ವೃದ್ದ ಮಹಿಳೆ ಕೈಕಾಲು ಕಟ್ಟಿಹಾಕಿ ಚಿನ್ನಾಭರಣ ದೋಚಿದ ಖದೀಮರು…ಅಪರಿಚಿತ ಯುವಕ,ಯುವತಿಯಿಂದ ಕೃತ್ಯ…ಹಾಡುಹಗಲೇ ಹಲ್ಲೆ ನಡೆಸಿ ದರೋಡೆ…

ವೃದ್ದ ಮಹಿಳೆ ಕೈಕಾಲು ಕಟ್ಟಿಹಾಕಿ ಚಿನ್ನಾಭರಣ ದೋಚಿದ ಖದೀಮರು…ಅಪರಿಚಿತ ಯುವಕ,ಯುವತಿಯಿಂದ ಕೃತ್ಯ…ಹಾಡುಹಗಲೇ ಹಲ್ಲೆ ನಡೆಸಿ ದರೋಡೆ…

ಸಾಲಿಗ್ರಾಮ,ಏ16,Tv10 ಕನ್ನಡ

ಹಾಡುಹಗಲೇ ಅಪರಿಚಿತ ಯುವಕ ಹಾಗೂ ಯುವತಿ ಮನೆಗೆ ಪ್ರವೇಶಿಸಿ ಲಗ್ನಪತ್ರಿಕೆ ಕೊಡುವ ನೆಪದಲ್ಲಿ ವೃದ್ದೆಯ ಕೈಕಾಲು ಕಟ್ಟಿಹಾಕಿ ಹಲ್ಲೆ ನಡೆಸಿ 4 ಲಕ್ಷ ಮೌಲ್ಯದ 50 ಚಿನ್ನದ ಸರ ದರೋಡೆ ಮಾಡಿ ಪರಾರಿಯಾದ ಘಟನೆ ಕೆ.ಆರ್.ನಗರ ತಾಲೂಕು ಸಾಲಿಗ್ರಾಮದ ಹರದನಹಳ್ಳಿ ಗ್ರಾಮದಲ್ಲಿ ನಡೆದಿದೆ.ಶೈಲಾ(76) ಎಂಬ ವೃದ್ದ ಮಹಿಳೆಯನ್ನ ಕಟ್ಟಿಹಾಕಿ ಹಲ್ಲೆ ನಡೆಸಿ ಕೃತ್ಯವೆಸಗಲಾಗಿದೆ.ಅಪರಿಚಿತ ಯುವಕ ಹಾಗೂ ಯುವತಿ ವಿರುದ್ದ ವೃದ್ದ ಮಹಿಳೆಯ ಸಂಭಂಧಿಕರಾದ ಅನುರಾಗ್ ಅರಸ್ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ನಿನ್ನೆ ಮಧ್ಯಾಹ್ನ ಮನೆಯಲ್ಲಿ ಶೈಲಾ ರವರು ಒಬ್ಬಂಟಿಯಾಗಿದ್ದರು.ಈ ಸಮಯ ಬಳಸಿಕೊಂಡ ಖದೀಮ ಜೋಡಿ ಮದುವೆ ಲಗ್ನಪತ್ರಿಕೆ ಕೊಡುವ ನೆಪದಲ್ಲಿ ಪ್ರವೇಶಿಸಿದೆ.ನೀರು ಬೇಕು ಎಂದು ಖದೀಮರು ಕೇಳಿದ್ದಾರೆ.ಶೈಲಾ ರವರು ಟೀ ಮಾಡಲು ಒಳಗೆ ತೆರಳಿದ್ದಾರೆ.ಈ ವೇಳೆ ಖದೀಮ ಜೋಡಿ ಶೈಲಾ ರವರ ಮೇಲೆ ಹಲ್ಲೆ ನಡೆಸಿ ಕೈಕಾಲು ಕಟ್ಟಿಹಾಕಿ ಚಿನ್ನದ ಸರ ಕಿತ್ತಿದ್ದಾರೆ.ಅಲ್ಲದೆ ಬಕವಂತವಾಗಿ ಬೀರು ಬೀಗವನ್ನ ಪಡೆದು ಮತ್ತಷ್ಟು ಚಿನ್ನಾಭರಣಕ್ಕಾಗಿ ಹುಡುಕಾಡಿ ಪರಾರಿಯಾಗಿದ್ದಾರೆ.ಅನುರಾಗ್ ಅರಸ್ ರವರು ಮನೆಗೆ ಬಂದಾಗ ಗಾಯಗೊಂಡ ಶೈಲಾರಿಗೆ ಶುಶ್ರೂಷೆ ಮಾಡಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.ಈ ಸಂಭಂಧ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಅಪರಿಚಿತ ಖದೀಮ ಜೋಡಿ ವಿರುದ್ದ ದರೋಡೆ ಪ್ರಕರಣ ದಾಖಲಾಗಿದೆ.ಘಟನೆ ನಡೆದ ಸ್ಥಳಕ್ಕೆ ಎಸ್ಪಿ ವಿಷ್ಣುವರ್ಧನ್,ಅಡಿಷನಲ್ ಎಸ್ಪಿ ಮಲ್ಲಿಕ್ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಸ್ಥಳಕ್ಕೆ ಬೆರಳು ಮುದ್ರಾ ಘಟಕ ಹಾಗೂ ಶ್ವಾನದಳ ಸಹ ಭೇಟಿ ನೀಡಿ ಪರಿಶೀಲನೆ ನಡೆಸಿದೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *