ವೃದ್ದ ಮಹಿಳೆ ಕೈಕಾಲು ಕಟ್ಟಿಹಾಕಿ ಚಿನ್ನಾಭರಣ ದೋಚಿದ ಖದೀಮರು…ಅಪರಿಚಿತ ಯುವಕ,ಯುವತಿಯಿಂದ ಕೃತ್ಯ…ಹಾಡುಹಗಲೇ ಹಲ್ಲೆ ನಡೆಸಿ ದರೋಡೆ…

ವೃದ್ದ ಮಹಿಳೆ ಕೈಕಾಲು ಕಟ್ಟಿಹಾಕಿ ಚಿನ್ನಾಭರಣ ದೋಚಿದ ಖದೀಮರು…ಅಪರಿಚಿತ ಯುವಕ,ಯುವತಿಯಿಂದ ಕೃತ್ಯ…ಹಾಡುಹಗಲೇ ಹಲ್ಲೆ ನಡೆಸಿ ದರೋಡೆ…

ಸಾಲಿಗ್ರಾಮ,ಏ16,Tv10 ಕನ್ನಡ

ಹಾಡುಹಗಲೇ ಅಪರಿಚಿತ ಯುವಕ ಹಾಗೂ ಯುವತಿ ಮನೆಗೆ ಪ್ರವೇಶಿಸಿ ಲಗ್ನಪತ್ರಿಕೆ ಕೊಡುವ ನೆಪದಲ್ಲಿ ವೃದ್ದೆಯ ಕೈಕಾಲು ಕಟ್ಟಿಹಾಕಿ ಹಲ್ಲೆ ನಡೆಸಿ 4 ಲಕ್ಷ ಮೌಲ್ಯದ 50 ಚಿನ್ನದ ಸರ ದರೋಡೆ ಮಾಡಿ ಪರಾರಿಯಾದ ಘಟನೆ ಕೆ.ಆರ್.ನಗರ ತಾಲೂಕು ಸಾಲಿಗ್ರಾಮದ ಹರದನಹಳ್ಳಿ ಗ್ರಾಮದಲ್ಲಿ ನಡೆದಿದೆ.ಶೈಲಾ(76) ಎಂಬ ವೃದ್ದ ಮಹಿಳೆಯನ್ನ ಕಟ್ಟಿಹಾಕಿ ಹಲ್ಲೆ ನಡೆಸಿ ಕೃತ್ಯವೆಸಗಲಾಗಿದೆ.ಅಪರಿಚಿತ ಯುವಕ ಹಾಗೂ ಯುವತಿ ವಿರುದ್ದ ವೃದ್ದ ಮಹಿಳೆಯ ಸಂಭಂಧಿಕರಾದ ಅನುರಾಗ್ ಅರಸ್ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ನಿನ್ನೆ ಮಧ್ಯಾಹ್ನ ಮನೆಯಲ್ಲಿ ಶೈಲಾ ರವರು ಒಬ್ಬಂಟಿಯಾಗಿದ್ದರು.ಈ ಸಮಯ ಬಳಸಿಕೊಂಡ ಖದೀಮ ಜೋಡಿ ಮದುವೆ ಲಗ್ನಪತ್ರಿಕೆ ಕೊಡುವ ನೆಪದಲ್ಲಿ ಪ್ರವೇಶಿಸಿದೆ.ನೀರು ಬೇಕು ಎಂದು ಖದೀಮರು ಕೇಳಿದ್ದಾರೆ.ಶೈಲಾ ರವರು ಟೀ ಮಾಡಲು ಒಳಗೆ ತೆರಳಿದ್ದಾರೆ.ಈ ವೇಳೆ ಖದೀಮ ಜೋಡಿ ಶೈಲಾ ರವರ ಮೇಲೆ ಹಲ್ಲೆ ನಡೆಸಿ ಕೈಕಾಲು ಕಟ್ಟಿಹಾಕಿ ಚಿನ್ನದ ಸರ ಕಿತ್ತಿದ್ದಾರೆ.ಅಲ್ಲದೆ ಬಕವಂತವಾಗಿ ಬೀರು ಬೀಗವನ್ನ ಪಡೆದು ಮತ್ತಷ್ಟು ಚಿನ್ನಾಭರಣಕ್ಕಾಗಿ ಹುಡುಕಾಡಿ ಪರಾರಿಯಾಗಿದ್ದಾರೆ.ಅನುರಾಗ್ ಅರಸ್ ರವರು ಮನೆಗೆ ಬಂದಾಗ ಗಾಯಗೊಂಡ ಶೈಲಾರಿಗೆ ಶುಶ್ರೂಷೆ ಮಾಡಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.ಈ ಸಂಭಂಧ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಅಪರಿಚಿತ ಖದೀಮ ಜೋಡಿ ವಿರುದ್ದ ದರೋಡೆ ಪ್ರಕರಣ ದಾಖಲಾಗಿದೆ.ಘಟನೆ ನಡೆದ ಸ್ಥಳಕ್ಕೆ ಎಸ್ಪಿ ವಿಷ್ಣುವರ್ಧನ್,ಅಡಿಷನಲ್ ಎಸ್ಪಿ ಮಲ್ಲಿಕ್ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಸ್ಥಳಕ್ಕೆ ಬೆರಳು ಮುದ್ರಾ ಘಟಕ ಹಾಗೂ ಶ್ವಾನದಳ ಸಹ ಭೇಟಿ ನೀಡಿ ಪರಿಶೀಲನೆ ನಡೆಸಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *