಾಗಲು ಅವರೇ ಕಾರಣ ಎಂದು ತಿಳಿಸಿದರು.

ಇದೇ ವೇಳೆ ಮಾದೇಗೌಡರು ಮಾತನಾಡಿ, ಭರತ ಖಂಡದಲ್ಲಿ ಕಿಂಚಿತ್ತು ಉಪಕಾರ ಮಾಡಿದರೂ ಸ್ಮರಿಸುತ್ತಾರೆ. ಅದರಂತೆ ಜನರು ನಾನು ಮಾಡಿದ ಸಣ್ಣ ಸೇವೆಯನ್ನು ಇಂದಿಗೂ ಸ್ಮರಿಸುತ್ತಾರೆ. ಅದನ್ನು ಕಂಡಾಗ ಬಹಳ ಸಂತೋಷವಾಗುತ್ತದೆ ಎಂದರು. ಗಾಂಧೀಜಿ ಅವರು ಹೇಳಿದಂತೆ ವಸತಿ, ಊಟ, ಶಿಕ್ಷಣ ಮುಖ್ಯವಾಗಿ ದೇಶದ ಪ್ರತಿಯೊಬ್ಬ ನಾಗರೀಕರಿಗೂ ಒದಗಿಸಬೇಕು. ಅದರೆ ಇಂದು ವಸತಿ ನಿರೀಕ್ಷಿತ ಮಟ್ಟದಲ್ಲಿ ಸಿಗುತ್ತಿಲ್ಲ. ಅಂದು ರಾಮಕೃಷ್ಣ ಹೆಗ್ಗಡೆ ಅವರು ನೀಡಿದ ಪ್ರೇರಣೆಯಿಂದ ನಾನು ಅಷ್ಟು ಕೆಲಸ ಮಾಡಲು ಸಾಧ್ಯವಾಯಿತು ಎಂದು ಸ್ಮರಿಸಿದರು.

ನಂತರ ಯೋಗನರಸಿಂಹಸ್ವಾಮಿ ದೇವಾಲಯದ ಆಡಳಿತಾಧಿಕಾರಿ ಶ್ರೀನಿವಾಸ್ ಮಾತನಾಡಿ, ಇಂದು ಪ್ರಚಾರ ಮಾಡಲು ಸಾಕಷ್ಟು ಆಯಾಮಗಳಿ. ಆದರೂ ವಿಶೇಷ ವಾಹನ ಮೂಲಕ ಪ್ರಚಾರ ಮಾಡುತ್ತಿರುವುದು ಸಂತಸದ ವಿಚಾರವಾಗಿದೆ. ಈ ವಾಹನ ಮೈಸೂರಿನ ಪ್ರತಿಯೊಂದು ಬಡಾವಣೆಗೆ ತಲುಪಬೇಕು. ಶಿಕ್ಷಕರು ವಿದ್ಯಾರ್ಥಿಗಳ ನಡುವೇ ಹೇಗೆ ಬಾಂದವ್ಯವಿದೆ ಹಾಗೇ ಆಶ್ರಯ ಮನೆಗಳ ಫಲಾನುಭಾವಿಗಳು ಕಾರ್ಯಕ್ರಮಕ್ಕೆ ಬಂದು ಕೃತಜ್ಞತೆ ಸಲ್ಲಿಸಿ ಎಂದರು

ಕಾರ್ಯಕ್ರಮದಲ್ಲಿ ಅಭಿನಂದನಾ ಸಮಿತಿ ಅಧ್ಯಕ್ಷ ಲಯನ್ ಎಂ.ವಿ.ದೇವಿಪ್ರಸಾದ್, ಪಾಲಿಕೆ ಮಾಜಿ ಸದಸ್ಯ ಪ್ರಶಾಂತ್ ಗೌಡ, ಜಿಲ್ಲಾ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ.ನಾರಾಯಣಗೌಡ, ವಿಜಯನಗರ ಮಂಜು, ಕುಮಾರ್ ಗೌಡ, ಕಾಂಗ್ರೆಸ್ ಮುಖಂಡ ಮಂಚೇಗೌಡನ ಕೊಪ್ಪಲು ರವಿ ಮತ್ತಿತರರು ಉಪಸ್ಥಿತರಿದ್ದರು…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *