ಉಘೇ ಮಾದೇಗೌಡ್ರು ಪ್ರಚಾರ ವಾಹನಕ್ಕೆ ಚಾಲನೆ…ಮೈಸೂರು ಮಿತ್ರ ಪತ್ರಿಕೆ ಸಂಸ್ಥಾಪಕ ಕೆ.ಬಿ.ಗಣಪತಿ ರಿಂದ ಹಸಿರು ನಿಶಾನೆ…

ಉಘೇ ಮಾದೇಗೌಡ್ರು ಪ್ರಚಾರ ವಾಹನಕ್ಕೆ ಚಾಲನೆ…ಮೈಸೂರು ಮಿತ್ರ ಪತ್ರಿಕೆ ಸಂಸ್ಥಾಪಕ ಕೆ.ಬಿ.ಗಣಪತಿ ರಿಂದ ಹಸಿರು ನಿಶಾನೆ…

ಮೈಸೂರು,ಏ8,Tv10 ಕನ್ನಡ

CITB ಮಾಜಿ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಡಿ.ಮಾದೇಗೌಡರವರಿಗೆ ಹಮ್ಮಿಕೊಳ್ಳಲಾದ ಅಭಿನಂದನಾ ಕಾರ್ಯಕ್ರಮದ ಪ್ರಚಾರ ವಾಹನಕ್ಕೆ ಮೈಸೂರು ಮಿತ್ರ ದಿನಪತ್ರಿಕೆ ಸಂಸ್ಥಾಪಕರಾದ ಕೆ.ಬಿ.ಗಣಪತಿ ರವರು ಚಾಲನೆ ನೀಡಿದರು.ವಿಜಯನಗರದಲ್ಲಿರುವ ಶ್ರೀ ಯೋಗಾನರಸಿಂಹ ಸ್ವಾಮಿ ದೇವಾಲಯದ ಸನ್ನಿಧಿಯಲ್ಲಿ ಶ್ರೀ ಭಾಷ್ಯಂ ಸ್ವಾಮೀಜಿ ರವರ ಸಾನಿಧ್ಯದಲ್ಲಿ ಹಸಿರು ನಿಶಾನೆ ತೋರಿದರು.ಡಿ.ಮಾದೇಗೌಡರ ಅಭಿನಂದನಾ ಸಮಿತಿಯು ಕಲಾಮಂದಿರದಲ್ಲಿ ಏಪ್ರಿಲ್ 13 ರಂದು ಕಾರ್ಯಕ್ರಮ ಹಮ್ಮಿಕೊಂಡಿದೆ.ಮೈಸೂರು ನಗರದ ಅಭಿವೃದ್ದಿಗಾಗಿ ಶ್ರಮಿಸಿದ ಮಾದೇಗೌಡರ ಕಾರ್ಯ ಪ್ರಶಂಸಿಸಿ ಉಘೇ ಮಾದೇಗೌಡ್ರು ಎಂಬ ಘೋಷ ವಾಕ್ಯದಡಿ ಸಮಾರಂಭ ಹಮ್ಮಿಕೊಳ್ಳಲಾಗಿದೆ.ಅರ್ಹ ಫಲಾನುಭವಿಗಳಿಗೆ ಮನೆಗಳನ್ನ ಮಂಜೂರು ಮಾಡಿ ಸಾಕಷ್ಟು ಜನಮನ್ನಣೆ ಗಳಿಸಿದ ಹಿನ್ನಲೆ CITB ವತಿಯಿಂದ ನಿರ್ಮಾಣವಾದ ಆಶ್ರಯ ಮನೆಗಳ ಮಾದರಿಯಂತೆ ಪ್ರಚಾರ ವಾಹನವನ್ನ ವಿಶೇಷವಾಗಿ ಸಿದ್ದಪಡಿಸಲಾಗಿದೆ.

ನಂತರ ಮಾತನಾಡಿದ ಕೆಬಿಜ ರವರು ಡಿ.ಮಾದೇಗೌಡ್ರು ತಮ್ಮ ಆದರ್ಶ ಜೀವನದ ಮೂಲಕ ಮೈಸೂರಿನ ಆದರ್ಶ ವ್ಯಕ್ತಿಯಾಗಿದ್ದಾರೆ. ಈ ಹಿಂದೆ ಮುಖ್ಯಮಂತ್ರಿ ರಾಮಕೃಷ್ಣ ಹೆಗ್ಗಡೆಯವರು ರಾಜಕಾರಣಿಗಳು ಮೌಲ್ಯ ಆಧಾರಿತ ರಾಜಕೀಯ ಮಾಡಬೇಕು ಎಂದು ಹೇಳಿದಂತೆ ಮಾದೇಗೌಡರು ಜೀವನ ಮಾಡುತ್ತಿದ್ದಾರೆ ಎಂದರು.
ಸಿಐಟಿಬಿಯ ಸದಸ್ಯರಾಗಿದ್ದ ಕೆಂಪೇಗೌಡರು ವಿಶ್ವಮಾನವ ಜೋಡಿ ರಸ್ತೆ ನಿರ್ಮಾಣ ಮಾಡಿದರೆ, ಬಿ.ಎನ್.ಕೆಂಗೇಗೌಡರು ದೇವರಾಜ ಅರಸು ರಸ್ತೆ, ಸರಸ್ವತಿಪುರಂ ನಿರ್ಮಾಣ ಮಾಡಿದ್ದಾರೆ. ಆದರೆ ಮಾದೇಗೌಡರು, ವಿಜಯನಗರ, ರಾಮಕೃಷ್ಣನಗರ, ವಿವೇಕಾನಂದ ನಗರ, ಹೆಬ್ಬಾಳ್ ಬಡಾವಣೆಯನ್ನು ನಿರ್ಮಾಣ ಮಾಡುವ ಮೂಲಕ ಎಲ್ಲರಿಗಿಂತಲೂ ಹೆಚ್ಚು ಕೆಲಸ ಮಾಡಿದ್ದಾರೆ. ಹಾಗೇ ರಾಮಕೃಷ್ಣನಗರದ ಪರಮಹಂಸ ವೃತ್ತ ನಿರ್ಮಾಣವಾಗಲು ಅವರೇ ಕಾರಣ ಎಂದು ತಿಳಿಸಿದರು.

ಇದೇ ವೇಳೆ ಮಾದೇಗೌಡರು ಮಾತನಾಡಿ, ಭರತ ಖಂಡದಲ್ಲಿ ಕಿಂಚಿತ್ತು ಉಪಕಾರ ಮಾಡಿದರೂ ಸ್ಮರಿಸುತ್ತಾರೆ. ಅದರಂತೆ ಜನರು ನಾನು ಮಾಡಿದ ಸಣ್ಣ ಸೇವೆಯನ್ನು ಇಂದಿಗೂ ಸ್ಮರಿಸುತ್ತಾರೆ. ಅದನ್ನು ಕಂಡಾಗ ಬಹಳ ಸಂತೋಷವಾಗುತ್ತದೆ ಎಂದರು. ಗಾಂಧೀಜಿ ಅವರು ಹೇಳಿದಂತೆ ವಸತಿ, ಊಟ, ಶಿಕ್ಷಣ ಮುಖ್ಯವಾಗಿ ದೇಶದ ಪ್ರತಿಯೊಬ್ಬ ನಾಗರೀಕರಿಗೂ ಒದಗಿಸಬೇಕು. ಅದರೆ ಇಂದು ವಸತಿ ನಿರೀಕ್ಷಿತ ಮಟ್ಟದಲ್ಲಿ ಸಿಗುತ್ತಿಲ್ಲ. ಅಂದು ರಾಮಕೃಷ್ಣ ಹೆಗ್ಗಡೆ ಅವರು ನೀಡಿದ ಪ್ರೇರಣೆಯಿಂದ ನಾನು ಅಷ್ಟು ಕೆಲಸ ಮಾಡಲು ಸಾಧ್ಯವಾಯಿತು ಎಂದು ಸ್ಮರಿಸಿದರು.

ನಂತರ ಯೋಗನರಸಿಂಹಸ್ವಾಮಿ ದೇವಾಲಯದ ಆಡಳಿತಾಧಿಕಾರಿ ಶ್ರೀನಿವಾಸ್ ಮಾತನಾಡಿ, ಇಂದು ಪ್ರಚಾರ ಮಾಡಲು ಸಾಕಷ್ಟು ಆಯಾಮಗಳಿ. ಆದರೂ ವಿಶೇಷ ವಾಹನ ಮೂಲಕ ಪ್ರಚಾರ ಮಾಡುತ್ತಿರುವುದು ಸಂತಸದ ವಿಚಾರವಾಗಿದೆ. ಈ ವಾಹನ ಮೈಸೂರಿನ ಪ್ರತಿಯೊಂದು ಬಡಾವಣೆಗೆ ತಲುಪಬೇಕು. ಶಿಕ್ಷಕರು ವಿದ್ಯಾರ್ಥಿಗಳ ನಡುವೇ ಹೇಗೆ ಬಾಂದವ್ಯವಿದೆ ಹಾಗೇ ಆಶ್ರಯ ಮನೆಗಳ ಫಲಾನುಭಾವಿಗಳು ಕಾರ್ಯಕ್ರಮಕ್ಕೆ ಬಂದು ಕೃತಜ್ಞತೆ ಸಲ್ಲಿಸಿ ಎಂದರು

ಕಾರ್ಯಕ್ರಮದಲ್ಲಿ ಅಭಿನಂದನಾ ಸಮಿತಿ ಅಧ್ಯಕ್ಷ ಲಯನ್ ಎಂ.ವಿ.ದೇವಿಪ್ರಸಾದ್, ಪಾಲಿಕೆ ಮಾಜಿ ಸದಸ್ಯ ಪ್ರಶಾಂತ್ ಗೌಡ, ಜಿಲ್ಲಾ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ.ನಾರಾಯಣಗೌಡ, ವಿಜಯನಗರ ಮಂಜು, ಕುಮಾರ್ ಗೌಡ, ಕಾಂಗ್ರೆಸ್ ಮುಖಂಡ ಮಂಚೇಗೌಡನ ಕೊಪ್ಪಲು ರವಿ ಮತ್ತಿತರರು ಉಪಸ್ಥಿತರಿದ್ದರು…

Spread the love

Related post

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ… ಬೆಂಗಳೂರು,ಜ22,Tv10 ಕನ್ನಡ ಮುಡಾ ಮಾಜಿ ಆಯುಕ್ತ GT ದಿನೇಶ್…
ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ… ಮೈಸೂರು,ಜ22,Tv10 ಕನ್ನಡ ಅಯೋಧ್ಯೆಯ ಭವ್ಯ ಮಂದಿರದಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆಯಾಗಿ ಎರಡು ವರ್ಷಗಳು ಪೂರೈಸಿದ ಐತಿಹಾಸಿಕ…
ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…

Leave a Reply

Your email address will not be published. Required fields are marked *