ಜೋಳ ಹಾಕುವ ವಿಚಾರದಲ್ಲಿ ಹೊಡಿಬಡಿ…ಚಾಕುವಿನಿಂದ ಇರಿತ…5 ಮಂದಿ ವಿರುದ್ದ FIR…

ಜೋಳ ಹಾಕುವ ವಿಚಾರದಲ್ಲಿ ಹೊಡಿಬಡಿ…ಚಾಕುವಿನಿಂದ ಇರಿತ…5 ಮಂದಿ ವಿರುದ್ದ FIR…

ಹುಣಸೂರು,ಏ11,

ಜೋಳು ಬಿಡುವ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಹೊಡೆದಾಟ ನಡೆದ ಘಟನೆ ಹುಣಸೂರು ತಾಲೂಕು ಹರಳಹಳ್ಳಿ ಗ್ರಾಮದಲ್ಲಿ ನಡೆದಿದೆ.ಈ ವೇಳೆ ವ್ಯಕ್ತಿಗೆ ಚಾಕುವಿನಿಂದ ಇರಿಯಲಾಗಿದೆ.ಘಟನೆ ಸಂಭಂಧ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 5 ಮಂದಿ ವಿರುದ್ದ ಪ್ರಕರಣ ದಾಖಲಾಗಿದೆ.

ಮಹೇಶ್ ಎಂಬುವರಿಗೆ ಚಾಕುವಿನಿಂದ ಇರಿಯಲಾಗಿದೆ.ಹುಣಸೂರು ಸರ್ಕಾರಿ ಆಸ್ಪತ್ರೆಯಲ್ಲಿ ಮಹೇಶ್ ಚಿಕಿತ್ಸೆ ಪಡೆಯುತ್ತಿದ್ದಾರೆ.ಹರಳಹಳ್ಳಿ ಗ್ರಾಮ ಸರ್ವೆ ನಂ.12 ರ 5 ಎಕ್ರೆ ಜಮೀನಿನಲ್ಲಿ ಮಹೇಶ್ ರವರು ಜೋಳ ಹಾಕಲು ಉಳುಮೆ ಮಾಡಿ ಸಿದ್ದತೆ ಮಾಡಿಕೊಂಡಿದ್ದರು.ಈ ವೇಳೆ ಭೈರೇಗೌಡ,ತೇಜಸ್ವಿನಿ,ರಂಜಿತ್,ರೇಣುಕಾ ಹಾಗೂ ಪುಟ್ಟಲಕ್ಷಮ್ಮ ರವರು ಜಮೀನಿಗೆ ಬಂದು ಜೋಳ ಹಾಕಿದ್ದಾರೆ.ಇದನ್ನ ಪ್ರಶ್ನಿಸಿದಾಗ ಜಗಳ ಶುರುವಾಗಿ ಹೊಡೆದಾಟಕ್ಕೆ ನಾಂದಿಯಾಗಿದೆ.ಈ ವೇಳೆ ರಂಜಿತ್ ಚಾಕುವಿನಿಂದ ಮಹೇಶ್ ಗೆ ಇರಿದಿದ್ದಾನೆ.ಬಿಡಿಸಲು ಬಂದ ಮಹೇಶ್ ಪತ್ನಿ ಪದ್ಮ,ಮಕ್ಕಳಾದ ದಿವ್ಯ,ಕಾವ್ಯ,ಅಕ್ಕ ಛಾಯ ರವರ ಮೇಲೂ ಹಲ್ಲೆ ನಡೆಸಿದ್ದಾರೆ.ಕ್ಷುಲ್ಲಕ ಕಾರಣಕ್ಕೆ ಗಲಾಟೆ ಮಾಡಿ ಚಾಕುವಿನಿಂದ ಇರಿದು ಕೊಲೆ ಬೆದರಿಕೆ ಹಾಕಿದ ಭೇರೇಗೌಡ,ತೇಜಸ್ವಿನಿ,ರಂಜಿತ್,ರೇಣುಕಾ,ಪುಟ್ಟಲಕ್ಷಮ್ಮ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಮಹೇಶ್ FIR ದಾಖಲಿಸಿದ್ದಾರೆ…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *