ವೃದ್ದ ಮಹಿಳೆ ಕೈಕಾಲು ಕಟ್ಟಿಹಾಕಿ ಚಿನ್ನಾಭರಣ ದೋಚಿದ ಖದೀಮರು…ಅಪರಿಚಿತ ಯುವಕ,ಯುವತಿಯಿಂದ ಕೃತ್ಯ…ಹಾಡುಹಗಲೇ ಹಲ್ಲೆ ನಡೆಸಿ ದರೋಡೆ…

ವೃದ್ದ ಮಹಿಳೆ ಕೈಕಾಲು ಕಟ್ಟಿಹಾಕಿ ಚಿನ್ನಾಭರಣ ದೋಚಿದ ಖದೀಮರು…ಅಪರಿಚಿತ ಯುವಕ,ಯುವತಿಯಿಂದ ಕೃತ್ಯ…ಹಾಡುಹಗಲೇ ಹಲ್ಲೆ ನಡೆಸಿ ದರೋಡೆ…

ಸಾಲಿಗ್ರಾಮ,ಏ16,Tv10 ಕನ್ನಡ

ಹಾಡುಹಗಲೇ ಅಪರಿಚಿತ ಯುವಕ ಹಾಗೂ ಯುವತಿ ಮನೆಗೆ ಪ್ರವೇಶಿಸಿ ಲಗ್ನಪತ್ರಿಕೆ ಕೊಡುವ ನೆಪದಲ್ಲಿ ವೃದ್ದೆಯ ಕೈಕಾಲು ಕಟ್ಟಿಹಾಕಿ ಹಲ್ಲೆ ನಡೆಸಿ 4 ಲಕ್ಷ ಮೌಲ್ಯದ 50 ಚಿನ್ನದ ಸರ ದರೋಡೆ ಮಾಡಿ ಪರಾರಿಯಾದ ಘಟನೆ ಕೆ.ಆರ್.ನಗರ ತಾಲೂಕು ಸಾಲಿಗ್ರಾಮದ ಹರದನಹಳ್ಳಿ ಗ್ರಾಮದಲ್ಲಿ ನಡೆದಿದೆ.ಶೈಲಾ(76) ಎಂಬ ವೃದ್ದ ಮಹಿಳೆಯನ್ನ ಕಟ್ಟಿಹಾಕಿ ಹಲ್ಲೆ ನಡೆಸಿ ಕೃತ್ಯವೆಸಗಲಾಗಿದೆ.ಅಪರಿಚಿತ ಯುವಕ ಹಾಗೂ ಯುವತಿ ವಿರುದ್ದ ವೃದ್ದ ಮಹಿಳೆಯ ಸಂಭಂಧಿಕರಾದ ಅನುರಾಗ್ ಅರಸ್ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ನಿನ್ನೆ ಮಧ್ಯಾಹ್ನ ಮನೆಯಲ್ಲಿ ಶೈಲಾ ರವರು ಒಬ್ಬಂಟಿಯಾಗಿದ್ದರು.ಈ ಸಮಯ ಬಳಸಿಕೊಂಡ ಖದೀಮ ಜೋಡಿ ಮದುವೆ ಲಗ್ನಪತ್ರಿಕೆ ಕೊಡುವ ನೆಪದಲ್ಲಿ ಪ್ರವೇಶಿಸಿದೆ.ನೀರು ಬೇಕು ಎಂದು ಖದೀಮರು ಕೇಳಿದ್ದಾರೆ.ಶೈಲಾ ರವರು ಟೀ ಮಾಡಲು ಒಳಗೆ ತೆರಳಿದ್ದಾರೆ.ಈ ವೇಳೆ ಖದೀಮ ಜೋಡಿ ಶೈಲಾ ರವರ ಮೇಲೆ ಹಲ್ಲೆ ನಡೆಸಿ ಕೈಕಾಲು ಕಟ್ಟಿಹಾಕಿ ಚಿನ್ನದ ಸರ ಕಿತ್ತಿದ್ದಾರೆ.ಅಲ್ಲದೆ ಬಕವಂತವಾಗಿ ಬೀರು ಬೀಗವನ್ನ ಪಡೆದು ಮತ್ತಷ್ಟು ಚಿನ್ನಾಭರಣಕ್ಕಾಗಿ ಹುಡುಕಾಡಿ ಪರಾರಿಯಾಗಿದ್ದಾರೆ.ಅನುರಾಗ್ ಅರಸ್ ರವರು ಮನೆಗೆ ಬಂದಾಗ ಗಾಯಗೊಂಡ ಶೈಲಾರಿಗೆ ಶುಶ್ರೂಷೆ ಮಾಡಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.ಈ ಸಂಭಂಧ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಅಪರಿಚಿತ ಖದೀಮ ಜೋಡಿ ವಿರುದ್ದ ದರೋಡೆ ಪ್ರಕರಣ ದಾಖಲಾಗಿದೆ.ಘಟನೆ ನಡೆದ ಸ್ಥಳಕ್ಕೆ ಎಸ್ಪಿ ವಿಷ್ಣುವರ್ಧನ್,ಅಡಿಷನಲ್ ಎಸ್ಪಿ ಮಲ್ಲಿಕ್ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಸ್ಥಳಕ್ಕೆ ಬೆರಳು ಮುದ್ರಾ ಘಟಕ ಹಾಗೂ ಶ್ವಾನದಳ ಸಹ ಭೇಟಿ ನೀಡಿ ಪರಿಶೀಲನೆ ನಡೆಸಿದೆ…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *