ವೃದ್ದ ಮಹಿಳೆ ಕೈಕಾಲು ಕಟ್ಟಿಹಾಕಿ ಚಿನ್ನಾಭರಣ ದೋಚಿದ ಖದೀಮರು…ಅಪರಿಚಿತ ಯುವಕ,ಯುವತಿಯಿಂದ ಕೃತ್ಯ…ಹಾಡುಹಗಲೇ ಹಲ್ಲೆ ನಡೆಸಿ ದರೋಡೆ…

ವೃದ್ದ ಮಹಿಳೆ ಕೈಕಾಲು ಕಟ್ಟಿಹಾಕಿ ಚಿನ್ನಾಭರಣ ದೋಚಿದ ಖದೀಮರು…ಅಪರಿಚಿತ ಯುವಕ,ಯುವತಿಯಿಂದ ಕೃತ್ಯ…ಹಾಡುಹಗಲೇ ಹಲ್ಲೆ ನಡೆಸಿ ದರೋಡೆ…

ಸಾಲಿಗ್ರಾಮ,ಏ16,Tv10 ಕನ್ನಡ

ಹಾಡುಹಗಲೇ ಅಪರಿಚಿತ ಯುವಕ ಹಾಗೂ ಯುವತಿ ಮನೆಗೆ ಪ್ರವೇಶಿಸಿ ಲಗ್ನಪತ್ರಿಕೆ ಕೊಡುವ ನೆಪದಲ್ಲಿ ವೃದ್ದೆಯ ಕೈಕಾಲು ಕಟ್ಟಿಹಾಕಿ ಹಲ್ಲೆ ನಡೆಸಿ 4 ಲಕ್ಷ ಮೌಲ್ಯದ 50 ಚಿನ್ನದ ಸರ ದರೋಡೆ ಮಾಡಿ ಪರಾರಿಯಾದ ಘಟನೆ ಕೆ.ಆರ್.ನಗರ ತಾಲೂಕು ಸಾಲಿಗ್ರಾಮದ ಹರದನಹಳ್ಳಿ ಗ್ರಾಮದಲ್ಲಿ ನಡೆದಿದೆ.ಶೈಲಾ(76) ಎಂಬ ವೃದ್ದ ಮಹಿಳೆಯನ್ನ ಕಟ್ಟಿಹಾಕಿ ಹಲ್ಲೆ ನಡೆಸಿ ಕೃತ್ಯವೆಸಗಲಾಗಿದೆ.ಅಪರಿಚಿತ ಯುವಕ ಹಾಗೂ ಯುವತಿ ವಿರುದ್ದ ವೃದ್ದ ಮಹಿಳೆಯ ಸಂಭಂಧಿಕರಾದ ಅನುರಾಗ್ ಅರಸ್ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ನಿನ್ನೆ ಮಧ್ಯಾಹ್ನ ಮನೆಯಲ್ಲಿ ಶೈಲಾ ರವರು ಒಬ್ಬಂಟಿಯಾಗಿದ್ದರು.ಈ ಸಮಯ ಬಳಸಿಕೊಂಡ ಖದೀಮ ಜೋಡಿ ಮದುವೆ ಲಗ್ನಪತ್ರಿಕೆ ಕೊಡುವ ನೆಪದಲ್ಲಿ ಪ್ರವೇಶಿಸಿದೆ.ನೀರು ಬೇಕು ಎಂದು ಖದೀಮರು ಕೇಳಿದ್ದಾರೆ.ಶೈಲಾ ರವರು ಟೀ ಮಾಡಲು ಒಳಗೆ ತೆರಳಿದ್ದಾರೆ.ಈ ವೇಳೆ ಖದೀಮ ಜೋಡಿ ಶೈಲಾ ರವರ ಮೇಲೆ ಹಲ್ಲೆ ನಡೆಸಿ ಕೈಕಾಲು ಕಟ್ಟಿಹಾಕಿ ಚಿನ್ನದ ಸರ ಕಿತ್ತಿದ್ದಾರೆ.ಅಲ್ಲದೆ ಬಕವಂತವಾಗಿ ಬೀರು ಬೀಗವನ್ನ ಪಡೆದು ಮತ್ತಷ್ಟು ಚಿನ್ನಾಭರಣಕ್ಕಾಗಿ ಹುಡುಕಾಡಿ ಪರಾರಿಯಾಗಿದ್ದಾರೆ.ಅನುರಾಗ್ ಅರಸ್ ರವರು ಮನೆಗೆ ಬಂದಾಗ ಗಾಯಗೊಂಡ ಶೈಲಾರಿಗೆ ಶುಶ್ರೂಷೆ ಮಾಡಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.ಈ ಸಂಭಂಧ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಅಪರಿಚಿತ ಖದೀಮ ಜೋಡಿ ವಿರುದ್ದ ದರೋಡೆ ಪ್ರಕರಣ ದಾಖಲಾಗಿದೆ.ಘಟನೆ ನಡೆದ ಸ್ಥಳಕ್ಕೆ ಎಸ್ಪಿ ವಿಷ್ಣುವರ್ಧನ್,ಅಡಿಷನಲ್ ಎಸ್ಪಿ ಮಲ್ಲಿಕ್ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಸ್ಥಳಕ್ಕೆ ಬೆರಳು ಮುದ್ರಾ ಘಟಕ ಹಾಗೂ ಶ್ವಾನದಳ ಸಹ ಭೇಟಿ ನೀಡಿ ಪರಿಶೀಲನೆ ನಡೆಸಿದೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *